ಬಂದೂಕು ನವೀಕರಣದಲ್ಲಿ ವಿಳಂಬಕ್ಕೆ ಆಕ್ರೋಶ

KannadaprabhaNewsNetwork |  
Published : Dec 25, 2025, 01:30 AM IST
24ಎಚ್ಎಸ್ಎನ್21 :  | Kannada Prabha

ಸಾರಾಂಶ

ಅಧಿಕಾರಿಗಳು ಪರವಾನಗಿ ನವೀಕರಣಕ್ಕೆ ಗಂಟೆಗಟ್ಟಲೆ ಸಮಯ ತೆಗೆದುಕೊಳ್ಳುತ್ತಿರುವುದರಿಂದ, ಕೃಷಿ ಕೆಲಸಗಳನ್ನು ಬಿಟ್ಟು ದೂರದ ಊರುಗಳಿಂದ ಬಂದ ರೈತರು ಊಟ, ನೀರು ಇಲ್ಲದೆ ಸಾಲಿನಲ್ಲಿ ನಿಂತು ಕಾಯಬೇಕಾದ ದುಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ಅಸಮಾಧಾನ ಹೊರಹಾಕಿದರು. ಬಂದೂಕು ನವೀಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವೇ ರೈತರಿಗೆ ಟೋಕನ್ ನೀಡಿ ದಿನಾಂಕ ನಿಗದಿಪಡಿಸಿದ್ದರೂ, ದಿನಕ್ಕೆ ೫೦ ಮಂದಿಗೆ ಟೋಕನ್ ನೀಡಲಾಗುತ್ತಿದ್ದು, ಕೇವಲ ೨೦ರಿಂದ ೨೫ ಮಂದಿಯ ಪರವಾನಗಿ ಮಾತ್ರ ನವೀಕರಿಸಲಾಗುತ್ತಿದೆ ಎಂದು ಆರೋಪಿಸಿದರು. ಇದರಿಂದ ಉಳಿದ ರೈತರು ದಿನವಿಡೀ ಕಾಯುವಂತಾಗಿ, ಕೊನೆಗೆ ಯಾವುದೇ ಕೆಲಸವಾಗದೆ ಬರಿಗೈಯಲ್ಲಿ ವಾಪಸ್ಸಾಗುವ ಪರಿಸ್ಥಿತಿ ಎದುರಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಬಂದೂಕು ಪರವಾನಗಿ ನವೀಕರಣದಲ್ಲಿ ಆಗುತ್ತಿರುವ ತೀವ್ರ ವಿಳಂಬ ಖಂಡಿಸಿದಲ್ಲದೇ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲೆ ಇರುವ ನ್ಯಾಯಾಂಗ ಶಾಖೆ ಮುಂದೆಯೇ ಬುಧವಾರ ನೂರಾರು ಬಂದೂಕು ಮಾಲೀಕರು ಬುಧವಾರ ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಮುರುಳೀಧರ್‌ ಹಾಗೂ ಸುಬ್ರಹ್ಮಣ್ಯ ಮಾಧ್ಯಮದೊಂದಿಗೆ ಮಾತನಾಡಿ, ಐದು ವರ್ಷಕ್ಕೊಮ್ಮೆ ಬಂದೂಕು ಪರವಾನಗಿ ನವೀಕರಣ ಮಾಡಿಸಬೇಕೆಂಬ ನಿಯಮದ ಹಿನ್ನೆಲೆಯಲ್ಲಿ ರೈತರು ತಮ್ಮ ತಮ್ಮ ಬಂದೂಕುಗಳೊಂದಿಗೆ ಡಿಸಿ ಕಚೇರಿಗೆ ಆಗಮಿಸಿದ್ದರೂ, ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ನಿಧಾನಗತಿಯ ಕಾರ್ಯವೈಖರಿಯಿಂದ ಬಂದೂಕು ಮಾಲೀಕರು ದಿನವಿಡೀ ಕಚೇರಿ ಬಳಿ ಕಾಯುವಂತಾಗಿದೆ ಎಂದು ಅಸಮಾಧಾನ ಹೊರಹಾಕಿದರು.

