ಕನ್ನಡಪ್ರಭ ವಾರ್ತೆ ಮಂಗಳೂರು
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಪದ್ಮರಾಜ್, ಸ್ವಾಮೀಜಿಯವರ ಆಶೀರ್ವಾದ ಪಡೆದರು. ಒಡಿಯೂರು ಸಂಸ್ಥಾನಕ್ಕೆ ಭೇಟಿ ನೀಡಿ ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದುಕೊಂಡರು. ಬಳಿಕ ಶ್ರೀ ಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀ ಮೋಹನದಾಸ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಪೋಷಕರ ಆಶಯ ಈಡೇರಿಸೋಣ:ಪುತ್ತೂರಿನ ಪುರುಷರಕಟ್ಟೆ, ಮುಂಡೂರು, ತಿಂಗಳಾಡಿಯಲ್ಲಿ ಮತ ಯಾಚನೆ ಬಳಿಕ ಕುಂಬ್ರದಲ್ಲಿ ಕಾಂಗ್ರೆಸ್ನ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪದ್ಮರಾಜ್ ಪೂಜಾರಿ, ದಕ್ಷಿಣ ಕನ್ನಡದ ಶಕ್ತಿ ಕೇಂದ್ರ ಮಂಗಳೂರಿನಲ್ಲಿ ಉದ್ಯೋಗ ಸೃಷ್ಟಿಸಬೇಕು ಎಂಬ ಯೋಜನೆ ಇಟ್ಟುಕೊಂಡು ಚುನಾವಣೆ ಎದುರಿಸಲಿದ್ದೇವೆ. ಇದರಿಂದ ಮಾನವ ಸಂಪನ್ಮೂಲದ ಸದ್ಬಳಕೆ ಮಾಡಿದಂತಾಗುತ್ತದೆ. ಸಂಧ್ಯಾ ಕಾಲದಲ್ಲಿ ಮಕ್ಕಳು ತಮ್ಮ ಜತೆಗಿರಬೇಕು ಎಂಬ ಪೋಷಕರ ಆಶಯವೂ ಈಡೇರಿದಂತಾಗುತ್ತದೆ ಎಂದು ಹೇಳಿದರು.
ಅಡಕೆ, ರಬ್ಬರ್ ಬೆಳೆಗಾರರು ಯಾವ ರೀತಿಯ ಸಂಕಷ್ಟ ಅನುಭವಿಸುತ್ತಿದ್ದಾರೆ ಎನ್ನುವುದು ನಮಗೆ ತಿಳಿದಿದೆ. ನಮ್ಮೂರಲ್ಲೇ ಸಾಕಷ್ಟು ಬೆಳೆ ಬೆಳೆಯುತ್ತಿದ್ದರೂ ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ ಅವರು, ರೈತರಿಗೆ ಬೆಂಬಲ ನೀಡಲು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಘೋಷಿಸಿದೆ. ಇದನ್ನು ಬಿಜೆಪಿಗರು ಸುಳ್ಳು ಭರವಸೆ ಎಂದು ಹೇಳುವಂತಿಲ್ಲ. ಕಾಂಗ್ರೆಸ್ ಸರ್ಕಾರ ಜನರಿಗೆ ಭದ್ರತೆಯ ಭಾವನೆ ನೀಡಿದೆ ಎಂದರು.
ವಿಟ್ಲದ ವಿವಿಧ ಕಡೆಗಳಿಗೆ ಭೇಟಿ ನೀಡಿ ಪ್ರಚಾರ ನಡೆಸಿದ ಪದ್ಮರಾಜ್, ಕುಕ್ಕಾಜೆ ಶ್ರೀ ಕಾಳಿಕಾಂಬಾ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪೆರುವಾಯಿ ಚರ್ಚ್ಗೆ ಭೇಟಿ ನೀಡಿದರು. ಕಂಬಳಬೆಟ್ಟುವಿನಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಆತ್ಮೀಯ ಮಾತುಕತೆ ನಡೆಸಿದರು.ಮಾಸ್ಟರ್ ಪ್ಲಾನರಿ, ಕ್ಯಾಶ್ಯೂ ಫ್ಯಾಕ್ಟರಿ ಭೇಟಿ: