ಸ್ವಯಂ ಜನಗಣತಿ ಮಾಡಿಕೊಂಡ ಪದ್ಮಶ್ರೀ ಪುರಸ್ಕೃತೆ ಭೀಮವ್ವ

KannadaprabhaNewsNetwork |  
Published : Apr 02, 2026, 02:15 AM IST
1ಕೆಪಿಎಲ್21 ಪಧ್ಮಶ್ರೀ ಪ್ರಶಸ್ತಿ ಪುರಸ್ಕೃತ ಭೀಮವ್ವ ಶಿಳ್ಳಿಕ್ಯಾತರ ಅವರು ಸ್ವಯಂ ಗಣತಿ ಮಾಡಿಕೊಳ್ಳುವಂತೆ ಮನವಿ ಮಾಡುತ್ತಿರುವುದು. | Kannada Prabha

ಸಾರಾಂಶ

ಈಗ ಸರ್ಕಾರ ನೀಡಿರುವ ಸ್ವಯಂ ಗಣತಿ ಅವಕಾಶ ಸದುಪಯೋಗ ಮಾಡಿಕೊಂಡು ಎಲ್ಲರೂ ಗಣತಿ ಮಾಡಿಕೊಳ್ಳುವಂತೆ ಕರೆ

ಕೊಪ್ಪಳ: ದೇಶಾದ್ಯಂತ ಆರಂಭವಾಗಿರುವ ಸ್ವಯಂ ಗಣತಿಯಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಭೀಮವ್ವ ಶಿಳ್ಳಿಕ್ಯಾತರ ಮಾಡಿಕೊಂಡಿದ್ದಲ್ಲದೆ ನಾನು ಮಾಡಿದ್ದೇನೆ, ನೀವು ಸ್ವಯಂ ಗಣತಿ ಮಾಡಿಕೊಳ್ಳಿ ಎಂದು ಕರೆ ನೀಡಿದ್ದಾರೆ.

ತಮ್ಮ ಮನೆಯವರು ಮತ್ತು ಗಣತಿ ಸಿಬ್ಬಂದಿ ಸಹಾಯದೊಂದಿಗೆ ದೇಶದ ಜನಗಣತಿಯಲ್ಲಿ ಭಾಗಿಯಾಗಿರುವ ಭೀಮವ್ವ ಶಿಳ್ಳಿಕ್ಯಾತರ, ಜನಗಣತಿ ಅತ್ಯಂತ ಮಹತ್ವದ್ದಾಗಿದ್ದು, ಎಲ್ಲರೂ ಭಾಗಿಯಾಗಬೇಕು. ಅದರಲ್ಲೂ ಈಗ ಸರ್ಕಾರ ನೀಡಿರುವ ಸ್ವಯಂ ಗಣತಿ ಅವಕಾಶ ಸದುಪಯೋಗ ಮಾಡಿಕೊಂಡು ಎಲ್ಲರೂ ಗಣತಿ ಮಾಡಿಕೊಳ್ಳುವಂತೆ ಕರೆ ನೀಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ತಮ್ಮ ಬೆಂಗಳೂರ ನಿವಾಸದಲ್ಲಿಯೇ ಸ್ವಯಂ ಗಣತಿ ದಾಖಲಿಸಿದ್ದರೇ ಇತ್ತ ಕೊಪ್ಪಳದಲ್ಲಿ ಸಂಸದ ರಾಜಶೇಖರ ಹಿಟ್ನಾಳ ತಮ್ಮ ಸಂಸದರ ಕಚೇರಿಯಲ್ಲಿ ಸಾರ್ವಜನಿಕವಾಗಿ ಸ್ವಯಂ ಗಣತಿ ಮಾಡಿಕೊಂಡಿದ್ದಾರೆ. ಇಬ್ಬರು ಸಹ ಸಾರ್ವಜನಿಕರಿಗೆ ದೇಶದ ಗಣತಿಯಲ್ಲಿ ಭಾಗವಹಿಸುವಂತೆ ಕೋರಿದ್ದಾರೆ.

