ರಾಮನಗರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆ ಕುರಿತು ಜನಜಾಗೃತಿ ಮೂಡಿಸಲು ಎಲ್ಇಡಿ ಕಲಾಜಾಥಾ ಪ್ರದರ್ಶನ ಸಂಚಾರಿ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚಾಲನೆ ನೀಡಿ, ಪಂಚ ಗ್ಯಾರಂಟಿ ಯೋಜನೆ ಕುರಿತು ಸಾರ್ವಜನಿಕರಿಗೆ ವ್ಯಾಪಕವಾಗಿ ಪ್ರಚಾರ ನೀಡುವಂತೆ ಕರೆ ನೀಡಿದರು.
ರಾಮನಗರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆ ಕುರಿತು ಜನಜಾಗೃತಿ ಮೂಡಿಸಲು ಎಲ್ಇಡಿ ಕಲಾಜಾಥಾ ಪ್ರದರ್ಶನ ಸಂಚಾರಿ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚಾಲನೆ ನೀಡಿ, ಪಂಚ ಗ್ಯಾರಂಟಿ ಯೋಜನೆ ಕುರಿತು ಸಾರ್ವಜನಿಕರಿಗೆ ವ್ಯಾಪಕವಾಗಿ ಪ್ರಚಾರ ನೀಡುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ. ರಾಜು, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷರಾದ ಎಸ್. ಗಂಗಾಧರ್, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ನಟರಾಜು ಗಾಣಕಲ್, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನ್ಮೋಲ್ ಜೈನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರವಿರಾಜ್ , ಅಡವಿ ಫೌಂಡೇಶನ್ ಮುಖ್ಯಸ್ಥ ಶ್ರೀನಿವಾಸ್ ಹಾಗೂ ಕಲಾವಿದರ ತಂಡ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಕಲಾವಿದರು ಉಪಸ್ಥಿತರಿದ್ದರು.
ಕಲಾಜಾಥ ವಾಹನ ಹಾಗೂ ಕಲಾವಿದರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ 5 ದಿನ ಸಂಚರಿಸಿ, ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.21ಕೆಆರ್ ಎಂಎನ್ 7.ಜೆಪಿಜಿ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆ ಕುರಿತು ಜನಜಾಗೃತಿ ಮೂಡಿಸಲು ಎಲ್ಇಡಿ ಕಲಾಜಾಥಾ ಪ್ರದರ್ಶನ ಸಂಚಾರಿ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚಾಲನೆ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.