ಪಿ.ಅಶ್ವತ್ಥ್ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆ

KannadaprabhaNewsNetwork |  
Published : Jul 15, 2026, 02:00 AM IST
13ಕೆಆರ್ ಎಂಎನ್ 2.ಜೆಪಿಜಿಬಿಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಪಿ.ಅಶ್ವತ್ಥ್ ರವರು ಜೆಡಿಎಸ್ ತೊರೆದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ಕೆ.ರಾಜು ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. | Kannada Prabha

ಸಾರಾಂಶ

ರಾಮನಗರ: ಬಿಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಪಿ.ಅಶ್ವತ್ಥ್ ಅವರು ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಪಕ್ಷ ತೊರೆದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಕೆ.ರಾಜು ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು

ರಾಮನಗರ: ಬಿಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಪಿ.ಅಶ್ವತ್ಥ್ ಅವರು ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಪಕ್ಷ ತೊರೆದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಕೆ.ರಾಜು ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು, ಪಿ.ಅಶ್ವತ್ಥ್, ಅಂಕನಹಳ್ಳಿ ಸೊಸೈಟಿ ಮಾಜಿ ಅಧ್ಯಕ್ಷ ಶಿವಕುಮಾರ್, ಚನ್ನಂಕೇಗೌಡ ಮತ್ತಿತರರಿಗೆ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಪಿ.ಅಶ್ವತ್ಥ್, ಜಿಲ್ಲೆಯ ಸಮಸ್ತ ಅಭಿವೃದ್ಧಿಯ ಹರಿಕಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಜನಪರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ತಾವು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುತ್ತಿರುವುದಾಗಿ ಹೇಳಿದರು.

ಡಿಕೆ ಸಹೋದರರು ಕೇವಲ ನಾಯಕರಲ್ಲ. ಅವರು ನಮ್ಮ ಜಿಲ್ಲೆಯ ಮಣ್ಣಿನ ಮಕ್ಕಳು. ಪಕ್ಷಕ್ಕಾಗಿ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ದುಡಿಯುವ ಸಾಮಾನ್ಯ ಕಾರ್ಯಕರ್ತರು ಮತ್ತು ಮುಖಂಡರನ್ನು ಗುರುತಿಸಿ ಅವರಿಗೆ ಸೂಕ್ತ ಸ್ಥಾನಮಾನ ಹಾಗೂ ಗೌರವ ನೀಡುವ ಅಪರೂಪದ ಗುಣ ಹೊಂದಿರುವ ನಾಯಕರು ಎಂದು ಬಣ್ಣಿಸಿದರು.

ಕಾರ್ಯಕರ್ತರ ಕಷ್ಟಕ್ಕೆ ಧಾವಿಸುವ ಇಂತಹ ವಿಶಾಲ ಮನಸ್ಥಿತಿಯ ನಾಯಕರ ಅವಶ್ಯಕತೆ ನಮ್ಮ ಜಿಲ್ಲೆಗೆ ಅಗತ್ಯವಿದೆ. ಮುಂಬರುವ ದಿನಗಳಲ್ಲಿ ನಮ್ಮ ಜಿಲ್ಲೆಯ ಜನತೆ ಡಿ.ಕೆ.ಸಹೋದರರಿಗೆ ಮತ್ತಷ್ಟು ಶಕ್ತಿ ತುಂಬಿಸಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ತರುವುದೇ ನಮ್ಮೆಲ್ಲರ ಏಕೈಕ ಉದ್ದೇಶ ಎಂದು ತಿಳಿಸಿದರು.

ಈ ವೇಳೆ ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್, ಬಮೂಲ್ ನಿರ್ದೇಶಕರಾದ ಲಿಂಗೇಶ್ ಕುಮಾರ್, ಹರೀಶ್ ಕುಮಾರ್, ರಾಮನಗರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಚ್.ರಾಜು, ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ರೈಡ್ ನಾಗರಾಜ್, ಮುಕಂಡರಾದ ಜಯಣ್ಣ, ಪುಟ್ಟರಾಜು, ಕೆ.ರವಿ, ರವಿಕುಮಾರ್ , ನರಸಿಂಹಯ್ಯ, ಅಂಕನಹಳ್ಳಿ ಮಹೇಶ್ ಮತ್ತಿತರರು ಹಾಜರಿದ್ದರು.

13ಕೆಆರ್ ಎಂಎನ್ 2.ಜೆಪಿಜಿ

ಬಿಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಪಿ.ಅಶ್ವತ್ಥ್ ಅವರು ಜೆಡಿಎಸ್ ತೊರೆದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ಕೆ.ರಾಜು ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನ ಕೆರೆ ಹೊಳೆತ್ತುವ ಕಾಮಗಾರಿ ಭೂಮಿ ಪೂಜೆ
ನಾಳೆ ರೈತ ಜಾಗೃತ ಸಮಾವೇಶ: ಡಾ. ವಾಸುದೇವ ಮೇಟಿ