ನಿರ್ಮಲಾನಂದನಾಥ ಶ್ರೀಗಳ ಮುತ್ತಿನ ಪಲ್ಲಕ್ಕಿ ಉತ್ಸವ

KannadaprabhaNewsNetwork |  
Published : Mar 01, 2026, 02:00 AM IST
28ಕೆಎಂಎನ್ ಡಿ29,30 | Kannada Prabha

ಸಾರಾಂಶ

ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಬೆಳಗ್ಗೆ ಕ್ಷೇತ್ರದ ಶ್ರೀ ಕಾಲಭೈರವೇಶ್ವರಸ್ವಾಮಿಗೆ ಸುವರ್ಣ ಕವಚ ಅಲಂಕಾರ ಹಾಗೂ ಶ್ರೀ ಗಂಗಾಧರೇಶ್ವರಸ್ವಾಮಿಗೆ ರಜತ ನಾಗಾಭರಣ ಅಲಂಕಾರ ಪೂಜೆ ಕೈಂಕರ್ಯಗಳು ನಡೆದವು.

ಕನ್ನಡಪ್ರಭ ವಾರ್ತೆ ನಾಗಮಂಗಲ

ತಾಲೂಕಿನ ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಶನಿವಾರ ಸಂಜೆ ಕ್ಷೇತ್ರಪಾಲಕ ಶ್ರೀ ಕಾಲ ಭೈರವೇಶ್ವರ ಸ್ವಾಮಿಯ ಹೂವಿನ ಪಲ್ಲಕ್ಕಿ ಉತ್ಸವ ಮತ್ತು ಶ್ರೀಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಶ್ರೀಗಳ ಮುತ್ತಿನ ಪಲ್ಲಕ್ಕಿ ಉತ್ಸವವು ಸಹಸ್ರಾರು ಭಕ್ತ ಸಮೂಹದ ನಡುವೆ ಬಹಳ ವಿಜೃಂಭಣೆಯಿಂದ ನೆರವೇರಿತು.

ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಬೆಳಗ್ಗೆ ಕ್ಷೇತ್ರದ ಶ್ರೀ ಕಾಲಭೈರವೇಶ್ವರಸ್ವಾಮಿಗೆ ಸುವರ್ಣ ಕವಚ ಅಲಂಕಾರ ಹಾಗೂ ಶ್ರೀ ಗಂಗಾಧರೇಶ್ವರಸ್ವಾಮಿಗೆ ರಜತ ನಾಗಾಭರಣ ಅಲಂಕಾರ ಪೂಜೆ ಕೈಂಕರ್ಯಗಳು ನಡೆದವು.

ಕಾಲಭೈರವೇಶ್ವರಸ್ವಾಮಿಯ ಹೂವಿನ ಪಲ್ಲಕ್ಕಿ ಮತ್ತು ಡಾ.ನಿರ್ಮಲಾನಂದನಾಥ ಶ್ರೀಗಳ ಮುತ್ತಿನ ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡ ಭಕ್ತರಿಗೆ ಶ್ರೀಗಳು ದರ್ಶನಾಶೀರ್ವಾದ ನೀಡಿ ಆಶೀರ್ವದಿಸಿದರು.

ಈ ವೇಳೆ ಹಾಸನ ಶಾಖಾ ಮಠದ ಶಂಭೂನಾಥ ಸ್ವಾಮೀಜಿ, ನಾಗಮಂಗಲ ಶಾಖಾ ಮಠದ ಸತ್ಕೀರ್ತಿನಾಥ ಸ್ವಾಮೀಜಿ,‌ ಬ್ರಹ್ಮಚಾರಿ ಸಾಯಿಕೀರ್ತಿನಾಥ ಸ್ವಾಮೀಜಿ ಇದ್ದರು. ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥಸ್ವಾಮೀಜಿ, ಶ್ರೀ ಮಠದ ಚೈತನ್ಯನಾಥ ಸ್ವಾಮೀಜಿ ಸೇರಿದಂತೆ ವಿವಿಧ ಶಾಖಾ ಮಠಗಳ ಶ್ರೀಗಳು ಹಾಗೂ ಸಹಸ್ರಾರು ಮಂದಿ ಭಕ್ತರು ಇದ್ದರು.

