ಭತ್ತದ ಗದ್ದೆಗಳಿಗೆ ನುಗ್ಗಿ ಜಲಾವೃತ

KannadaprabhaNewsNetwork |  
Published : Jul 28, 2024, 02:05 AM IST
ಮುಂಡಗೋಡ: ನಿರಂತರ ಮಳೆಯಿಂದಾಗಿ ತಾಲೂಕಿನ ಬಹುತೇಕ ಕೆರೆ ಕಟ್ಟೆಗಳು ತುಂಬಿ ಹೆಚ್ಚುವರಿ ನೀರು ಸುತ್ತಮುತ್ತ ಪ್ರದೇಶದ ಭತ್ತದ ಗದ್ದೆಗಳಿಗೆ ನುಗ್ಗಿ ಜಲಾವೃತಗೊಂಡಿದ್ದು, ತಾಲೂಕಿನ ಚಿಗಳ್ಳಿ ಗ್ರಾಮದ ರೈತ ಕಮಲೇಶ್ ಆಲದಕಟ್ಟಿ ಅವರು ನಾಟಿ ಮಾಡಲು ಗದ್ದೆಯಲ್ಲಿ ಸಿದ್ದಪಡಿಸಿದ ಭತ್ತದ ಸಸಿಗಳು ನೀರಿನಲ್ಲಿ ಮುಳುಗಿವೆ.  | Kannada Prabha

ಸಾರಾಂಶ

ಬಿಟ್ಟೂ ಬಿಡದೆ ಹತ್ತಾರು ದಿನಗಳ ಕಾಲ ಕಾಡಿದ ಮಳೆಯಿಂದ ಜಲಾವೃತವಾಗಿದ್ದ ಮನೆಗಳು ಈಗ ಕುಸಿಯುತ್ತಿವೆ. ಶನಿವಾರ ಒಂದೇ ದಿನದಲ್ಲಿ 1 ಮನೆ ಪೂರ್ಣ ಹಾನಿ, 9 ಮನೆಗಳಿಗೆ ತೀವ್ರ ಹಾನಿ ಹಾಗೂ 44 ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ಮುಂಡಗೋಡ: ನಿರಂತರ ಮಳೆಯಿಂದಾಗಿ ತಾಲೂಕಿನ ಬಹುತೇಕ ಕೆರೆ- ಕಟ್ಟೆಗಳು ತುಂಬಿ ಹೆಚ್ಚುವರಿ ನೀರು ಸುತ್ತಮುತ್ತ ಪ್ರದೇಶದ ಭತ್ತದ ಗದ್ದೆಗಳಿಗೆ ನುಗ್ಗಿ ಜಲಾವೃತಗೊಂಡಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿದೆ. ತಾಲೂಕಿನ ಚಿಗಳ್ಳಿ ಗ್ರಾಮದ ರೈತ ಕಮಲೇಶ್ ಆಲದಕಟ್ಟಿ ಅವರು ನಾಟಿ ಮಾಡಲು ಗದ್ದೆಯಲ್ಲಿ ಭತ್ತದ ಸಸಿಗಳನ್ನು ಸಿದ್ಧಪಡಿಸಿದ್ದರು. ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ನಾಟಿ ಮಾಡಲು ಸಿದ್ಧಪಡಿಸಿದ್ದ ಸಸಿಗಳಿದ್ದ ಗದ್ದೆ ಮುಳುಗಡೆಯಾಗಿದೆ.ಇದರಿಂದ ರೈತ ಕಮಲೇಶ ಆಲದಕಟ್ಟಿ ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದು, ತಾಲೂಕಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.ಮಳೆ ಇಳಿಕೆ: 44 ಮನೆಗಳು ಕುಸಿತ

