ಪುಸ್ತಕ ಸಂಗ್ರಹ ಸತ್ಕಾರ್ಯಕ್ಕೆ ಪದ್ಮಶ್ರೀ ಗೌರವ: ಡಾ.ಸಿ.ಎನ್‌.ಅಶ್ವತ್ಥನಾರಾಯಣ

KannadaprabhaNewsNetwork |  
Published : Feb 10, 2026, 01:45 AM IST
9ಕೆಎಂಎನ್‌ಡಿ-13ಪಾಂಡವಪುರ ತಾಲೂಕಿನ ಹರಳಹಳ್ಳಿಯ ಅಂಕೇಗೌಡರ ಪುಸ್ತಕ ಮನೆಗೆ ಮಾಜಿ ಡಿಸಿಎಂ ಅಶ್ವತ್ಥನಾರಾಯಣ ಅವರು ಭೇಟಿ ಕೊಟ್ಟು ಅಂಕೇಗೌಡ ಅವರನ್ನು ಸನ್ಮಾನಿಸಿ ಗೌರವಿಸಿದರು. ಡಿಸಿಸಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಸಿ.ಪಿ.ಉಮೇಶ್‌, ಎನ್‌.ಎಸ್.ಇಂದ್ರೇಶ್, ಮಂಗಳಾ, ಇತರರಿದ್ದರು. | Kannada Prabha

ಸಾರಾಂಶ

50 ವರ್ಷಗಳ ಸತತ ಪ್ರಯತ್ನದಿಂದ ಅಂಕೇಗೌಡರು ಜ್ಞಾನದ ಶಕ್ತಿ ಏನು ಎಂಬುದನ್ನು ಅರ್ಥ ಮಾಡಿಕೊಂಡು ಅದನ್ನು ಜಗತ್ತಿಗೆ ತೋರಿಸಿದ್ದಾರೆ. ಎಲ್ಲರೂ ಹಣ, ಅಂತಸ್ತು, ಜಮೀನು, ಒಡವೆ ಸಂಪಾದನೆಗೆ ಪ್ರಾಮುಖ್ಯತೆ ಕೊಡುತ್ತಾರೆ. ಆದರೆ, ಅಂಕೇಗೌಡರು ಪುಸ್ತಕ ಸಂಗ್ರಹ ಮಾಡುವ ಮೂಲಕ ಜ್ಞಾನಕ್ಕೆ ಒತ್ತು ಕೊಟ್ಟಿದ್ದಾರೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಅಂಕೇಗೌಡರು ಪದ್ಮಶ್ರೀ ಪ್ರಶಸ್ತಿಗೆ ಅರ್ಜಿ ಹಾಕಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಇವರ ಪುಸ್ತಕ ಸಂಗ್ರಹದ ಸತ್ಕಾರ್ಯವನ್ನು ಗಮನಿಸಿ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ವ್ಯಕ್ತಿ ಸಂಸ್ಥೆಯಾಗಿ ಬೆಳೆದಿದ್ದಾರೆ. ಹಣ ಬಲ, ತೋಳ್ಬಲ ಮುಖ್ಯವಲ್ಲ. ಗುರಿ, ಶ್ರಮ ಇರಬೇಕು ಎಂಬ ಸಂದೇಶ ಕೊಟ್ಟಿದ್ದಾರೆ. ಇವರ ಕಲ್ಪನೆಗೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ಸಹಕಾರ ನೀಡುವುದಾಗಿ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

ಸೋಮವಾರ ಪಟ್ಟಣದಲ್ಲಿರುವ ಅಂಕೇಗೌಡರ ಪುಸ್ತಕ ಮನೆಗೆ ಭೇಟಿ ನೀಡಿದ ಅಲ್ಲಿನ ಪುಸ್ತಕ ಸಂಗ್ರಹ ಕಂಡು ಬೆರಗಾದ ಮಾಜಿ ಡಿಸಿಎಂ ಆಶ್ವತ್ಥ ನಾರಾಯಣಗೌಡ, ಕೆಲಕಾಲ ಪುಸ್ತಕ ಮನೆಯಲ್ಲಿ ಸುತ್ತಾಡಿ ಅಂಕೇಗೌಡರು ಸಂಗ್ರಹಿಸಿರುವ ಪುಸ್ತಕಗಳ ವೀಕ್ಷಣೆ ಮಾಡಿದರು. ಅಂಕೇಗೌಡರು ಸಂಗ್ರಹಿಸಿರುವ ಅಪರೂಪದ ನಾಣ್ಯಗಳನ್ನು ವೀಕ್ಷಿಸಿ ಆಶ್ವರ್ಯ ವ್ಯಕ್ತಪಡಿಸಿದರು. ಬಳಿಕ ಕಾರ್ಯಕರ್ತರೊಂದಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಂಕೇಗೌಡ ಅವರನ್ನು ಅಭಿನಂದಿಸಿದರು.

