ಸಿದ್ದರಾಮಯ್ಯ ಪ್ರತಿಮೆ ಮರು ಸ್ಥಾಪಿಸದಿದ್ದರೆ ಕಲಬುರಗಿಗೆ ಪಾದಯಾತ್ರೆ

KannadaprabhaNewsNetwork |  
Published : Sep 20, 2026, 04:15 AM IST
ಸಿದ್ದರಾಮಯ್ಯ ಪ್ರತಿಮೆ ಮರು ಸ್ಥಾಪಿಸದಿದ್ದರೆ ವಿಜಯಪುರದಿಂದ ಕಲಬುರಗಿಗೆ ಪಾದಯಾತ್ರೆ | Kannada Prabha

ಸಾರಾಂಶ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಪ್ರತಿಮೆ ತೆರವು ಖಂಡಿಸಿ, ಸಿದ್ದರಾಮಯ್ಯನವರ ಹೆಸರಿನಲ್ಲಿಯೇ ಇರುವ ಅದೇ ವೃತ್ತದಲ್ಲಿ ಪ್ರತಿಮೆ ಸ್ಥಾಪಿಸಬೇಕೆಂದು ಒತ್ತಾಯಿಸಿ ನಗರದಲ್ಲಿ ಬೃಹತ್‌ ಪಾದಯಾತ್ರೆ ಮತ್ತು ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ವಿಜಯಪುರ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಪ್ರತಿಮೆ ತೆರವು ಖಂಡಿಸಿ, ಸಿದ್ದರಾಮಯ್ಯನವರ ಹೆಸರಿನಲ್ಲಿಯೇ ಇರುವ ಅದೇ ವೃತ್ತದಲ್ಲಿ ಪ್ರತಿಮೆ ಸ್ಥಾಪಿಸಬೇಕೆಂದು ಒತ್ತಾಯಿಸಿ ನಗರದಲ್ಲಿ ಬೃಹತ್‌ ಪಾದಯಾತ್ರೆ ಮತ್ತು ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಮುಖಂಡ ಹಮೀದ್ ಮುಶ್ರೀಫ್‌ ಮಾತನಾಡಿ, ಅಲ್ಲಿಯ ಪಾಲಿಕೆಯ ಅಧಿಕಾರಿಗಳು ಪ್ರತಿಮೆ ತೆರವುಗೊಳಿಸಿರಬಹುದು. ಆದರೆ ಬಡವರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದ ಸಿದ್ದರಾಮಯ್ಯನವರ ಹೆಸರು ತೆಗೆಯಲು ಸಾಧ್ಯವಿಲ್ಲ. ಅಚಾತುರ್ಯ ನಡೆಸಿದ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಮಾತನಾಡಿ, ಸಿದ್ದರಾಮಯ್ಯರ ಪ್ರತಿಮೆ ಕೇವಲ ಒಂದು ಕಲಾಕೃತಿಯಲ್ಲ, ಬದಲಾಗಿ ಅದರ ಹಿಂದೆ ಸಾಮಾಜಿಕ ಸಂದೇಶದ ಉದ್ದೇಶಗಳಿವೆ. ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ ಸಿದ್ದರಾಮಯ್ಯನವರಿಗೆ ಜನರು ಸಲ್ಲಿಸುವ ಕೃತಜ್ಞತೆಯ ಸಂಕೇತವಾಗಿದೆ. ಪ್ರತಿಮೆಯನ್ನು ಅಲ್ಲಿಯೇ ಮರು ಸ್ಥಾಪಿಸದಿದ್ದರೆ ಅಸಂಖ್ಯಾತ ಬೆಂಬಲಿಗರೊಂದಿಗೆ ವಿಜಯಪುರದಿಂದ ಕಲಬುರಗಿಗೆ ಪಾದಯಾತ್ರೆ ನಡೆಸಲಾಗುವುದೆಂದು ಎಚ್ಚರಿಸಿದರು.

ಸಭೆಯಲ್ಲಿ ಮುಖಂಡರಾದ ಭಾರತಿ ಹೊಸಮನಿ, ಷಹಜಾನ್ ದುಂಡಸಿ, ಮಲ್ಲು ಬಿದರಿ, ಅಶ್ಪಾಕ್ ಮನಗೂಳಿ, ವಸಂತ ಹೊನಮೋಡೆ, ಚಂದಸಾಬ್ ಗಡಗಲಾವ, ಫಯಾಜ್ ಕಲಾದಗಿ, ಮನು ಭಾವಿಕಟ್ಟಿ, ಸಂತೋಷ ಬಾಲ್ಗಾವಿ, ದೇವಕಾಂತ ಬಿಜ್ಜರಗಿ ಸೇರಿ ಅನೇಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಸವರಾಜ ಕೌಲಗಿಯವರ ಸೇವಾ ಕಾರ್ಯ ಶ್ಲಾಘನೀಯ: ರಾಜುಗೌಡ ಪಾಟೀಲ
ಕೆಎಲ್‌ಇ ಆಸ್ಪತ್ರೆಯಲ್ಲಿ 100 ಹಾಸಿಗೆ ಬಡವರಿಗೆ ಮೀಸಲು