ಕಿಡಿಗೇಡಿಗಳಿಂದ ಭತ್ತದ ಮೆದೆಗೆ ಬೆಂಕಿ

KannadaprabhaNewsNetwork |  
Published : Jan 11, 2025, 12:46 AM IST
10ಎಚ್ಎಸ್ಎನ್17 : ಬೇಲೂರು  ತಾಲೂಕಿನ ಬಿಕ್ಕೋಡು ಹೋಬಳಿಯ ಜಗಬೋರನಹಳ್ಳಿಯಲ್ಲಿ ಕಿಡಿಗೇಡಿಗಳು  ಭತ್ತದ ಕಣಕ್ಕೆ ಬೆಂಕಿ ಹಾಕಿರುವ  ಘಟನೆ ನಡೆದಿದೆ. | Kannada Prabha

ಸಾರಾಂಶ

ಬಿಕ್ಕೋಡು ಹೋಬಳಿಯ ಜಗಬೋರನಹಳ್ಳಿಯಲ್ಲಿ ಕಿಡಿಗೇಡಿಗಳು ಭತ್ತದ ಕಣಕ್ಕೆ ಬೆಂಕಿ ಹಾಕಿದ್ದು, ಸುಮಾರು ೪ ಲಕ್ಷ ರು. ಮೌಲ್ಯದ ಭತ್ತದ ಬೆಳೆ ನಾಶವಾಗಿರುವ ಘಟನೆ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಕಾಡಾನೆಗಳ ಹಾವಳಿಯಿಂದ ರೋಸಿ ಹೋಗಿದ್ದ ರೈತರು ತಮ್ಮ ಬೆಳೆಗಳನ್ನು ರಾತ್ರಿ ಕಾದು ತಮ್ಮ ಬೆಳೆಯನ್ನು ರಕ್ಷಿಸಿಕೊಂಡಿದ್ದರು. ಎರಡು ದಿನಗಳ ಹಿಂದಷ್ಟೇ ಭತ್ತ ಕಟಾವು ಮಾಡಿ ಒಕ್ಕಣೆ ಮಾಡಲು ಒಣವೆ ಹಾಕಿದ್ದರು. ಆದರೆ ಭತ್ತದ ಬಣವೆಗೆ ಬೆಂಕಿ ಹಾಕಿದ ಕಾರಣ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಕನ್ನಡಪ್ರಭ ವಾರ್ತೆ ಬೇಲೂರು

ತಾಲೂಕಿನ ಬಿಕ್ಕೋಡು ಹೋಬಳಿಯ ಜಗಬೋರನಹಳ್ಳಿಯಲ್ಲಿ ಕಿಡಿಗೇಡಿಗಳು ಭತ್ತದ ಕಣಕ್ಕೆ ಬೆಂಕಿ ಹಾಕಿದ್ದು, ಸುಮಾರು ೪ ಲಕ್ಷ ರು. ಮೌಲ್ಯದ ಭತ್ತದ ಬೆಳೆ ನಾಶವಾಗಿರುವ ಘಟನೆ ನಡೆದಿದೆ.

ಗ್ರಾಮದ ರೇವಯ್ಯ ಎಂಬುವವರು ತಮ್ಮ ಮೂರು ಎಕರೆ ಜಮೀನಿನಲ್ಲಿ ಭತ್ತ ಬೆಳೆದಿದದ್ದರು. ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಕಾಡಾನೆಗಳ ಹಾವಳಿಯಿಂದ ರೋಸಿ ಹೋಗಿದ್ದ ರೈತರು ತಮ್ಮ ಬೆಳೆಗಳನ್ನು ರಾತ್ರಿ ಕಾದು ತಮ್ಮ ಬೆಳೆಯನ್ನು ರಕ್ಷಿಸಿಕೊಂಡಿದ್ದರು. ಎರಡು ದಿನಗಳ ಹಿಂದಷ್ಟೇ ಭತ್ತ ಕಟಾವು ಮಾಡಿ ಒಕ್ಕಣೆ ಮಾಡಲು ಒಣವೆ ಹಾಕಿದ್ದರು. ಆದರೆ ರಾತ್ರೋರಾತ್ರಿ ಕಿಡಿಗೇಡಿಗಳು ಭತ್ತದ ಬಣವೆಗೆ ಬೆಂಕಿ ಹಾಕಿದ ಕಾರಣ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಈ ವೇಳೆ ತನ್ನ ಅಳಲನ್ನು ತೋಡಿಕೊಂಡ ರೈತ ರೇವಯ್ಯ, ಕೂಲಿ ಮಾಡಿಕೊಂಡು ಕಷ್ಟಪಟ್ಟು ತಮಗಿದ್ದ ಜಮೀನಿನಲ್ಲಿ ಭತ್ತದ ಬೆಳೆ ಮಾಡಿದ್ದೆವು. ಈ ಭಾಗದಲ್ಲಿ ಆನೆಗಳ ಹಾವಳಿಯಿಂದ ಎಷ್ಟೇ ಕಷ್ಟ ಇದ್ದರೂ ಬೆಳೆ ಮಾಡಿದ್ದೆವು‌. ಕೈಗೆ ಬಂದ ತುತ್ತನ್ನು ಯಾರೋ ಕಿಡಿಗೇಡಿಗಳು ರಾತ್ರೋರಾತ್ರಿ ಬೆಂಕಿ ಹಾಕಿ ಸುಟ್ಟುಹಾಕಿದ್ದಾರೆ‌. ಇದರಿಂದ ನಮಗೆ ಸುಮಾರು ೪ ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ. ನಾನು ಯಾರ ಬಳಿ ಹೋಗಿ ಕೇಳಲಿ ಎಂದು ಕಣ್ಣೀರು ಹಾಕಿದರಲ್ಲದೆ, ನಮಗಾದ ನಷ್ಟಕ್ಕೆ ಪರಿಹಾರ ನೀಡಿ ಎಂದು ನೊಂದ ರೈತ ದಂಪತಿ ವಿನಂತಿಸಿಕೊಂಡರು.

ವಿಷಯ ತಿಳಿದು ಸ್ಥಳಕ್ಕೆ ದಂಡಾಧಿಕಾರಿ ಎಂ ಮಮತಾ, ಅಧಿಕಾರಿಗಳಾದ ಪ್ರಕಾಶ್ ಹಾಗೂ ಮೈತ್ರಿ , ಅರೇಹಳ್ಳಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ
ಬೆಳಗಾವಿ ಜಿಲ್ಲೆ ವಿಭಜನೆ ಇರಾದೆ ಸಿಎಂಗಿದೆ