ಕನ್ನಡಪ್ರಭ ವಾರ್ತೆ ಮದ್ದೂರು
ನಂತರ ಜನಪ್ರತಿನಿಧಿಗಳು ಹಾಗೂ ಕಚೇರಿ ಸಿಬ್ಬಂದಿಯಿಂದ ಸನ್ಮಾನ ಸ್ವೀಕರಿಸಿದ ಪರಶುರಾಮ ಸತ್ತೀಗೇರಿ ಮಾತನಾಡಿ, ಚುನಾಯಿತ ಜನಪ್ರತಿನಿಧಿಗಳು, ಕಚೇರಿ ಸಿಬ್ಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ನಗರದಲ್ಲಿ ಕುಡಿಯುವ ನೀರು, ನೈರ್ಮಲ್ಯಕ್ಕೆ ಮೊದಲ ಆದ್ಯತೆ ನೀಡಿ ಹಂತ ಹಂತವಾಗಿ ನಗರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ಮದ್ದೂರು ಪುರಸಭೆ ನಗರಸಭೆಯಾಗಿ ಮೆಲ್ದರ್ಜೆಗೆರಿದ್ದು, ನಗರದಲ್ಲಿ ತುಂಬಾ ಕೆಲಸಗಳು ಆಗಬೇಕಾಗಿದೆ. ಕೆಲ ದಿನಗಳಲ್ಲೆ ಸ್ಥಳೀಯ ಸಂಸ್ಥೆ ಚುನಾವಣೆ ಎದುರಾಗಲಿದ್ದು, ಹೀಗಾಗಿ ಅತೀ ಜರೂರಾಗಿ ವಾರ್ಡ್ ಗಳ ವಿಂಗಡಣೆ ಕೆಲಸವಾಗಬೇಕಾಗಿದೆ. ಅ.2 ರಂದು ಗಾಂಧಿ ಜಯಂತಿ ಅಂಗವಾಗಿ ನಗರದಲ್ಲಿ ಸ್ವಚ್ಚತಾ ಅಭಿಯಾನ ಕೈಗೊಳ್ಳಲಾಗಿದೆ ಎಂದರು.ತೆರಿಗೆ, ಇ-ಖಾತಾ ಹಾಗೂ ಪಟ್ಟಣದಲ್ಲಿ ರಸ್ತೆ ಗುಂಡಿಗಳ ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿ ಬಗ್ಗೆ ಸಚಿವರು, ಸಂಸದರು ಹಾಗೂ ಶಾಸಕರು, ನಗರಸಭಾ ಅಧ್ಯಕ್ಷರ ಜೊತೆಯಲ್ಲಿ ಚರ್ಚಿಸಿ ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ವೇಳೆ ನಗರಸಭಾ ಅಧ್ಯಕ್ಷೆ ಕೋಕಿಲ ಅರುಣ್, ಉಪಾಧ್ಯಕ್ಷ ಟಿ.ಆರ್.ಪ್ರಸನ್ನ ಕುಮಾರ್, ತಾಯಿ ಸಮಿತಿ ಅಧ್ಯಕ್ಷೆ ವನಿತಾ, ಸೇರಿದಂತೆ ನಗರಸಭೆ ಕಂದಾಯ, ನೈರ್ಮಲ್ಯ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.