ಬಳ್ಳಾರಿ: ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭಿವೃದ್ಧಿಗೆಂದು ಮೀಸಲಾಗಿಟ್ಟಿದ್ದ ಎಸ್ಸಿಪಿ/ಟಿಎಸ್ಪಿ ಹಣವನ್ನು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿರುವುದನ್ನು ಖಂಡಿಸಿ ಬಿಜೆಪಿ ಎಸ್ಟಿ ಮೋರ್ಚಾ ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಬಿಜೆಪಿ ಮುಖಂಡರು ಹಾಗೂ ಎಸ್ಟಿ ಮೋರ್ಚಾದ ಪದಾಧಿಕಾರಿಗಳು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪಕ್ಷದ ಜಿಲ್ಲಾಧ್ಯಕ್ಷ ಅನಿಲ್ಕುಮಾರ್ ಮೋಕಾ ಅವರು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಬಳಸಿಕೊಂಡು ಖಜಾನೆ ಮಾಡಿಕೊಂಡಿದೆ. ಸರ್ಕಾರದ ಬಳಿ ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲದಂತಾಗಿದೆ. ಹೀಗಾಗಿ ರಾಜ್ಯದಲ್ಲಿ ಯಾವುದೇ ಜನಪರ ಯೋಜನೆಗಳು ಚಾಲನೆ ದೊರೆತಿಲ್ಲ. ಘೋಷಿತ ಕಾಮಗಾರಿಗಳನ್ನು ಕೈಗೊಳ್ಳಲು ಸಹ ಸರ್ಕಾರದ ಬಳಿ ಹಣವಿಲ್ಲ ಎಂದು ಟೀಕಿಸಿದರು.ಪಕ್ಷದ ಹಿರಿಯ ಮುಖಂಡ ಡಾ. ಮಹಿಪಾಲ್, ಗಣಪಾಲ್ ಐನಾಥ ರೆಡ್ಡಿ, ಮುರಹರಗೌಡ ಗೋನಾಳ್, ಉಡೇದ ಸುರೇಶ್ ಸೇರಿದಂತೆ ಪಕ್ಷದ ಜಿಲ್ಲಾ ಪದಾಧಿಕಾರಿಗಳು ಹಾಗೂ ಎಸ್ಟಿ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.