ಪಾಂಡವಪುರ:
ತಾಲೂಕಿನ ಬೋರಾಪುರ ಗ್ರಾಮದಲ್ಲಿ ಕುಡಿಯುವ ನೀರಿನ ಕೊಳವೆ ಬಾವಿಗೆ ಸೋಲಾರ್ ಪಂಪ್ ಲೋಕಾರ್ಪಣೆಗೊಳಿಸಿದ ಶಾಸಕರು, ನಂತರ ಅರಕನಕೆರೆ, ಕದಲಗೆರೆ ಗ್ರಾಮದ ಬಳಿ ಸೋಲಾರ್ ಪಂಪ್ನ್ನು ಲೋಕಾರ್ಪಣೆಗೊಳಿಸಿದರು.
ಈ ವೇಳೆ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಮೂರು ಗ್ರಾಮಗಳ ಕುಡಿಯುವ ನೀರಿನ ಬೋರ್ವೆಲ್ ಗಳಿಗೆ ಸಮಸ್ಯೆಗಳಾಗದಂತೆ ಸೋಲಾರ್ ಪಂಪ್ ಅಳವಡಿಸಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದೆ. ವಿದ್ಯುತ್ ಗ್ರಿಡ್ ಮೇಲೆ ಅವಲಂಬಿತವಾಗದೆ ಸೋಲಾರ್ ವಿದ್ಯುತ್ ಮೂಲಕವೇ ಈ ಪಂಪ್ಗಳು ಕಾರ್ಯನಿರ್ವಹಿಸುತ್ತವೆ ಎಂದರು.ಪುಟ್ಟಣ್ಣಯ್ಯ ಫೌಂಡೇಶನ್ ಮತ್ತು ಸೆಲ್ಕೋ ಫೌಂಡೇಶನ್ ಸಹಯೋಗದಲ್ಲಿ ಈ ಯೋಜನೆ ಜಾರಿ ಯಶಸ್ವಿಯಾದರೆ ಎಲ್ಲ ಗ್ರಾಮಗಳಲ್ಲಿ ವಿಸ್ತರಿಸಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಇದನ್ನು ಸರ್ಕಾರದ ಗಮನಕ್ಕೆ ತರಲಾವುದು ಎಂದರು.
ಈ ವೇಳೆ ಪುಟ್ಟಣ್ಣಯ್ಯ ಫೌಂಡೇಷನ್ ಸಿಇಒ ಹಿರೇಮರಳಿ ರಣಜಿತ್, ಬೋರಾಪುರ, ಅರಕನಕೆರೆ, ಕದಲಗೆರೆ ಹಾಗೂ ಕಾಡೇನಹಳ್ಳಿ ಗ್ರಾಮಸ್ಥರು ಹಾಗೂ ರೈತಸಂಘದ ಮುಖಂಡರು ಹಾಜರಿದ್ದರು.