ಇಂದಿನಿಂದ ಕೈಗಾರಿಕಾ ವಸ್ತು ಪ್ರದರ್ಶನ:

ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ಮಾ.1ರಿಂದ 3ರವರೆಗೆ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ನಡೆಯಲಿದೆ. ಕೃಷಿ ಪರಿಕರ, ಉಪಕರಣಗಳ ಕಂಪನಿ, ರಸಗೊಬ್ಬರ, ಜೈವಿಕ ರಸಗೊಬ್ಬರ, ಬೀಜೋತ್ಪಾದಕ ಕಂಪನಿ, ಸ್ವ ಸಹಾಯ ಸಂಘಗಳು, ಅಭಿವೃದ್ಧಿ ಇಲಾಖೆಗಳು, ಸರ್ಕಾರೇತರ ಸಂಸ್ಥೆಗಳು ಮೂರು ದಿನಗಳ ಕಾಲ ನಡೆಯುವ ವಸ್ತು ಪ್ರದರ್ಶನದಲ್ಲಿ ಪಾಲ್ಗೊಳ್ಳಲಿವೆ.ಮಾ.5 ರಂದು ಶ್ರೀ ವೆಂಕಟರಮಣಸ್ವಾಮಿ ರಥೋತ್ಸವ

ಶ್ರೀರಂಗಪಟ್ಟಣ

ತಾಲೂಕಿನ ಕರಿಘಟ್ಟದ ಶ್ರೀವೆಂಕಟರಮಣಸ್ವಾಮಿ ದೇವಸ್ಥಾನದ ಬ್ರಹೋತ್ಸವ ರಥೋತ್ಸವ ಮಾ.3ರಂದು ನಡೆಯಲಿದೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ.ಉಮಾ ತಿಳಿಸಿದರು.

ದೇಗುಲದಲ್ಲಿ ಮಾ.1ರಂದು ಸಂಜೆ ನಿತ್ಯಾರಾಧನೆ, ಮಂಗಳಸ್ವಪನ ಮಹಾ ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಗರುಡೋತ್ಸವ, ಮಾ.2ರ ಸಂಜೆ ನಿತ್ಯಾರಾಧನೆ, ಮಂಗಳಸ್ವಪನ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಪುಷ್ಪಮಂಟಪೋತ್ಸವ ನಡೆಯಲಿದೆ.

ಮಾ.3 ಮಂಗಳವಾರ ಕಲ್ಯಾಣೋತ್ಸವ, ಮಾ.4ರ ಬೆಳಗ್ಗೆ ಗರುಡೋತ್ಸವ, ಸಂಜೆ ಗಜೇಂದ್ರ ಮೋಕ್ಷ, ಮಾ.5 ರಂದು ಬ್ರಹೋತ್ಸವ ರಥೋತ್ಸವ ವೈಭವದಿಂದ ಸಾಗಲಿದೆ. ಮಾ.6 ರಂದು ಬೆಳಗ್ಗೆ ಗರುಡೋತ್ಸವ, ಸಂಜೆ ದವಳೋತ್ಸವ, ರಾತ್ರಿ ಶಯನೋತ್ಸವ, ಮಾ.7ರ ಬೆಳಗ್ಗೆ 30.30ಕ್ಕೆ ತೀರ್ಥಸ್ನಾನ ಹಾಗೂ ಮಾ.8 ರಂದು ಬೆಳಗ್ಗೆ 1.30ಕ್ಕೆ ಮಹಾಭಿಷೇಕ ಸೇರಿದಂತೆ ಧಾರ್ಮಿಕ ಕೈಂಕರ್ಯಗಳು ಜರುಗಲಿದೆ. ಪ್ರತಿ ನಿತ್ಯ ಉತ್ಸವಗಳು ಸಂಜೆ 6 ರಿಂದ ರಾತ್ರಿ 8.30ರ ವರೆಗೆ ಹಾಗೂ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಮಾ.3ರಂದು ನಿಮಿಷಾಂಬ ದೇವಿ ದರ್ಶನವಿಲ್ಲ

ಶ್ರೀರಂಗಪಟ್ಟಣ:

ಚಂದ್ರಗ್ರಹಣದ ಅಂಗವಾಗಿ ಮಾ.3ರಂದು ಪಟ್ಟಣ ಸಮೀಪದ ಗಂಜಾಂನ ಶ್ರೀನಿಮಿಷಾಂಬ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ಮಂಗಳವಾರ ಪೌರ್ಣಮಿ ಹಾಗೂ ಚಂದ್ರಗ್ರಹಣ ಇರುವುದರಿಂದ ಮಧ್ಯಾಹ್ನ 12.30 ರಿಂದ ರಾತ್ರಿ 7.30ರ ವರೆಗೆ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ. ಜೊತೆಗೆ ಅನ್ನ ದಾಸೋಹವೂ ಇಲ್ಲ ಎಂದು ಮಾಹಿತಿ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತೀಯ ವಿಜ್ಞಾನಿಗಳ ಕೊಡುಗೆ ಗೌರವಿಸಿ: ಮಜ್ಜಿಗೆಪುರ ಕೆ.ಶಿವರಾಮು
ಸಿರವಿ ಸಮಾಜದಿಂದ ಆಯಿ ಮಾತಾ ಬಂಡಿ ಉತ್ಸವ