ಕನ್ನಡಪ್ರಭ ವಾರ್ತೆ ವಿಜಯಪುರ
ಕಾಂಗ್ರೆಸ್ ಮುಖಂಡ ಹಮೀದ್ ಮುಶ್ರೀಫ್ ಮಾತನಾಡಿ, ಅಲ್ಲಿಯ ಪಾಲಿಕೆಯ ಅಧಿಕಾರಿಗಳು ಪ್ರತಿಮೆ ತೆರವುಗೊಳಿಸಿರಬಹುದು. ಆದರೆ ಬಡವರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದ ಸಿದ್ದರಾಮಯ್ಯನವರ ಹೆಸರು ತೆಗೆಯಲು ಸಾಧ್ಯವಿಲ್ಲ. ಅಚಾತುರ್ಯ ನಡೆಸಿದ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.
ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಮಾತನಾಡಿ, ಸಿದ್ದರಾಮಯ್ಯರ ಪ್ರತಿಮೆ ಕೇವಲ ಒಂದು ಕಲಾಕೃತಿಯಲ್ಲ, ಬದಲಾಗಿ ಅದರ ಹಿಂದೆ ಸಾಮಾಜಿಕ ಸಂದೇಶದ ಉದ್ದೇಶಗಳಿವೆ. ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ ಸಿದ್ದರಾಮಯ್ಯನವರಿಗೆ ಜನರು ಸಲ್ಲಿಸುವ ಕೃತಜ್ಞತೆಯ ಸಂಕೇತವಾಗಿದೆ. ಪ್ರತಿಮೆಯನ್ನು ಅಲ್ಲಿಯೇ ಮರು ಸ್ಥಾಪಿಸದಿದ್ದರೆ ಅಸಂಖ್ಯಾತ ಬೆಂಬಲಿಗರೊಂದಿಗೆ ವಿಜಯಪುರದಿಂದ ಕಲಬುರಗಿಗೆ ಪಾದಯಾತ್ರೆ ನಡೆಸಲಾಗುವುದೆಂದು ಎಚ್ಚರಿಸಿದರು.ಸಭೆಯಲ್ಲಿ ಮುಖಂಡರಾದ ಭಾರತಿ ಹೊಸಮನಿ, ಷಹಜಾನ್ ದುಂಡಸಿ, ಮಲ್ಲು ಬಿದರಿ, ಅಶ್ಪಾಕ್ ಮನಗೂಳಿ, ವಸಂತ ಹೊನಮೋಡೆ, ಚಂದಸಾಬ್ ಗಡಗಲಾವ, ಫಯಾಜ್ ಕಲಾದಗಿ, ಮನು ಭಾವಿಕಟ್ಟಿ, ಸಂತೋಷ ಬಾಲ್ಗಾವಿ, ದೇವಕಾಂತ ಬಿಜ್ಜರಗಿ ಸೇರಿ ಅನೇಕರು ಉಪಸ್ಥಿತರಿದ್ದರು.