ಕನ್ನಡಪ್ರಭ ವಾರ್ತೆ ಪಾಂಡವಪುರ
ಸಂಸ್ಥೆ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ನೇತೃತ್ವದಲ್ಲಿ ನಡೆದ ಚಿಣ್ಣರ ಜಾಣರ ಜಗುಲಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಪರ-ವಿರೋಧ ಚರ್ಜೆ ನಡೆಯಿತು. ತಾಳ್ಮೆಹೆಚ್ಚು ಹೆಂಗಸರಿಗೆ ಎನ್ನುವ ಪರ ಹರ್ಷಿತ, ದೃತಿ, ತ್ರೀಶಾ, ಪ್ರಿಯ,
ಭೂವನ, ತಾಳ್ಮೆಹೆಚ್ಚು ಗಂಡಸರಿಗೆ ಎನ್ನುವ ಪರ ಜೀವಿತ, ಗಾನವಿ, ಶ್ರೀನಿಧಿ, ಐಶ್ವರ್ಯ, ಧನುಷ್ರಾಜ್. ಹಾಸ್ಯಕಲಾವಿದ ಮಿಮಿಕ್ರಿ ದಯಾನಂದ್ ಅವರು ತೀರ್ಪುಗಾರರಾಗಿ ಪಾಲ್ಗೊಂಡಿದ್ದರು.ಅಕ್ಷಿತ ತಂಡದ ಸದಸ್ಯರು ಹೆಣ್ಣುಮಕ್ಕಳಿಗರ ಹೆಚ್ಚು ತಾಳ್ಮೆ ಇದೆ ಎಂಬುದರ ಕುರಿತು ಪರವಾಗಿ ಚರ್ಚಿಸಿದರೆ, ಜೀವಿತ ತಂಡದ ಸದಸ್ಯರು ಗಂಡರು ಹೆಚ್ಚು ತಾಳ್ಮೆಹೊಂದಿದ್ದಾರೆ ಎಂಬುದಾಗಿ ಚರ್ಚಿಸಿದರು. ಎರಡು ತಂಡಗಳ ಸದಸ್ಯರು ಸಹ ಎಲ್ಲರು ಮೆಚ್ಚುವ ರೀತಿಯಲ್ಲಿ ಚರ್ಚಿಸುವ ಮೂಲಕ ನೆರೆದಿದ್ದ ಪೋಷಕರು, ಪ್ರೇಕ್ಷಕರನ್ನು ರಂಜಿಸಿದರು.
ಸಂಸ್ಥೆ ವಿನೂತನ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಹೊರತೆಗೆಯುವ ಕೆಲಸ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸುವ ಮೂಲಕ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಡಾ.ಜೆ.ಎನ್.ರಾಮಕೃಷ್ಣೇಗೌಡ ಮಾತನಾಡಿದರು. ಸಮಾರಂಭದಲ್ಲಿ ತಹಸೀಲ್ದಾರ್ ಸಂತೋಷ್ ಕುಮಾರ್, ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಪುರಸಭೆ ಅಧ್ಯಕ್ಷೆ ಜ್ಯೋತಿಲಕ್ಷ್ಮಿ, ಉಪಾಧ್ಯಕ್ಷ ಅಶೋಕ್, ಜೆಡಿಎಸ್ ಅಧ್ಯಕ್ಷ ಎಸ್.ಎ.ಮಲ್ಲೇಶ್, ಬಿಜೆಪಿ ಅಧ್ಯಕ್ಷ ಧನಂಜಯ್, ಬಿಇಓ ಧರ್ಮಶೆಟ್ಟಿ, ಎಚ್.ಎನ್.ಮಂಜುನಾಥ್, ಎಲ್.ಸಿ.ಮಂಜುನಾಥ್, ವಿಜಿಕುಮಾರ್, ದೀಪು ಸೇರಿದಂತೆ ಹಲವರು ಇದ್ದರು.