ಕನ್ನಡಪ್ರಭ ವಾರ್ತೆ ಮಂಗಳೂರು
ಎಲ್ಲರೂ ಎಳವೆಯಿಂದಲೇ ಸಂಸ್ಕಾರವನ್ನು ರೂಢಿಸಿಕೊಂಡು ಬಲವರ್ಧಿತವಾಗಬೇಕು ಎಂದು ಸ್ವಾಮೀಜಿ ಹೇಳಿದರು. ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ವೇದಮೂರ್ತಿ ಶ್ರೀನಿವಾಸ್ ಭಟ್, ವಿದ್ವಾನ್ ಶ್ರೀಕರ ಭಟ್, ನವೀನ್ ಚಂದ್ರ ಭಟ್ ಕೊಂಚಾಡಿ, ಸುದರ್ಶನ ಬನ್ನಿಂತಾಯ, ವಿದ್ವಾನ್ ಶೇಷಗಿರಿ ಆಚಾರ್ಯ, ಶಿವಳ್ಳಿ ಸ್ಪಂದನದ ಅಧ್ಯಕ್ಷ ಕೃಷ್ಣ ಭಟ್, ಕಾರ್ಯದರ್ಶಿ ಉದಯಶಂಕರ, ಉಪಾಧ್ಯಕ್ಷ ವಾಸುದೇವ ಭಟ್, ಸಂಘಟನಾ ಕಾರ್ಯದರ್ಶಿಗಳಾದ ರವೀಶ್ ನಾರ್ಶ, ಪ್ರದೀಪ್ ಕುಮಾರ್, ಜತೆ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಇದ್ದರು. ಕಾವೂರು ವಲಯದ ಅಧ್ಯಕ್ಷ ಅರವಿಂದ ಹೆಬ್ಬಾರ್ ಸ್ವಾಗತಿಸಿದರು. ಚಂದ್ರಿಕಾ ಸುರೇಶ್ ವಂದಿಸಿದರು. ಕಾವೂರು ವಲಯದ ಕೋಶಾಧಿಕಾರಿ ದಾಮೋದರ ಆಚಾರ್ಯ ಮತ್ತು ರಂಗನಾಥ ಅಂಗಿತ್ತಾಯ ನಿರೂಪಿಸಿದರು.ನೂರಕ್ಕೂ ಹೆಚ್ಚು ಬಾಲಕ ಬಾಲಕಿಯರು ಈ ಶಿಬಿರದಲ್ಲಿ ಭಾಗವಹಿಸಿದ್ದರು.