ಕಾಂಗ್ರೆಸ್‍ನ ಟೀಕೆ ಮಾಡಲು ಪಾದಯಾತ್ರೆ: ಸಚಿವ ಮಧು ಬಂಗಾರಪ್ಪ

KannadaprabhaNewsNetwork |  
Published : Sep 08, 2026, 01:45 AM IST
ಸುರಪುರದಲ್ಲಿ ನಡೆಯಲಿರುವ ‘ಕಲ್ಯಾಣದಲ್ಲಿ ಕ್ಷೀರ ಕ್ರಾಂತಿ’ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಡುಗಡೆಗೊಳಿಸಿದರು. ಕಲಬುರಗಿಯ ಕೆವೈಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಠ್ಠಲ ವಿ.ಯಾದವ, ತಾಲೂಕು ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಭೀಮನಗೌಡ ಹೇಮನೂರ ಸೇರಿದಂತೆ ಅನೇಕ ಮಖಂಡರು ಉಪಸ್ಥಿತರಿದ್ದರು. | Kannada Prabha

ಸಾರಾಂಶ

ಬಿಜೆಪಿ ಪಾದಯಾತ್ರೆ ಮಾಡುತ್ತಿರುವುದು ಜನರ ಸಮಸ್ಯೆಯನ್ನು ಬಗೆಹರಿಸಲು ಅಲ್ಲ. ಕಾಂಗ್ರೆಸ್ ನಾಯಕರನ್ನು ವೈಯಕ್ತಿಕವಾಗಿ ಟೀಕೆ ಮಾಡಲು ಎಂದು ಸಚಿವ ಮಧು ಬಂಗಾರಪ್ಪ ಕುಟುಕಿದರು.

ಶಿವಮೊಗ್ಗ: ಬಿಜೆಪಿ ಪಾದಯಾತ್ರೆ ಮಾಡುತ್ತಿರುವುದು ಜನರ ಸಮಸ್ಯೆಯನ್ನು ಬಗೆಹರಿಸಲು ಅಲ್ಲ. ಕಾಂಗ್ರೆಸ್ ನಾಯಕರನ್ನು ವೈಯಕ್ತಿಕವಾಗಿ ಟೀಕೆ ಮಾಡಲು ಎಂದು ಸಚಿವ ಮಧು ಬಂಗಾರಪ್ಪ ಕುಟುಕಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿ.ವೈ.ವಿಜಯೇಂದ್ರ ಮೋದಿ ಅವರ ಶೈಲಿಯಲ್ಲಿ ಮಾತನಾಡುವುದನ್ನು ಕಲಿತಿದ್ದಾರೆ. ಪಾದಯಾತ್ರೆಯಲ್ಲಿ ಜನರ ಸಮಸ್ಯೆಯನ್ನು ಕೇಳುವುದನ್ನು ಬಿಟ್ಟು, ನಮ್ಮ ನಾಯಕರನ್ನು ಟೀಕೆ ಮಾಡುತ್ತಿದ್ದಾರೆ. ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಬಿಜೆಪಿ ಅವರನ್ನುಟೀಕೆ ಮಾಡಿತ್ತು. ಈಗ ಕಾಂಗ್ರೆಸ್‍ನಲ್ಲಿ ಬಣ ರಾಜಕೀಯ ಇದೆಯೆಂದು ಕಲ್ಪಿಸಿಕೊಂಡು ಅವರನ್ನು ಹೊಗಳುತ್ತಿದ್ದಾರೆ. ತಲತಲಾಂತರದಿಂದ ಬಿಜೆಪಿ ಇಂತಹ ಒಡೆದು ಆಳುವ ನೀತಿಯನ್ನೇ ಅನುಸರಿಸಿಕೊಂಡು ಬಂದಿದೆ ಎಂದು ಕಿಡಿಕಾರಿದರು.

