ಮಾದರ ಮಹಾಸಭಾದ ಪಾಂಡವಪುರ ತಾಲೂಕು ಪದಾಧಿಕಾರಿಗಳು ಆಯ್ಕೆ

KannadaprabhaNewsNetwork |  
Published : Feb 04, 2026, 02:00 AM IST
3ಕೆಎಂಎನ್ ಡಿ14 | Kannada Prabha

ಸಾರಾಂಶ

ಪಾಂಡವಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ತಾಲೂಕಿನ ಎಲಾ ಗ್ರಾಮದ ಮಾದರ ಮುಖಂಡರ ಅಭಿಪ್ರಾಯ, ಸಲಹೆ ಸೂಚನೆ ಪಡೆದು ತಾಲೂಕು ಘಟಕದ ಅಧ್ಯಕ್ಷರನ್ನಾಗಿ ಶಂಭೂನಹಳ್ಳಿ ಎಸ್.ಎಸ್.ರವಿಕುಮಾರ್, ಉಪಾಧ್ಯಕ್ಷರಾಗಿ ಬೀರಶೆಟ್ಟಹಳ್ಳಿ ಪಿ.ಮಲ್ಲಿಕಾರ್ಜುನ, ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ಳಾಳ್ಳೆ ಎಸ್.ರವಿ ಆಯ್ಕೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಕರ್ನಾಟಕ ಮಾದರ ಮಹಾಸಭಾ ಬೆಂಗಳೂರು ರಾಜ್ಯ ಸಮಿತಿ ಆದೇಶದ ಮೇರೆಗೆ ತಾಲೂಕು ಮಾದರ ಮಹಾಸಭಾದ ಪದಾಧಿಕಾರಿಗಳನ್ನು ಸೋಮವಾರ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ತಾಲೂಕಿನ ಎಲಾ ಗ್ರಾಮದ ಮಾದರ ಮುಖಂಡರ ಅಭಿಪ್ರಾಯ, ಸಲಹೆ ಸೂಚನೆ ಪಡೆದು ತಾಲೂಕು ಘಟಕದ ಅಧ್ಯಕ್ಷರನ್ನಾಗಿ ಶಂಭೂನಹಳ್ಳಿ ಎಸ್.ಎಸ್.ರವಿಕುಮಾರ್, ಉಪಾಧ್ಯಕ್ಷರಾಗಿ ಬೀರಶೆಟ್ಟಹಳ್ಳಿ ಪಿ.ಮಲ್ಲಿಕಾರ್ಜುನ, ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ಳಾಳ್ಳೆ ಎಸ್.ರವಿ, ಖಜಾಂಚಿ ಚಿಕ್ಕಯಾರಹಳ್ಳಿ ಸಿ.ಎನ್.ರಾಜೇಶ್ ಹಾಗೂ ನಿರ್ದೇಶಕರಾಗಿ ಬಸ್ತಿಹಳ್ಳಿ ಎಸ್.ಮಲ್ಲೇಶ್, ಯೋಗೇಶ್, ಟೌನ್ ಶಶಿಕುಮಾರ್, ತುಕಾರಾಂ, ಅರ್ಚನಾ ಚಂದ್ರು ಆಯ್ಕೆಯಾದರು.

ಬಳಿಕ ಬಾಬು ಜಗಜೀವನರಾಮ್ ಸಂಘಗಳ ಒಕ್ಕೂಟದ ಕಾರ್ಯದರ್ಶಿ ಕಡಬ ಪುಟ್ಟರಾಜು ಮಾತನಾಡಿ, ಕಳೆದೆರಡು ತಿಂಗಳ ಹಿಂದೆ ರಾಜ್ಯದ ಎಲ್ಲಾ ಪಕ್ಷಗಳ ಮಾದರ ಮುಖಂಡರು ಹಾಗೂ ಸಮುದಾಯದ ಸ್ವಾಮೀಜಿಗಳ ನಿರ್ಣಯದಂತೆ ಮಾದಿಗ ಜನಾಂಗದ ಶೈಕ್ಷಣಿಕ ಮತ್ತು ಆರ್ಥಿಕ ಪ್ರಗತಿಗಾಗಿ ಸಂಘಟನೆಯನ್ನು ಅಸ್ತಿತ್ವಕ್ಕೆ ತರಲಾಗಿದೆ.

