ಹಾವೇರಿ ಜಿಲ್ಲೆಯಲ್ಲಿ ತುಂಬಿ ಹರಿಯುತ್ತಿರುವ ನದಿಗಳು, ಬೆಳೆ ಮುಳುಗಡೆ

KannadaprabhaNewsNetwork |  
Published : Jul 22, 2024, 01:23 AM IST
21ಎಚ್‌ವಿಆರ್‌4 | Kannada Prabha

ಸಾರಾಂಶ

ಹಾವೇರಿ ಜಿಲ್ಲೆಯಲ್ಲಿ ಭಾನುವಾರ ಮಳೆ ಇಳಿಮುಖವಾಗಿದ್ದರೂ ನದಿಗಳಲ್ಲಿ ಹರಿವು ಏರಿಕೆಯಾಗಿದ್ದರಿಂದ ಹೊಲಗಳಿಗೆ ನೀರು ನುಗ್ಗಿ ಬೆಳೆ ಮುಳುಗಿದೆ. ಎರಡು ದಿನಗಳಿಂದ ಮುಳುಗಡೆಯಾಗಿರುವ ಸೇತುವೆ, ಬ್ಯಾರೇಜ್‌ಗಳು ಇನ್ನೂ ತೆರವಾಗದ್ದರಿಂದ ಹಲವು ಕಡೆ ರಸ್ತೆ ಸಂಪರ್ಕ ಕಡಿತವಾಗಿದೆ.

ಹಾವೇರಿ: ಜಿಲ್ಲೆಯಲ್ಲಿ ಭಾನುವಾರ ಮಳೆ ಇಳಿಮುಖವಾಗಿದ್ದರೂ ನದಿಗಳಲ್ಲಿ ಹರಿವು ಏರಿಕೆಯಾಗಿದ್ದರಿಂದ ಹೊಲಗಳಿಗೆ ನೀರು ನುಗ್ಗಿ ಬೆಳೆ ಮುಳುಗಿದೆ. ಎರಡು ದಿನಗಳಿಂದ ಮುಳುಗಡೆಯಾಗಿರುವ ಸೇತುವೆ, ಬ್ಯಾರೇಜ್‌ಗಳು ಇನ್ನೂ ತೆರವಾಗದ್ದರಿಂದ ಹಲವು ಕಡೆ ರಸ್ತೆ ಸಂಪರ್ಕ ಕಡಿತವಾಗಿದೆ.

ತುಂಗಭದ್ರಾ, ವರದಾ, ಧರ್ಮಾ, ಕುಮದ್ವತಿ ನದಿಗಳಲ್ಲಿ ಪ್ರವಾಹ ಮಟ್ಟದಲ್ಲಿ ನೀರು ಹರಿಯುತ್ತಿದೆ. ಇದರಿಂದ ನದಿ ಪಾತ್ರದ ಹೊಲಗದ್ದೆಗಳಿಗೆ ನೀರು ನುಗ್ಗಿದೆ. ಬೆಳೆಗಳು ಮುಳುಗಿದ್ದು, ಕೊಳೆಯುವ ಭೀತಿ ಎದುರಾಗಿದೆ.

ತಾಲೂಕಿನ ನಾಗನೂರು, ಬೆಂಚಿಹಳ್ಳಿ, ವರದಾಹಳ್ಳಿ ಸೇರಿದಂತೆ ಹಲವು ಕಡೆ ಬೆಳೆ ಮುಳುಗಡೆಯಾಗಿದೆ. ಜಿಲ್ಲೆಯಲ್ಲಿ ಮಳೆ ಇಳಿಮುಖವಾಗಿದ್ದರೂ ನದಿ ಮೇಲ್ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ನೀರಿನ ಹರಿವು ಏರಿಕೆಯಾಗಿದೆ. ಕಳೆದ ಒಂದು ವಾರದಿಂದ ಮಳೆಯಾಗುತ್ತಿರುವುದರಿಂದ ವಾತಾವರಣ ಸಂಪೂರ್ಣ ತಂಪಾಗಿದ್ದು, ಕೃಷಿ ಕಾರ್ಯಕ್ಕೂ ಸಮಸ್ಯೆಯಾಗಿದೆ. ಕಚ್ಚಾ ಮನೆಗಳು ತೇವಗೊಂಡು ಕುಸಿಯುವ ಭೀತಿಯನ್ನು ಅನೇಕ ಕುಟುಂಬಗಳು ಎದುರಿಸುತ್ತಿವೆ.

ಮಣ್ಣಿನ ಮನೆ, ಕಚ್ಚಾ ಮನೆ, ನದಿ ಪಾತ್ರದಲ್ಲಿ ವಾಸಿಸುತ್ತಿರುವ ಕುಟಂಬಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಅದರಂತೆ ಆಯಾ ತಾಲೂಕಾ ಆಡಳಿತಗಳು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!