ನಂತರ ಮಾತನಾಡಿದ ಅವರು, 50 ವರ್ಷಗಳ ಸತತ ಪ್ರಯತ್ನದಿಂದ ಅಂಕೇಗೌಡರು ಜ್ಞಾನದ ಶಕ್ತಿ ಏನು ಎಂಬುದನ್ನು ಅರ್ಥ ಮಾಡಿಕೊಂಡು ಅದನ್ನು ಜಗತ್ತಿಗೆ ತೋರಿಸಿದ್ದಾರೆ. ಎಲ್ಲರೂ ಹಣ, ಅಂತಸ್ತು, ಜಮೀನು, ಒಡವೆ ಸಂಪಾದನೆಗೆ ಪ್ರಾಮುಖ್ಯತೆ ಕೊಡುತ್ತಾರೆ. ಆದರೆ, ಅಂಕೇಗೌಡರು ಪುಸ್ತಕ ಸಂಗ್ರಹ ಮಾಡುವ ಮೂಲಕ ಜ್ಞಾನಕ್ಕೆ ಒತ್ತು ಕೊಟ್ಟಿದ್ದಾರೆ. ಸ್ಪಷ್ಟ ಗುರಿ ಮತ್ತು ಸಂದೇಶ ಇಟ್ಟುಕೊಂಡು ಸಮಾಜ ಮುಖಿಗಳಾಗಿ ಸತ್ಕಾರ್ಯದ ಕೆಲಸ ಮಾಡಿದ್ದಾರೆ. ಅವರ ಈ ಸಾಧನೆಯಿಂದ ಪಾಂಡವಪುರ ಹೆಸರುವಾಸಿಯಗಿದೆ. ಅಂಕೇಗೌಡರಿಗೆ ನಳಂದ ಮತ್ತು ತಕ್ಷಶಿಲೆ ರೀತಿಯಲ್ಲಿ ಈ ಗ್ರಂಥಾಲಯ ಬೆಳೆಯಬೇಕು ಎಂಬುದು ಅವರ ಇಚ್ಛೆಯಾಗಿದೆ ಎಂದರು.

ಅಂಕೇಗೌಡರ ಪುಸ್ತಕ ಸಂಗ್ರಹ ಗಮನಿಸಿದ್ದ ಹಿಂದಿನ ಮುಖ್ಯಮಂತ್ರಿ ಸದಾನಂದಗೌಡರು 2012ರಲ್ಲಿ ಬಜೆಟ್‌ನಲ್ಲಿ 50 ಲಕ್ಷ ಘೋಷಿಸಿದ್ದರು. ಅದೇ ರೀತಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡ ಸಹಾಯಾಸ್ತ ಚಾಚಿದ್ದಾರೆ. ಮುಂದಿನ ದಿನಗಳಲ್ಲಿ ಅಂಕೇಗೌಡರ ಆಶಯಕ್ಕೆ ಅನುಗುಣವಾಗಿ ಎಲ್ಲ ರೀತಿಯ ಸಹಕಾರ ಸಿಗಲಿದೆ ಎಂದು ನುಡಿದರು.

ಪುಸ್ತಕ ಪ್ರೇಮಿ, ಪದ್ಮಶ್ರೀ ಪ್ರಶಸ್ತಿ ಭಾಜನರಾದ ಅಂಕೇಗೌಡ ಮಾತನಾಡಿ, ಶ್ರೀಮಂತರ ಮಕ್ಕಳಿಗೆ ಉನ್ನತ ಶಿಕ್ಷಣ ಸುಲಭವಾಗಿ ಲಭ್ಯವಾಗುತ್ತದೆ. ಬಡವರ ಮಕ್ಕಳಿಗೆ ಇದು ಕಬ್ಬಿಣದ ಕಡಲೆ. ಬಡ ವಿದ್ಯಾರ್ಥಿಗಳಿಗಾಗಿ ಈ ಗ್ರಂಥಾಲಯ ಇದೆ. ಸತತ 50 ವರ್ಷಗಳು ಕಷ್ಟಪಟ್ಟು ಪುಸ್ತಕ ಭಂಡಾರ ಸಂಗ್ರಹಿಸಿದ್ದೇನೆ. ಗ್ರಂಥಾಲಯಕ್ಕೆ ಶಕ್ತಿ ತುಂಬ ಬೇಕಿದೆ. ಇದನ್ನು ಉಳಿಸಲು ಎಲ್ಲರೂ ಸಹಕಾರ ನೀಡಬೇಕು. ಇಲ್ಲಿ ಸಂಗ್ರಹವಾಗಿರುವ ಪುಸ್ತಕಗಳು ಪ್ರದರ್ಶನವಾಗಬೇಕು. ನಾನು ಬೀದಿಯಲ್ಲಿ ನಿಂತು ರಾಜಕಾರಣ ಮಾಡಿದವನಲ್ಲ. ನನ್ನ ಬದುಕೇ ಪುಸ್ತಕದ ಮನೆಯಾಗಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಗಳಾ ನವೀನ್‌ಕುಮಾರ್, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಉಮೇಶ್, ಕ್ಷೇತ್ರಾಧ್ಯಕ್ಷ ನೀಲನಹಳ್ಳಿ ಧನಂಜಯ, ಟೌನ್ ಅಧ್ಯಕ್ಷ ಸೋಮಶೇಖರ್, ಶ್ರೀರಂಗಪಟ್ಟಣ ಟಿ.ಶ್ರೀಧರ್, ರೈತ ಮೋರ್ಚಾ ಮಾಜಿ ಜಿಲ್ಲಾಧ್ಯಕ್ಷ ಎಚ್.ಎನ್.ಮಂಜುನಾಥ್, ಮೈಷುಗರ್ ಮಾಜಿ ಅಧ್ಯಕ್ಷ ಜೆ.ಶಿವಲಿಂಗೇಗೌಡ, ಎಸ್‌ಎನ್‌ಟಿ ಸೋಮಶೇಖರ್, ನವೀನ್‌ಕುಮಾರ್, ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತೋಟದ ಕಾರ್ಮಿಕರ ಮೇಲೆ ಚಿರತೆ ದಾಳಿ
ಕನ್ನಡ ಭಾಷಾ ನೀತಿಯ ಅನುಷ್ಠಾನಕ್ಕೆ ವಿಶೇಷ ಕ್ರಮ: ಡಿಸಿ ಪ್ರಭುಲಿಂಗ ಕವಳಿಕಟ್ಟಿ