ಕಾರವಾರ: ಜಿಲ್ಲೆಯಲ್ಲಿ ಮಳೆ ಇಳಿಮುಖವಾದರೂ ಅನಾಹುತಗಳು ಮುಂದುವರಿಯುತ್ತಲೆ ಇದೆ. ಕೆಲವೆಡೆ ಮಾತ್ರ ಭಾರೀ ಮಳೆ ಸುರಿದಿದೆ. ಶನಿವಾರ 44 ಮನೆಗಳು ಹಾನಿಗೊಳಗಾಗಿವೆ.ಬಿಟ್ಟೂ ಬಿಡದೆ ಹತ್ತಾರು ದಿನಗಳ ಕಾಲ ಕಾಡಿದ ಮಳೆಯಿಂದ ಜಲಾವೃತವಾಗಿದ್ದ ಮನೆಗಳು ಈಗ ಕುಸಿಯುತ್ತಿವೆ. ಶನಿವಾರ ಒಂದೇ ದಿನದಲ್ಲಿ 1 ಮನೆ ಪೂರ್ಣ ಹಾನಿ, 9 ಮನೆಗಳಿಗೆ ತೀವ್ರ ಹಾನಿ ಹಾಗೂ 44 ಮನೆಗಳಿಗೆ ಭಾಗಶಃ ಹಾನಿಯಾಗಿದೆ.ಕಾರವಾರದ 2 ಕುಮಟಾ ಮತ್ತು ಅಂಕೋಲಾದ ತಲಾ 1 ಸೇರಿದಂತೆ ಒಟ್ಟು 4 ಕಾಳಜಿ ಕೇಂದ್ರಗಳಲ್ಲಿ 205 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ.

ಕರಾವಳಿ ಹಾಗೂ ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆ ಪ್ರಮಾಣ ಶನಿವಾರ ಕಡಿಮೆಯಾಗಿದೆ. ಆದರೆ ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ಸುರಿದ ಭಾರೀ ಮಳೆಯಿಂದ ಅಡಕೆ ತೋಟ ನಾಶವಾಗಿ ಕೃಷಿಕರು ತೀವ್ರ ಕಳವಳಗೊಂಡಿದ್ದಾರೆ. ನೂರಾರು ಅಡಕೆ ಮರಗಳು ಮುರಿದುಬಿದ್ದಿವೆ.3- 4 ದಿನಗಳಿಂದ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ಇತ್ತೀಚೆಗೆ ಪ್ರವಾಹ ತಂದಿಟ್ಟ ಪ್ರಮುಖ ನದಿಗಳಾದ ಅಘನಾಶಿನಿ, ಗಂಗಾವಳಿ, ಗುಂಡಬಾಳ, ಚಂಡಿಕಾ ನದಿಗಳಲ್ಲಿ ನೀರಿನ ಪ್ರಮಾಣ ಇಳಿಮುಖವಾಗುತ್ತಿದೆ.

ಲಿಂಗನಮಕ್ಕಿ ಅಣೆಕಟ್ಟೆಯಲ್ಲಿ ನೀರನ್ನು ಹೊರಬಿಡುವ ಮುನ್ನೆಚ್ಚರಿಕೆ ನೀಡಿದ್ದು, ವ್ಯಾಪಕ ಪ್ರಮಾಣದಲ್ಲಿ ನೀರನ್ನು ಹೊರಬಿಟ್ಟಲ್ಲಿ ಶರಾವತಿ ನದಿಯ ಇಕ್ಕೆಲಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಲಿದೆ. ಅದೇ ರೀತಿ ಬೊಮ್ಮನಳ್ಳಿ ಜಲಾಶಯದಿಂದ ನೀರನ್ನು ಹೊರಬಿಡುವ ಎಚ್ಚರಿಕೆ ನೀಡಲಾಗಿದೆ. ಇದರಿಂದ ಕಾಳಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎನ್‌ಡಿಎ ಮೈತ್ರಿ ಕೂಟದಿಂದ ಕೇಂದ್ರ ಸಚಿವ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಣೆ
ಪತ್ರಕರ್ತರಿಗೆ ಸ್ಪಂದಿಸುತ್ತಿದ್ದ ಶಾಮನೂರು ಸದಾ ಸ್ಮರಣೀಯ