ಪಂಜ ಕೊಯಿಕುಡೆ ಭಜನಾ ಮಂಗಲೋತ್ಸವ

KannadaprabhaNewsNetwork |  
Published : Dec 23, 2025, 03:00 AM IST
ಭಜನೆ ಕ್ಷೇತ್ರದ ಸಾಧಕ ಶ್ರೀಧರ ಪಂಜರಿಗೆ ಸನ್ಮಾನ | Kannada Prabha

ಸಾರಾಂಶ

ಪಕ್ಷಿಕೆರೆ ಸಮೀಪದ ಪಂಜ ಕೊಯಿಕುಡೆ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ವಾರ್ಷಿಕ ಭಜನಾ ಮಂಗಲೋತ್ಸವ ಜರುಗಿತು.

ಕನ್ನಡಪ್ರಭ ವಾರ್ತೆ ಮೂಲ್ಕಿ

ಪಕ್ಷಿಕೆರೆ ಸಮೀಪದ ಪಂಜ ಕೊಯಿಕುಡೆ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಜರುಗಿದ ವಾರ್ಷಿಕ ಭಜನಾ ಮಂಗಳೋತ್ಸವ ಸಂದರ್ಭ ಭಜನೆ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶ್ರೀಧರ್ ಪಂಜ, ಕುಣಿತ ಭಜನಾ ಸಂಘಟಕಿ, ಪವರ್ ಲಿಫ್ಟಿಂಗ್ ನಲ್ಲಿ ಪ್ರಶಸ್ತಿ ಪಡೆದ ಪ್ರಿಯಾ ಪೂಜಾರಿ ಉಳ್ಯ ಹಾಗೂ ಯಕ್ಷಗುರು ರಕ್ಷಿತ್ ಪಡ್ರೆ ಅವರ ತಾಯಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಪಂಜ ಮಹಾಗಣಪತಿ ಮಂದಿರದ ಪ್ರಧಾನ ಅರ್ಚಕ ಸುರೇಶ್ ಭಟ್ ಪಂಜ, ಶ್ರೀ ವಿಠೋಬ ಭಜನಾ ಮಂದಿರದ ಅಧ್ಯಕ್ಷ ಕರುಣಾಕರ ಶೆಟ್ಟಿ, ಸತೀಶ್ ಶೆಟ್ಟಿ ಪಂಜದಗುತ್ತು, ರಘುರಾಮ್ ಶೆಟ್ಟಿ, ಚಂದ್ರಹಾಸ ಎಂ. ಶೆಟ್ಟಿ, ಸೀತಾರಾಮ್ ಅಮೀನ್, ಮುಂಬೈ ಸಮಿತಿಯ ಪ್ರಕಾಶ್ ಶೆಟ್ಟಿ ನಲ್ಯಗುತ್ತು, ರಮೇಶ್ ಶೆಟ್ಟಿ, ಬಾಕಿಮಾರು ಗುತ್ತು ಸೀತಾರಾಮ್ ಶೆಟ್ಟಿ ಪಂಜ, ಕೆಮ್ರಾಲ್ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸುರೇಶ್ ಪಂಜ, ಸದಸ್ಯ ಕೇಶವ ಪೂಜಾರಿ, ಪದ್ಮನಾಭ ಪೂಜಾರಿ, ನವಜ್ಯೋತಿ ಮಹಿಳಾ ಮಂಡಳಿ ಅಧ್ಯಕ್ಷೆ ಮಮತಾ ಶೆಟ್ಟಿ ಉಪಸ್ಥಿತರಿದ್ದರು. ಸತೀಶ್ ಶೆಟ್ಟಿ ಬೈಲಗುತ್ತು ನಿರೂಪಿಸಿದರು.

ಬಳಿಕ ನೃತ್ಯ ಶ್ರೀ ವಿಠೋಬ ಯಕ್ಷ ನೂಪುರ ನಾಟ್ಯ ಕಲಾ ಕೇಂದ್ರ ಮಕ್ಕಳಿಂದ ರಂಗಪ್ರವೇಶ ಹಾಗೂ ‘ಶ್ರೀರಾಮ ಕಾರುಣ್ಯ’ ಯಕ್ಷಗಾನ ಪ್ರದರ್ಶನ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಸಮಸ್ಯೆಗಳೇ ಇಲ್ಲ : ಡಿಕೆಶಿ!
ರಾಜಣ್ಣ ನೇಮಿಸಿದ್ದು ನಾನೇ ಎಂದ ಡಿಕೆಗೆ ಸಿದ್ದು ಟಾಂಗ್‌