ಕನ್ನಡಪ್ರಭ ವಾರ್ತೆ ಕಾಪು
ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಂಶುಪಾಲ ವಿದ್ವಾನ್ ಸತ್ಯನಾರಾಯಣ ಆಚಾರ್ಯ, ಪಾಜಕ ಕ್ಷೇತ್ರದ ಪ್ರಧಾನ ಅರ್ಚಕ ಮಾಧವ ಉಪಾಧ್ಯಾಯ, ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ - ಮಹಾಗಣಪತಿ ದೇವಾಲಯದಲ್ಲಿ ನಡೆಯುವ ಭಕ್ತಿ ಸಿದ್ಧಾಂತೋತ್ಸವ - ರಾಮೋತ್ಸವ ಸಮಿತಿಯ ಸದಸ್ಯರಾದ ವಿದ್ವಾಂಸ ಕುತ್ಪಾಡಿ ಕೃಷ್ಣರಾಜ ಆಚಾರ್ಯ, ವಿಠಲ ಭಟ್ ನಂದಳಿಕೆ, ಅನಂತ ಸಾಮಗ ಸಗ್ರಿ, ವಿದ್ವಾಂಸರು, ವಿದ್ಯಾಪೀಠದ ವಿದ್ಯಾರ್ಥಿಗಳು, ಭಕ್ತರು ಇದ್ದರು.
ಉಡುಪಿ ಕೃಷ್ಣಮಠ ಸರ್ವಜ್ಞಪೀಠಕ್ಕೆ ಸುವರ್ಣ ಕವಚ ಅರ್ಪಣೆಸೌರ ಯುಗಾದಿಯ ಪರ್ವ ದಿನದಂದು ಸೋಮವಾರ, ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥರು ತಮ್ಮ ಸಂನ್ಯಾಸಾಶ್ರಮದ ಸುವರ್ಣ ಮಹೋತ್ಸವದ ಅಂಗವಾಗಿ, ಕೃಷ್ಣಮಠದ ಸರ್ವಜ್ಞ ಪೀಠಕ್ಕೆ ರಚಿಸಿರುವ ಸುವರ್ಣ ಕವಚವನ್ನು ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರ ಮೂಲಕ ಅರ್ಪಣೆ ಮಾಡಿದರು.
ಶ್ರೀ ವಿಶ್ವಪ್ರಿಯ ತೀರ್ಥರು ಆಶೀರ್ವಚನ ನೀಡಿ, ಇಷ್ಟು ದಿವಸ ಉಡುಪಿ ರಜತ ಪೀಠಪುರ ಆಗಿತ್ತು, ಇಂದಿನಿಂದ ಸುವರ್ಣ ಪೀಠಪುರ ಆಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.ಇನ್ನು ಮುಂದೆ ಇಲ್ಲಿ ಪೀಠಾರೋಹಣ ಮಾಡುವ ಪ್ರತಿಯೊಬ್ಬ ಸ್ವಾಮೀಜಿಯೂ ಸು-ವರ್ಣಗಳನ್ನೇ ಆಡುವಂತಹ ಒಂದು ದೊಡ್ಡ ಜವಾಬ್ದಾರಿಯನ್ನು ಸುಗುಣೇಂದ್ರ ತೀರ್ಥರು ಕೊಟ್ಟಿದ್ದಾರೆ ಎಂದು ಹೇಳಿದರು.
ಸಾನಿಧ್ಯ ವಹಿಸಿದ್ದ ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು, ವಿಶ್ವ ಎಂದರೆ ಪ್ರಾಣ ದೇವರು. ಈ ಸುವರ್ಣ ಪೀಠದಲ್ಲಿ ಅವರು ಇಲ್ಲಿ ಚೆನ್ನಾಗಿ ವಾಸ ಮಾಡುತ್ತಾರೆ. ಆದ್ದರಿಂದ ಇದು ವಿಶ್ವವಸು ಪೀಠ ಎಂದು ಕರೆದರು.ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದ ಸಮಾರಂಭದಲ್ಲಿ ಅನೇಕ ಮಂದಿ ಭಕ್ತರು ಹಾಗೂ ವಿದ್ವಾಂಸರು ಪಾಲ್ಗೊಂಡರು.ವಾಯು ದೇವರ ಅವತಾರತ್ರಯ ಮತ್ತು ರಾಮ, ವಿಠಲ ದೇವರ ಚಿತ್ರಗಳಿರುವ ಈ ಕವಚವನ್ನು 24 ಕ್ಯಾರೆಟ್ ಶುದ್ಧ ಚಿನ್ನದಲ್ಲಿ ನಿರ್ಮಿಸಲಾಗಿದೆ. ಇದನ್ನು ನಿರ್ಮಿಸಿದ ಗಂಜೀಫಾ ರಘುಪತಿ ಭಟ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.