ಬಿಸಿಯೂಟ ಪುನಾರಂಭಿಸಲು ಶಾಲೆಯಲ್ಲಿ ಪೋಷಕರ ಸಭೆ

KannadaprabhaNewsNetwork |  
Published : Nov 25, 2024, 01:00 AM IST
ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ  ಹೊನ್ನಳ್ಳಿ ಸಿದ್ದಪ್ಪನವರ ಸರ್ಕಾರಿ ಶಾಲೆಯಲ್ಲಿ ನಡೆದ ಸಭೆಯಲ್ಲಿ ಪ್ರಾ ಕೃ ಪ ಸ ಸಂಘದ ಅಧ್ಯಕ್ಷ ಹೊಸಕೋಟೆ ಜಗದೀಶ್ ಮಾತನಾಡಿದರು  | Kannada Prabha

ಸಾರಾಂಶ

ಕಳೆದ ಮೂರು ವರ್ಷದ ಹಿಂದೆಯೂ ಇಂತದ್ದೇ ಒಂದು ಘಟನೆ ಸಂಭವಿಸಿತ್ತು.

ಕಂಪ್ಲಿ: ತಾಲೂಕಿನ ಮೆಟ್ರಿ ಗ್ರಾಮದ ಹೊನ್ನಳ್ಳಿ ಸಿದ್ದಪ್ಪನವರ ಸರ್ಕಾರಿ ಶಾಲೆಯಲ್ಲಿ ಈಚೆಗೆ ಬಿಸಿಯೂಟದಲ್ಲಿ ಹಲ್ಲಿ ಬಿದ್ದು ಮಕ್ಕಳು ಅಸ್ವಸ್ಥಗೊಂಡ ಪ್ರಕರಣದಿಂದ ಬಿಸಿಯೂಟ ಸ್ಥಗಿತಗೊಳಿಸಲಾಗಿದ್ದು, ಮರು ಪ್ರಾರಂಭಿಸುವ ಕುರಿತು ಪಾಲಕ, ಪೋಷಕರ ಸಮಾಲೋಚನೆ ಸಭೆ ನಡೆಸಲಾಯಿತು.ಪೋಷಕರಾದ ನಾಗೇಂದ್ರ, ಸ್ವಾಮಿ, ಎಚ್.ಹುಚ್ಚಪ್ಪ, ಜಡೆಪ್ಪ, ದೊಡ್ಡಪ್ಪ ಮಾತನಾಡಿ, ಅಡುಗೆದಾರರ ನಿರ್ಲಕ್ಷದಿಂದ ನ.12ರ ಮಧ್ಯಾಹ್ನ ಹಲ್ಲಿ ಬಿದ್ದಿದ್ದ ಬಿಸಿ ಊಟವನ್ನು ಸೇವಿಸಿ 56ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದ ಘಟನೆ ಸಂಭವಿಸಿತ್ತು. ಕಳೆದ ಮೂರು ವರ್ಷದ ಹಿಂದೆಯೂ ಇಂತದ್ದೇ ಒಂದು ಘಟನೆ ಸಂಭವಿಸಿತ್ತು. ಅಲ್ಲದೇ ಕೆಲ ತಿಂಗಳು ಗಳ ಹಿಂದೆ ಅಡುಗೆ ಕೋಣೆಯಲ್ಲಿ ಕುಕ್ಕರ್ ಸ್ಫೋಟಗೊಂಡು ಅಡುಗೆ ಮಾಡುವವರು ಗಾಯಗೊಂಡಿದ್ದರು. ಈ ತರಹದ ಘಟನೆಗಳಿಂದ ಪೋಷಕರಲ್ಲಿ ಭಯದ ವಾತಾವರಣ ಉಂಟಾಗಿದ್ದು ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದಾಗಿ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸಬೇಕು. ಶಾಲೆಯಲ್ಲಿನ ಅಡುಗೆದಾರರನ್ನು ಬದಲಿಸಬೇಕು ಎಂದು ಮನವಿ ಮಾಡಿಕೊಂಡರು.

ಬಳಿಕ ಜಿಪಂ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಡಿ. ಕಸ್ತೂರಿ ಮಾತನಾಡಿ, ಶಾಲೆಗೆ ಇಸ್ಕಾನ್ ಸಂಸ್ಥೆಯ ಬಿಸಿಯೂಟ ವಹಿಸುವ ಕುರಿತಂತೆ ಈಗಾಗಲೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಎಸ್.ಡಿ.ಎಂ.ಸಿ, ಪಾಲಕರು, ಪೋಷಕರು ಸಭೆ ನಡೆಸಿ ಅಡುಗೆಯವರ ಬದಲಾವಣೆ ಮಾಡುವ ವಿಷಯವನ್ನು ಅಗತ್ಯ ದಾಖಲೆ ನೀಡಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ತಾತ್ಕಾಲಿಕವಾಗಿ ಬಿಸಿಯೂಟ ಶಾಲೆ ಯಲ್ಲಿಯೇ ಸಿದ್ದಪಡಿಸಲು ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಸಿಯೂಟ ಸಹಾಯಕ ನಿರ್ದೇಶಕ ಶಿವನನಾಯ್ಕ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೊಸಕೋಟೆ ಜಗದೀಶ್, ಸಿ.ಆ‌ರ್.ಪಿ ಗಳಾದ ಕೆ.ದೊಡ್ಡಬಸಪ್ಪ, ಹನುಮಂತಪ್ಪ, ಮುಖ್ಯಶಿಕ್ಷಕ ವಿ.ಆರ್. ಮೂರ್ತಿ, ಎಚ್‌.ಪಿ.ಸೋಮಶೇಖರ ಸೇರಿದಂತೆ ಶಾಲಾ ಸಿಬ್ಬಂದಿ, ಪೋಷಕರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