ಪಂಚವರ್ಣದ ಶೈಕ್ಷಣಿಕ ದತ್ತು ಸ್ವೀಕಾರ ಶಾಘನೀಯ ಕಾರ್ಯ: ಡಾ. ಕೆ. ಕೃಷ್ಣ ಕಾಂಚನ್

KannadaprabhaNewsNetwork |  
Published : Jun 09, 2025, 12:07 AM IST
8ಪಂಚವರ್ಣ | Kannada Prabha

ಸಾರಾಂಶ

ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲವು ಡಾ.ಪುನಿತ್ ರಾಜ್ ಕುಮಾರ್ ನೆನಪಿನಲ್ಲಿ 6ನೇ ವರ್ಷದ ವಿದ್ಯಾನಿಧಿ ಯೋಜನೆಯಡಿ ದತ್ತು ಸ್ವೀಕರಿಸಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ವಿತರಣಾ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಕುಂದಾಪುರ

ಒಂದು ಸಂಘಟನೆ ಹೇಗಿರಬೇಕೆಂಬುವುದನ್ನು ಪಂಚವರ್ಣ ಯುವಕ ಮಂಡಲ ರಾಜ್ಯಕ್ಕೆ ತೋರಿಸಿಕೊಟ್ಟಿದೆ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೆ. ಕೃಷ್ಣ ಕಾಂಚನ್ ಅಭಿಪ್ರಾಯಪಟ್ಟರು.

ಅವರು ಶನಿವಾರ ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲವು ಡಾ.ಪುನಿತ್ ರಾಜ್ ಕುಮಾರ್ ನೆನಪಿನಲ್ಲಿ 6ನೇ ವರ್ಷದ ವಿದ್ಯಾನಿಧಿ ಯೋಜನೆಯಡಿ ದತ್ತು ಸ್ವೀಕರಿಸಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂಘಟನೆಗಳು ವರ್ಷಕ್ಕೊಮ್ಮೆ ವಾರ್ಷಿಕೋತ್ಸವಗಳನ್ನು ಆಯೋಜಿಸುವುದನ್ನು ಕಾಣುತ್ತೇವೆ, ಆದರೆ ಪಂಚವರ್ಣ ಸಂಘಟನೆ ವರ್ಷವಿಡೀ ವಿಭಿನ್ನ ಕಾರ್ಯಕ್ರಮಗಳ ಮೂಲಕ ಮನೆಮಾತಾಗಿದೆ. ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸುವುದು ಸುಲಭದ ಮಾತಲ್ಲ, ಅದನ್ನು ನಿರಂತವಾಗಿ ಮುಂದುವರಿಸುವುದು ಸವಾಲಿನ ಕಾರ್ಯ, ಈ ಸೇವೆ ಪಡೆದ ವಿದ್ಯಾರ್ಥಿಗಳು ಇದರ ಸದ್ಭಳಕೆ ಮಾಡಿಕೊಂಡು ಸಾಧನೆ ಮಾಡಿ ಸಮಾಜದ ಮುಖ್ಯವಾಹಿನಿಯಲ್ಲಿ ನಿಲ್ಲಬೇಕು ಹಾಗೂ ಬೇರೆಯವರಿಗೂ ಸಹಾಯ ಮಾಡುವ ಮನಸ್ಥಿತಿ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.ಇದೇ ವೇಳೆ ಬಡವಿದ್ಯಾರ್ಥಿಗಳಿಗೆ ಸುಮಾರು 60 ಸಾವಿರ ರು. ಮೌಲ್ಯದ ಪರಿಕರಗಳನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಹಸ್ತಾಂತರಿಸಿ ಶುಭ ಹಾರೈಸಿದರು.ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ವಹಿಸಿದ್ದರು.

ಅಭ್ಯಾಗತರಾಗಿ ಕೋಟದ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಣೈ, ಸ್ನೇಹಕೂಟ ಮಣೂರು ಸಂಚಾಲಕಿ ಭಾರತಿ ವಿ. ಮಯ್ಯ, ಕೊಲ್ಲೂರು ಮುಕಾಂಬಿಕಾ ದೇಗುಲದ ಮಾಜಿ ಟ್ರಸ್ಟಿ ಕೆ.ಪಿ. ಶೇಖರ್, ಪಂಚವರ್ಣ ಮಹಿಳಾ ಮಂಡಲದ ಪೂರ್ವಾಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಉಪಸ್ಥಿತರಿದ್ದರು. ಸಂಘದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ಸ್ವಾಗತಿಸಿ, ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿ, ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿ ವಂದಿಸಿದರು.

ಪಂಚವರ್ಣ ಸಂಘಟನೆಯಿಂದ ಡಾ.ಪುನಿತ್ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆಯಡಿ ದತ್ತು ಪಡೆದ ವಿದ್ಯಾರ್ಥಿಗಳಿಗೆ 60 ಸಾವಿರ ರು. ಮೌಲ್ಯದ ಪರಿಕರಗಳನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಹಸ್ತಾಂತರಿಸಿ ಶುಭಹಾರೈಸಿದರು. ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ, ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೆ.ಕೃಷ್ಣ ಕಾಂಚನ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''