ಯಡಿಯೂರಪ್ಪನವರು ಬಿಜೆಪಿಯನ್ನು ತಿರಸ್ಕರಿಸಿ ಕೆಜೆಪಿ ಕಟ್ಟಿದ್ದರು. ಈ ಬಗ್ಗೆ ಬಿಜೆಪಿ ಅವರು ಮಾತನಾಡಲಿ. ದೇವರಾಜ ಅರಸು ಅವರ ಭೂ ಯೋಜನೆಯನ್ನು ಕಿತ್ತಾಕಿದವರು ಇದೇ ಯಡಿಯೂರಪ್ಪ ಸರ್ಕಾರ, ಶರಾವತಿ ಸಂತ್ರಸ್ತರ ಸಮಸ್ಯೆಯನ್ನು ಹಾಳು ಮಾಡಿದ್ದು ಬಸವರಾಜ ಬೊಮ್ಮಾಯಿ ಸರ್ಕಾರ, ಹಸಿರು ಶಾಲು ಹಾಕಿಕೊಂಡು ರೈತರಿಗೆ ಗುಂಡು ಹೊಡೆದಿದ್ದನ್ನು ಮರಿಯಬೇಕಾ? ಯಡಿಯೂರಪ್ಪನವರಿಗೆ ದೇವೇಗೌಡರು ಎಂತಹ ಮಾತುಗಳನ್ನಾಡಿದ್ದಾರೆ ನೀವೆಲ್ಲಾ ಮರೆತ್ತಿದ್ದಿರಾ ಎಂದು ಪ್ರಶ್ನಿಸಿದರು.

ಶರಾವತಿ ಸಂತ್ರಸ್ತರ ಸಮಸ್ಯೆಯನ್ನು ಹಂತ ಹಂತವಾಗಿ ಬಗೆಹರಿಸಬೇಕು. ಇಲ್ಲದೆ ಹೋದರೆ ಬುಡಕ್ಕೆ ಕೊಡಲಿ ಪೆಟ್ಟು ಬೀಳುತ್ತದೆ.ಇದನ್ನು ಚುನಾವಣೆಯೊಳಗೆ ಬಗೆ ಹರಿಸುತ್ತೇವೆ ಎಂದರು.

ಕಸ್ತೂರಿರಂಗನ್ ವರದಿಯನ್ನು ರಾಜ್ಯ ಸರ್ಕಾರ ವಿರೋಧ ಮಾಡಿದೆ. ಆದರೆ ಕೇಂದ್ರದಲ್ಲಿ ನಿಮ್ಮ ಸರ್ಕಾರ ಇದೆಯೆಲ್ಲಾ ನೀವೇನು ಮಾಡುತ್ತಿದ್ದಿರಾ. ಈ ಕುರಿತು 2016 ಆ. 11ರಂದು ಸಭೆಗೆ ಕರೆದಿದ್ದರಲ್ಲ ಆಗ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಉಡುಪಿ ಮತ್ತು ಚಿಕ್ಕಮಗಳೂರಿನ ಸಂಸದೆ ಶೋಭಾ ಕರಂದ್ಲಾಜೆ ಯಾಕೆ ಹಾಜರಾಗಿಲ್ಲ. ಎಲ್ಲಿ ಹೋಗಿದ್ದರು. ಬಿ.ವೈ. ವಿಜಯೇಂದ್ರ ಅವರು ಇಂದು ಪಾದಯಾತ್ರೆ ಮಾಡುವ ಮೂಲಕ ರೈತರ ಹೊಲಕ್ಕೆ ಹೋಗುತ್ತಿದ್ದಾರೆ. ಆದರೆ ಇದುವರೆಗೂ ಶಿಕಾರಿಪುರದಲ್ಲಿ ಬಗರ್ ಹುಕುಂ ಸಂಬಂಧಿಸಿದಂತೆ ಎಷ್ಟು ಸಭೆ ಮಾಡಿದ್ದಾರೆ ಎಂದು ಗುಡುಗಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿಂಗ್‌ಪಿನ್‌ ಕನ್ನಾಳೆಗೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದವರಾರು?: ಖಂಡ್ರೆ
ಬರ ಘೋಷಣೆ ಕೇಂದ್ರವೇ ಹೊಣೆ: ಸಚಿವ ಖಂಡ್ರೆ