ಅಧಿಕಾರಿಗಳು ಪರವಾನಗಿ ನವೀಕರಣಕ್ಕೆ ಗಂಟೆಗಟ್ಟಲೆ ಸಮಯ ತೆಗೆದುಕೊಳ್ಳುತ್ತಿರುವುದರಿಂದ, ಕೃಷಿ ಕೆಲಸಗಳನ್ನು ಬಿಟ್ಟು ದೂರದ ಊರುಗಳಿಂದ ಬಂದ ರೈತರು ಊಟ, ನೀರು ಇಲ್ಲದೆ ಸಾಲಿನಲ್ಲಿ ನಿಂತು ಕಾಯಬೇಕಾದ ದುಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ಅಸಮಾಧಾನ ಹೊರಹಾಕಿದರು. ಬಂದೂಕು ನವೀಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವೇ ರೈತರಿಗೆ ಟೋಕನ್ ನೀಡಿ ದಿನಾಂಕ ನಿಗದಿಪಡಿಸಿದ್ದರೂ, ದಿನಕ್ಕೆ ೫೦ ಮಂದಿಗೆ ಟೋಕನ್ ನೀಡಲಾಗುತ್ತಿದ್ದು, ಕೇವಲ ೨೦ರಿಂದ ೨೫ ಮಂದಿಯ ಪರವಾನಗಿ ಮಾತ್ರ ನವೀಕರಿಸಲಾಗುತ್ತಿದೆ ಎಂದು ಆರೋಪಿಸಿದರು. ಇದರಿಂದ ಉಳಿದ ರೈತರು ದಿನವಿಡೀ ಕಾಯುವಂತಾಗಿ, ಕೊನೆಗೆ ಯಾವುದೇ ಕೆಲಸವಾಗದೆ ಬರಿಗೈಯಲ್ಲಿ ವಾಪಸ್ಸಾಗುವ ಪರಿಸ್ಥಿತಿ ಎದುರಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೆ ತಾಲೂಕು ಕಚೇರಿಗಳಲ್ಲೇ ಬಂದೂಕು ಪರವಾನಗಿ ನವೀಕರಣ ಪ್ರಕ್ರಿಯೆ ನಡೆಯುತ್ತಿತ್ತು. ಆದರೆ ಇತ್ತೀಚೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲೇ ನವೀಕರಣ ಮಾಡಿಸಬೇಕೆಂಬ ಹೊಸ ನಿಯಮ ಜಾರಿಯಾಗಿದೆ. ಇದರಿಂದ ಗ್ರಾಮೀಣ ಪ್ರದೇಶದ ರೈತರಿಗೆ ತೀವ್ರ ತೊಂದರೆಯಾಗುತ್ತಿದೆ. ಬೆಳಗ್ಗೆಯೇ ದೂರದ ಊರುಗಳಿಂದ ಬಂದರೂ, ಸಂಜೆಯಾದರೂ ಪರವಾನಗಿ ನವೀಕರಣವಾಗುತ್ತಿಲ್ಲ. ಬೆಳಗ್ಗಿನಿಂದ ಸಂಜೆವರೆಗೂ ಊಟ, ನೀರು ಇಲ್ಲದೆ ಸರದಿ ಸಾಲಿನಲ್ಲಿ ಕಾಯಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ತಕ್ಷಣ ಜಿಲ್ಲಾಧಿಕಾರಿಗಳು ಈ ಸಮಸ್ಯೆಯತ್ತ ಗಮನಹರಿಸಿ, ರೈತರಿಗೆ ಅನುಕೂಲವಾಗುವಂತೆ ತಾಲೂಕು ಮಟ್ಟದಲ್ಲೇ ಬಂಧೂಕು ಪರವಾನಗಿ ನವೀಕರಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನ್ನ ನೀಡುವ ಕಾಯಕ ಯೋಗಿ ಬದುಕು ಹಸನಾಗಿಸಿ: ವಿ.ಸಿ.ಉಮಾಶಂಕರ್
ಬಾಂಗ್ಲಾದಲ್ಲಿ ಹಿಂದೂಗಳ ಹತ್ಯೆ, ದೌರ್ಜನ್ಯ ಖಂಡಿಸಿ ಪ್ರತಿಭಟನೆ