ದಾವಣಗೆರೆ: ಗಣೇಶ ಚತುರ್ಥಿ ಹಬ್ಬ ಎಂದರೆ ಮನೆ ಮನೆಗೂ, ಬೀದಿ ಬೀದಿಗೂ ಹರಡುವ ಭಕ್ತಿ ಮತ್ತು ಸಡಗರ. ಆದರೆ, ಇಂದಿನ ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ರಾಸಾಯನಿಕ ಬಣ್ಣಗಳಿಂದ ತಯಾರಾಗುವ ಗಣೇಶ ಮೂರ್ತಿಗಳ ಪರಿಣಾಮವಾಗಿ ಪರಿಸರ ಮಾಲಿನ್ಯ ಗಂಭೀರ ಸಮಸ್ಯೆಯಾಗಿರುವುದು ಎಲ್ಲರಿಗೂ ತಿಳಿದ ಸಂಗತಿ. ಇದಕ್ಕೆ ಮಾದರಿಯ ಉದಾಹರಣೆಯಾಗಿ ದಾವಣಗೆರೆಯ ಮಾದರಿ ಸಿದ್ದಗಂಗಾ ಶಾಲೆಯ ವಿದ್ಯಾರ್ಥಿಗಳು ತಯಾರಿಸಿದ 12 ಅಡಿ ಎತ್ತರದ ಪರಿಸರ ಸ್ನೇಹಿ ಪೇಪರ್ ಗಣಪತಿ ಮೂರ್ತಿ ಈಗ ಸಜ್ಜಾಗಿದೆ.ಹತ್ತು ದಿನಗಳ ಶ್ರಮ – ನೈಸರ್ಗಿಕ ಬಣ್ಣದ ಸೊಬಗು:
ಮೆರವಣಿಗೆಯ ಸಾಂಸ್ಕೃತಿಕ ಶೋಭೆ:
ಶಾಲಾ ಆವರಣದಿಂದ ಹೊರಡುವ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಸಾಂಪ್ರದಾಯಿಕ ವೇಷಭೂಷಣಗಳಲ್ಲಿ ನಂದಿ ಕೋಲು, ಕುದುರೆ, ಪಟ ಮುಂತಾದ ಜನಪದ ಕಲೆಗಳನ್ನು ಪ್ರದರ್ಶಿಸಲಿದ್ದಾರೆ. ಶಾಲೆಯ ವಾದ್ಯಗೋಷ್ಠಿಯು ಭಜನೆ ಹಾಗೂ ಭಕ್ತಿಗೀತೆಗಳೊಂದಿಗೆ ಶೋಭೆ ಹೆಚ್ಚಿಸಲಿದ್ದು, ಮಕ್ಕಳ ಭಕ್ತಿ ನೃತ್ಯ, ಪದ್ಯಪಾಠ ಹಾಗೂ ಕಲಾತ್ಮಕ ಅಭಿವ್ಯಕ್ತಿ ಮೆರವಣಿಗೆಯ ಆಕರ್ಷಣೆಯಾಗಲಿದೆ.ಮಾರ್ಗದರ್ಶನ ಮತ್ತು ಸಹಕಾರ:
ಭವಿಷ್ಯದ ಮಾದರಿ:
ಈ ಪ್ರಯತ್ನವನ್ನು ಜಿಲ್ಲಾಡಳಿತವು ಇತರ ಶಾಲೆಗಳಲ್ಲಿಯೂ ಅನುಸರಿಸಿದರೆ, ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ ಬೆಳೆಸುವುದರ ಜೊತೆಗೆ ಸಾಂಸ್ಕೃತಿಕ ಸಂವೇದನೆ ಬೆಳೆಸಲು ಇದು ಮಹತ್ವದ ಹೆಜ್ಜೆಯಾಗಲಿದೆ. ಸಮಾಜದ ಬೆಂಬಲ ದೊರೆತರೆ, ಇಂತಹ ಪರಿಸರ ಸ್ನೇಹಿ ಹಬ್ಬಗಳು ಮುಂದಿನ ದಿನಗಳಲ್ಲಿ ಜನಾಂಆಂದೋಲನದ ರೂಪ ತಾಳಲಿವೆ.ಪರಿಸರ ಸಂರಕ್ಷಣೆಯ ಸಂದೇಶ“ಗಣೇಶನು ವಿಜ್ಞ ವಿನಾಶಕ, ಆದರೆ ನಾವು ತಯಾರಿಸಿದ ಪೇಪರ್ ಗಣಪತಿ ಸಮಾಜಕ್ಕೆ ಪರಿಸರ ಸಂರಕ್ಷಣೆಯ ಮಹತ್ವದ ಸಂದೇಶ ನೀಡುತ್ತಿದೆ. ಮಕ್ಕಳು ಕಲೆಯೊಂದಿಗೆ ಜವಾಬ್ದಾರಿಯುತ ನಾಗರಿಕರಾಗುವ ದಾರಿಯಲ್ಲಿ ಸಾಗುತ್ತಿದ್ದಾರೆ” ಎಂದು ಶಿಕ್ಷಕರು ಹರ್ಷ ವ್ಯಕ್ತಪಡಿಸಿದರು.