ರೋಣ ತಹಸೀಲ್ದಾರ್ ಮೇಲೆ ಹಲ್ಲೆಗೆ ಆಕ್ರೋಶ

KannadaprabhaNewsNetwork |  
Published : Jan 28, 2026, 03:00 AM IST
27 ರೋಣ 1. ರೋಣ ತಹಶಿಲ್ದಾರ ನಾಗರಾಜ.ಕೆ ಅವರ ಮೇಲೆ ಹಲ್ಲೆ ನಡೆದಿರುವದನ್ನು ಖಂಡಿಸಿ ರೋಣ ತಾಲೂಕು ಸರ್ಕಾರಿ ನೌಕರರ ಸಂಘ ವತಿಯಿಂದ ತಹಶಿಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ, ಸರ್ಕಾರಿ ಮುಖ್ಯ ಕಾರ್ಯದರ್ಶಿಗಳಿಗ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಭಾನುವಾರ ರಾತ್ರಿ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ತಹಸೀಲ್ದಾರ್ ನಾಗರಾಜ ಕೆ. ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದು ಖಂಡನೀಯ.

ರೋಣ: ತಹಸೀಲ್ದಾರ್ ನಾಗರಾಜ ಕೆ. ಅವರ ಮೇಲೆ ಭಾನುವಾರ ಜರುಗಿದ ಹಲ್ಲೆ ಖಂಡಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಘಟಕದ ವತಿಯಿಂದ ಮೌನ ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿ ಹಾಗೂ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎಸ್.ಜಿ. ದಾನಪ್ಪಗೌಡ್ರ ಮಾತನಾಡಿ, ಕಾರ್ಯಾಂಗದ ಭಾಗವಾಗಿರುವ ಸರ್ಕಾರಿ ನೌಕರರು ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದು, ಸರ್ಕಾರದ ನೀತಿ ಧೋರಣೆಗಳನ್ನು ಜಾರಿಗೆ ತರುವಲ್ಲಿ ಸರ್ಕಾರದ ಯೋಜನೆಗಳನ್ನು ಪ್ರಜೆಗಳಿಗೆ ತಲುಪಿಸುವಲ್ಲಿ ನಿತ್ಯ ಕಾರ್ಯನಿರ್ವಹಿಸುತ್ತಾರೆ. ನೆರೆ ಹಾವಳಿ, ಅತಿವೃಷ್ಟಿ, ಅನಾವೃಷ್ಟಿ, ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಸೇರಿದಂತೆ ನೈಸರ್ಗಿಕ ವಿಕೋಪಗಳ ವೇಳೆಯಲ್ಲಿಯೂ ಹಗಲಿರುಲು ಕಾರ್ಯನಿರ್ವಹಿಸುವ ಸರ್ಕಾರಿ ನೌಕರಿಗೆ ತಾಲೂಕಿನಲ್ಲಿ ಭದ್ರತೆ ಇಲ್ಲದಾಗಿದೆ. ಭಾನುವಾರ ರಾತ್ರಿ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ತಹಸೀಲ್ದಾರ್ ನಾಗರಾಜ ಕೆ. ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದು ಖಂಡನೀಯ. ಸರ್ಕಾರಿ ನೌಕರರಿಗೆ ರಕ್ಷಣೆ ಒದಗಿಸುವ ಜತೆಗೆ ತಾಲೂಕಿನ ಸರ್ಕಾರಿ ನೌಕರರಿಗೆ ಭಯಮುಕ್ತವಾಗಿ ಕಾರ್ಯ ನಿರ್ವಹಿಸುವಂತಹ ವಾತಾವರಣ ನಿರ್ಮಿಸಬೇಕು. ಸರ್ಕಾರ ನೌಕರರಿಗೆ ಸೂಕ್ತ ರಕ್ಷಣೆ ನೀಡಬೇಕು ಆಗ್ರಹಿಸಿದರು.

ಈ ವೇಳೆ ತಾಪಂ ಇಒ ಚಂದ್ರಶೇಖರ ಕಂದಕೂರ, ಬಿಇಒ ಅರ್ಜುನ ಕಂಬೋಗಿ, ನೀರಾವರಿ ಇಲಾಖೆ ಎಂಜಿನಿಯರ್ ಕೆ.ಎಸ್. ಮೆಣಸಿನಕಾಯಿ, ಸಹಾಯಕ ಕೃಷಿ ನಿರ್ದೇಶಕ ಎಸ್.ಎಫ್. ತಹಶೀಲ್ದಾರ, ಶಿಕ್ಷಕರ ಸಂಘದ ಅಧ್ಯಕ್ಷ ವೈ.ಡಿ.ಗಾಣಿಗೇರ, ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಎಂ.ವೈ. ಜಕ್ಕರಸಾನಿ, ಹಾಲನಗೌಡ ಪಾಟೀಲ, ಜೆ.ಎಸ್. ಹೂಗಾರ, ಡಿ.ಆರ್. ಕುಂಬಾರ, ಪಿ.ಪಿ. ಔದಕ್ಕನವರ, ಬಿ.ಎಸ್. ಹಿರೇಮಠ, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಎಸ್.ಎಸ್. ಗಿರಿಯಪ್ಪಗೌಡ್ರ, ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷೆ ಬಸಮ್ಮ ಖ್ಯಾತನಗೌಡ್ರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗೀತಾ ಆಲೂರ, ಪೂಲನ್ ಪಾಟೀಲ, ಮಹಾಂತೇಶ ಪಾಟೀಲ, ಕೆ.ಎ. ಹಾದಿಮನಿ, ಎಂ.ಎಸ್. ಕುರಿ, ವಿ.ಡಿ. ಬಡಿಗೇರ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮ : ಶಾಸಕ ಪ್ರದೀಪ್‌ ಈಶ್ವರ್‌
ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