ಜಿಲ್ಲಾ ಮತ್ತು ತಾಲೂಕು ಘಟಕದ ಸಮಿತಿ ರಚಿಸಿ ಸದಸ್ಯತ್ವ ಅಭಿಯಾನ ಪ್ರಾರಂಭಿಸಲಾಗಿದೆ. ಮಹಾಸಭಾದ ಮೂಲ ಉದ್ದೇಶ ಸಮುದಾಯದ ಮಕ್ಕಳು ಶೈಕ್ಷಣಿಕವಾಗಿ ಹಿಂದುಳಿಯದಂತೆ ಹಾಗೂ ವಿದ್ಯಾವಂತ ಯುವಕರು, ಪದವೀದರರು ಉದ್ಯೋಗದಿಂದ ವಂಚಿತರಾಗದಂತೆ ಸಂಘ ಎಚ್ಚರಿಕೆಯಿಂದ ಕೆಲಸ ಮಾಡಲಿದೆ. ಸ್ಥಳೀಯವಾಗಿ ಸಹಕಾರ ಸಂಘವನ್ನು ತೆರೆದು ಜನಾಂಗವನ್ನು ಆರ್ಥಿಕವಾಗಿ ಸದೃಢಗೊಳಸಲಾಗುವುದು ಎಂದರು.

ಮಾಹಾಸಭಾ ತಾಲೂಕು ಅಧ್ಯಕ್ಷ ರವಿಕುಮಾರ್ ಮಾತನಾಡಿ, ಸಂಘಟನೆ ಸಭೆಯಲ್ಲಿ ಸಮುದಾಯ, ವಿದ್ಯಾರ್ಥಿಗಳು ಅಭ್ಯುದಾಯ, ಯುವಕರ ಭವಿಷ್ಯ ಮತ್ತು ಸಮಾಜದಕ್ಕೆ ಸೇರಿದ ಇತರೆ ವಿಚಾರಗಳನ್ನು ಗಂಭೀರವಾಗಿ ಚರ್ಚಿಸಲಾಗಿದೆ. ಜನಾಂಗಕ್ಕೆ ಆಗಿರುವ ಅನ್ಯಾಯಗಳನ್ನು ಸರಿಪಡಿಸುವ ಉದ್ದೇಶವಿಟ್ಟುಕೊಂಡು ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು ಎಂದರು.

ಈ ವೇಳೆ ಮಾದರ ಮಹಾಸಭಾ ಜಿಲ್ಲಾಧ್ಯಕ್ಷ ಬಿ.ಬಿ.ಕಾವಲ್‌ ಕಾಂತರಾಜು, ರಾಜ್ಯ ಕಾರ್ಯಕಾರಿಣಿ ಸಂಚಾಲಕ ಎನ್.ಆರ್.ಚಂದ್ರಶೇಖರ್, ಜಿಲ್ಲಾ ಸಮಿತಿ ನಿರ್ದೇಶಕ ಕೆಂಪಯ್ಯ, ಎಚ್.ಎಂ.ಪುಟ್ಟರಾಜು, ಮುಖಂಡರಾದ ಅಲ್ಪಹಳ್ಳಿ ಗೋವಿಂದಯ್ಯ, ಟೌನ್‌ಚಂದ್ರು, ಬಸ್ತಿಹಳ್ಳಿ ಕುಮಾರ್, ಆರ್.ಟಿ.ಕಾಳಯ್ಯ, ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ರದ್ದು ಮಾಡಿ, ನರೇಗಾ ಮರುಸ್ಥಾಪಿಸಿ: ಸಿದ್ದು
ಸಚಿವ ತಿಮ್ಮಾಪುರ ರಾಜೀನಾಮೆಗೆ ಅಹೋರಾತ್ರಿ ಧರಣಿ