ಕನ್ನಡಪ್ರಭ ವಾರ್ತೆ ದಾವಣಗೆರೆ
ಬಹುಸಂಖ್ಯಾತ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲಿಸಬಾರದು. ನಮ್ಮ ಹೋರಾಟವನ್ನು ಗಟ್ಟಿಗೊಳಿಸಲು ನಿರಂತರ ಧ್ವನಿ ಎತ್ತಿ, ಬೀದಿಗಿಳಿದು ಹೋರಾಡುತ್ತಿದ್ದೇವೆ. ಆದರೆ, ನಮ್ಮ ಸಮುದಾಯದ ಬೇಡಿಕೆಗೆ ಸ್ಪಂದಿಸಬೇಕಾದ ಸರ್ಕಾರವೂ ಹೋರಾಟಕ್ಕೆ ಮನ್ನಣೆ ನೀಡುತ್ತಿಲ್ಲ. ಮೀಸಲಾತಿ ವಿಚಾರವಾಗಿ ಸಭೆ ಕರೆಯುವ ಭರವಸೆ ನೀಡಿದ್ದ ಸಿಎಂ ಇದುವರೆಗೂ ಸಭೆ ಕರೆದಿಲ್ಲ ಎಂದು ದೂರಿದರು.
ಸಿಎಂ ಸಭೆ ಕರೆಯಲಿಲ್ಲ, ಮೀಸಲಾತಿ ಕೊಡುವ ಬಗ್ಗೆ ಯಾವುದೇ ಸಕಾರಾತ್ಮಕ ಸ್ಪಂದನೆ ನೀಡುತ್ತಿಲ್ಲ. ನಮ್ಮ ಕೂಗು ಸರ್ಕಾರಕ್ಕೆ ಮುಟ್ಟುವವರೆಗೂ ಈ ಸಲ ಹೋರಾಟ ನಡೆಸಲಿದ್ದೇವೆ. ಈಗಾಗಲೇ ಹೆದ್ದಾರಿಗಳನ್ನು ತಡೆದು, ಹೆದ್ದಾರಿಯಲ್ಲೇ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರೂ ಸ್ಪಂದಿಸಿಲ್ಲ. ಸಮಾಜದ ಶಾಸಕರೆ ಅಧಿವೇಶನದಲ್ಲಿ ಮಾತನಾಡುತ್ತಿಲ್ಲ ಎಂದು ಕಿಡಿಕಾರಿದರು.ನಮ್ಮ ಮೀಸಲಾತಿ ಹೋರಾಟವಂತೂ ನಿಂತಿಲ್ಲ. ನಮ್ಮ ಬೇಡಿಕೆ ಈಡೇರಿಸುವಂತೆ ಕಾನೂನು ಹೋರಾಟಕ್ಕೆ ಮುಂದಾದ ವೇಳೆ ಸಿಎಂ 2 ಗಂಟೆ ಸಭೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಉಪ ಚುನಾವಣೆಗಳ ನೆಪ ಮಾಡಿಕೊಂಡು, ಯಾವುದೇ ನಿರ್ಣಯ ಸಿಎಂ ಕೈಗೊಳ್ಳಲಿಲ್ಲ. ಈಗ ಚುನಾವಣೆ ಫಲಿತಾಂಶವೂ ಬಂದಿದೆ. ಇನ್ನಾದರೂ ಮೀಸಲಾತಿ ಘೋಷಿಸುವ ಕೆಲಸ ಮಾಡಲಿ ಎಂದು ಸರ್ಕಾರಕ್ಕೆ ತಾಕೀತು ಮಾಡಿದರು.
ಮಾಜಿ ಶಾಸಕ ಎಚ್.ಎಸ್.ಶಿವಶಂಕರ, ಯುವ ಮುಖಂಡ ಬಿ.ಜಿ.ಅಜಯಕುಮಾರ, ಕಾರಿಗನೂರು ಕಲ್ಲೇಶಪ್ಪ, ಚನ್ನಬಸವನಗೌಡ್ರು, ಮಯೂರ, ಆನಂದ ಜಿರ್ಲೆ, ಬಿ.ಜಿ.ಭರತ್, ಕೊಟ್ರೇಶ, ಚಂದ್ರು, ಮಹೇಶ ಇದ್ದರು. 2 ಎ ಹೋರಾಟಕ್ಕೆ ಸ್ವಯಂ ಪ್ರೇರಣೆಯಿಂದ ಬರಲು ಕರೆಶಿಕ್ಷಣ, ಉದ್ಯೋಗಕ್ಕಾಗಿ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿಗೆ ಒತ್ತಾಯಿಸಿ ಪಂಚಮಸಾಲಿ ಹೋರಾಟ ಸಮಿತಿ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಜಿಲ್ಲೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಆಗಮಿಸುವಂತೆ ಕೂಡಲ ಸಂಗಮದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದರು.
ಪಂಚಮಸಾಲಿ ಹೋರಾಟದ ನಿರ್ಣಾಯಕ ಸ್ಥಳ ದಾವಣಗೆರೆಯಾಗಿದೆ. ಇಲ್ಲಿ ನಮ್ಮ ಹೋರಾಟಗಳೂ ಯಶಸ್ವಿಯಾಗಿದೆ. ಹಾಗಾಗಿ ಇಲ್ಲಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಹೋರಾಟಕ್ಕೆ ಬರಬೇಕು ಎಂದರು.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾಗಿದೆ. ಇನ್ನು ವಿಳಂಬ ಮಾಡದೇ, ಮೀಸಲಾತಿ ನೀಡಲಿ. ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಲಿಂಗಾಯತ ಸಮಾಜವೂ ಕಾರಣವೆಂಬುದನ್ನು ಸಿಎಂ ಸಿದ್ದರಾಮಯ್ಯ ಮರೆಯಬಾರದು ಎಂದರು.
ಹರಿಹರ ಮಾಜಿ ಶಾಸಕ, ಸಮಾಜದ ಹಿರಿಯ ಮುಖಂಡ ಎಚ್.ಎಸ್.ಶಿವಶಂಕರ ಮಾತನಾಡಿ, ಪಂಚಮಸಾಲಿ ಹೋರಾಟ ಕವಲು ದಾರಿಯಲ್ಲಿಲ್ಲ. ನಮ್ಮ ಹೋರಾಟದ ದಿಕ್ಕು ತಪ್ಪಿಸುವ ಕೆಲಸ ಯಾರೂ ಮಾಡಬಾರದು. ನಮ್ಮ ನಾಯಕರು ಸರ್ಕಾರ ಬಡಿದೆಬ್ಬಿಸುವ ಕೆಲಸ ಮಾಡಬೇಕು. ಸಮಾಜದ ಒಳಿತಿಗೆ ಎಲ್ಲರೂ ಒಗ್ಗೂಡಬೇಕು ಎಂದರು.