‘ನಗರದ ಎಲ್ಲ ಠಾಣೆಗಳಲ್ಲಿ ಕಾಗದ ರಹಿತ ಆಡಳಿತ’

KannadaprabhaNewsNetwork |  
Published : Mar 27, 2024, 02:02 AM IST
ದಯಾನಂದ್‌ | Kannada Prabha

ಸಾರಾಂಶ

ಬೆಂಗಳೂರು ನಗರ ಕಮಿಷನರೆಟ್‌ ಸಂಪೂರ್ಣ ಕಾಗದ ರಹಿತ ಆಗಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಹರ್ಷ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಬೆಂಗಳೂರು ನಗರ ಕಮಿಷನರೆಟ್‌ ಸಂಪೂರ್ಣ ಕಾಗದ ರಹಿತ ಆಗಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಹರ್ಷ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಕಾಗದ ರಹಿತ ಆಡಳಿತಕ್ಕೆ ಆದೇಶ ಹೊರಡಿಸಲಾಗಿತ್ತು. ಅದೇ ರೀತಿ ಈ ವರ್ಷ ನಗರದ ಎಲ್ಲ ಠಾಣೆಗಳಲ್ಲಿ ಕಾಗದರಹಿತ ಆಡಳಿತ ವ್ಯವಸ್ಥೆ ಅಳವಡಿಸಿಕೊಂಡಿವೆ. ಅಪರಾಧ ಪ್ರಕರಣಗಳಲ್ಲಿ ಕೋರ್ಟ್‌ಗೆ ಸಲ್ಲಿಸುವ ದಸ್ತಾವೇಜುಗಳನ್ನು ಮಾತ್ರ ಮುದ್ರಿಸಲಾಗುತ್ತಿದೆ. ಇನ್ನುಳಿದಂತೆ ಎಲ್ಲ ಆಡಳಿತ ವ್ಯವಸ್ಥೆಯನ್ನು ಇ-ಗೌವರ್ನೆನ್ಸ್‌ ಮಾಡಲಾಗಿದೆ ಎಂದು ಆಯುಕ್ತರು ತಿಳಿಸಿದರು.ಸ್ಪಾಗಳ ಮೇಲೆ ಎಸ್ಸಿ-ಎಸ್ಟಿ ದೌರ್ಜನ್ಯ ಪ್ರಕರಣ

ಅಕ್ರಮ ಕೃತ್ಯಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಹಿಳೆಯರನ್ನು ಬಳಸಿಕೊಳ್ಳುವ ಸ್ಪಾಗಳ ಮೇಲೆ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.

ಇದೇ ಮೊದಲ ಬಾರಿಗೆ ಈ ರೀತಿಯ ಕಠಿಣ ಕ್ರಮವನ್ನು ಸ್ಪಾಗಳ ಮೇಲೆ ಜರುಗಿಸಲಾಗುತ್ತಿದೆ ಎಂದರು. ಕಳೆದ 25 ದಿನಗಳ ಅವಧಿಯಲ್ಲಿ ಕಾನೂನುಬಾಹಿರ ಚಟುವಟಿಕೆಗಳ ಶಂಕೆ ಮೇರೆಗೆ ನಗರ ವ್ಯಾಪ್ತಿಯ 21 ಸ್ಪಾಗಳ ಮೇಲೆ ಸಿಸಿಬಿ ಮತ್ತು ಸ್ಥಳೀಯರು ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ 118 ಮಹಿಳೆಯರನ್ನು ರಕ್ಷಿಸಲಾಗಿದ್ದು, 30 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಈ ಸಂತ್ರಸ್ತೆಯರ ಪೈಕಿ ಕೆಲವರು ಶೋಷಿತ ಸಮಾಜದ ಮಹಿಳೆಯರು ಪತ್ತೆಯಾಗಿದ್ದಾರೆ. ಹೀಗಾಗಿ ಎರಡು ಪ್ರಕರಣಗಳಲ್ಲಿ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸಹ ಎಫ್‌ಐಆರ್ ದಾಖಲಾಗಿದೆ ಎಂದು ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆ ಸುರಕ್ಷತೆಗೆ ಸಾರಿಗೆ ಇಲಾಖೆ ಎಐ ಆಧರಿತ ಕ್ಯಾಮೆರಾ ಅಳವಡಿಕೆ
ಮಂಡ್ಯ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಸ್ವತಂತ್ರ ಸ್ಪರ್ಧೆ - ಸುಮಲತಾ ಪರ ನಾರಾಯಣಗೌಡ ಬ್ಯಾಟಿಂಗ್‌