ಸ್ವಯಂ ಗಣತಿ ಮಾಡಿಕೊಳ್ಳುವುದಕ್ಕೆ ಅವಕಾಶ ನೀಡಲಾಗಿದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು, ತಮ್ಮ ಕುಟುಂಬ ಮತ್ತು ವೈಯಕ್ತಿಕ ಮಾಹಿತಿ ಕೇಳಿರುವಂತೆ ಭರ್ತಿ ಮಾಡಬೇಕು. ಗಣತಿಯ ಎಲ್ಲ ಮಾಹಿತಿ ಗೌಪ್ಯವಾಗಿರುತ್ತದೆ ಎಂದು ಹೇಳಿದ್ದಾರೆ.

ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಖ್ಯನ್ಯಾಯಾಧೀಶ ಚಂದ್ರಶೇಖರ ಅವರು ಸಹ ಸ್ವಯಂ ಗಣತಿಯಲ್ಲಿ ಭಾಗವಹಿಸಿ ಗಣತಿ ಮಾಡಿಕೊಂಡಿದ್ದು, ಎಲ್ಲರೂ ಮಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಏ.1 ರಿಂದ ಏ.15 ವರೆಗೂ ನಡೆಯುವ ಸ್ವಯಂ ಗಣತಿಯಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಕರೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ ತಮ್ಮ ಕಚೇರಿಯಲ್ಲಿಯೇ ಸ್ವಯಂ ಗಣತಿ ಮಾಡಿಕೊಂಡು ಸ್ವಯಂ ಗಣತಿಗೆ ಚಾಲನೆ ನೀಡಿದರು.

ಇದೊಂದು ಅತ್ಯಮೂಲ್ಯ ಕಾರ್ಯವಾಗಿದ್ದು, ಪ್ರತಿಯೊಬ್ಬರು ಭಾಗಿಯಾಗುವಂತೆ ಕೋರಿದರು. ಅತ್ಯಂತ ಸರಳವಾಗಿ ತಮ್ಮ ಮಾಹಿತಿ ದಾಖಲಿಸಲು ಸರ್ಕಾರ ಅವಕಾಶ ನೀಡಿದ್ದು, ಅದರಂತೆ ವೆಬ್ ಸೈಟ್ ತೆರೆದು, ದಾಖಲಿಸುವ ಮೂಲಕ ಗಣತಿ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿದ್ದಾರೆ.

ಗಣತಿ ಕಾರ್ಯದಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳುವುದು ಅಗತ್ಯ. ದೇಶದ ಯೋಜನೆ ರೂಪಿಸಲು ಮತ್ತು ಸ್ಥಿತಿಗತಿ ಅರಿಯಲು ಗಣತಿ ಅತ್ಯಗತ್ಯವಾಗಿದ್ದು, ಪ್ರತಿಯೊಬ್ಬರು ಭಾಗವಹಿಸಬೇಕು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಸ್ವಯಂ ಗಣತಿ ಕಾರ್ಯದಲ್ಲಿ ನಾನು ಭಾಗವಹಿಸಿದ್ದೇನೆ, ನಾನೇ ನನ್ನೆಲ್ಲಾ ಮಾಹಿತಿ ಭರ್ತಿ ಮಾಡಿ ದಾಖಲಿಸಿದ್ದು, ಪ್ರತಿಯೊಬ್ಬರು ದಾಖಲಿಸುವ ಮೂಲಕ ಕೈಜೋಡಿಸಬೇಕು ಎಂದು ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಡವರಿಗೆ ಸಾಮೂಹಿಕ ವಿವಾಹ ಅನುಕೂಲ: ಮುದುಕೇಶ್ವರ ಶಿವಾಚಾರ್ಯರು ಸ್ವಾಮಿಗಳು
ಲಿಂ. ಸಿದ್ಧಗಂಗಾ ಡಾ. ಶಿವಕುಮಾರ ಶ್ರೀ ಸದಾ ಸ್ಮರಣೀಯರು: ಜಗದೀಶ ಸಂಕನೂರ