ಕಾಡಾನೆ ದಾಳಿಗೆ ಹೊರಗುತ್ತಿಗೆ ನೌಕರ ಬಲಿ

KannadaprabhaNewsNetwork |  
Published : Aug 13, 2025, 12:30 AM IST
ಕೆ ಕೆ ಪಿ ಸುದ್ದಿ 05:ಆನೆ ದಾಳಿಗೆ ಬಲಿಯಾದ ಹೊರಗುತ್ತಿಗೆ ನೌಕರ ಶ್ರೇಯಸ್.  | Kannada Prabha

ಸಾರಾಂಶ

ಕನಕಪುರ: ಕಾಡಾನೆ ದಾಳಿಗೆ ಹೊರಗುತ್ತಿಗೆ ನೌಕರನೊಬ್ಬ ಬಲಿಯಾಗಿರುವ ಧಾರುಣ ಘಟನೆ ತಾಲೂಕಿನ ಕಬ್ಬಾಳು ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಕನಕಪುರ: ಕಾಡಾನೆ ದಾಳಿಗೆ ಹೊರಗುತ್ತಿಗೆ ನೌಕರನೊಬ್ಬ ಬಲಿಯಾಗಿರುವ ಧಾರುಣ ಘಟನೆ ತಾಲೂಕಿನ ಕಬ್ಬಾಳು ಅರಣ್ಯ ಪ್ರದೇಶದಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕಿನ ಎಲೆಕೇರಿ ನಿವಾಸಿ ಶ್ರೇಯಸ್(20) ಕಾಡಾನೆ ದಾಳಿಗೆ ತುತ್ತಾದ ದುರ್ದೈವಿ. ಈತ ಇಟಿಎಫ್‌(ಆನೆ ದಾಳಿ ನಿಗ್ರಹ ತಂಡ)ದಲ್ಲಿ ಹೊರಗುತ್ತಿಗೆ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದನು. ಮಂಗಳವಾರ ಮಧ್ಯಾಹ್ನ ಸುಮಾರು 3.30ರಲ್ಲಿ ಕಬ್ಬಾಳು-ಕಂಚನಹಳ್ಳಿ ಅರಣ್ಯ ಪ್ರದೇಶ ವ್ಯಾಪ್ತಿ ಯಲ್ಲಿ ಆನೆಗಳ ಹಿಂಡು ಬೀಡುಬಿಟ್ಟಿರುವ ಬಗ್ಗೆ ಮಾಹಿತಿ ಆದರಿಸಿ ಅವನ್ನು ಕಾಡಿಗೆ ಅಟ್ಟಲು 20 ಜನ ಸಹೋದ್ಯೋಗಿಗಳ ಜೊತೆ ತೆರಳಿದ್ದು ಆನೆಗಳ ಹಿಂಡನ್ನು ಓಡಿಸುವ ವೇಳೆ ಒಂದು ಆನೆ ಹಿಂದಿರುಗಿ ಬಂದು ಅಲ್ಲೇ ಇದ್ದ ಶ್ರೇಯಸ್ ಮೇಲೆ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡ ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಾರೋಹಳ್ಳಿ ಬಳಿಯ ದಯಾನಂದ ಸಾಗರ್ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯದಲ್ಲೇ ಅಸುನೀಗಿರುವುದಾಗಿ ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಡಿಎಫ್‌ಒ ರಾಮಕೃಷ್ಣಪ್ಪ, ಎಸಿಎಫ್‌ ಚೈತ್ರ, ಪುಟ್ಟಮ್ಮ, ಆರ್‌ಎಫ್‌ಒ ಮಲ್ಲೇಶ್, ಜಗದೀಶ್, ಮನ್ಸೂರ್ ಹಾಗೂ ಸಿಬ್ಬಂದಿ ಮುತ್ತು ನಾಯಕ ಸೇರಿದಂತೆ ಅರಣ್ಯ ಸಿಬ್ಬಂದಿ ಸ್ಥಳ ಪರಿಶೀಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