- ಮಲೇಬೆನ್ನೂರು ಪಟ್ಟಣ, ಹೋಬಳಿ ಭಾಗಗಳಲ್ಲಿ ಕಾರ್ಯಕ್ರಮ
ಮಲೇಬೆನ್ನೂರು: ಪಟ್ಟಣ ಮತ್ತು ಹೋಬಳಿ ಭಾಗಗಳಲ್ಲಿ ಸರ್ಕಾರದ ಸೂಚನೆಯಂತೆ ಪ್ರಾಥಮಿಕ, ಪ್ರೌಢಶಾಲೆ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜಲ್ಲಿ ಪೋಷಕರ ಬೋಧಕರ ಮಹಾಸಭೆ ಶುಕ್ರವಾರ ಜರುಗಿತು.
ಇಲ್ಲಿಗೆ ಸಮೀಪದ ಕುಂಬಳೂರಿನ ಸರ್ಕಾರಿ ಪಿಯು ಕಾಲೇಜು, ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಜವಾಹರ ಲಾಲ್ ನೆಹರೂ ಜಯಂತಿ ಆಚರಣೆಯಲ್ಲಿ ನೆಹರೂ ಕುರಿತು ಶಿಕ್ಷಕ ವೇದಮೂರ್ತಿ ಮಾತನಾಡಿದರು. ಉಪನ್ಯಾಸಕ ತೆಲಿಗಿ ಮಂಜುನಾಥ್ ಮಾತನಾಡಿ, ಮಕ್ಕಳು ಯಾರನ್ನು ಗೌರವಿಸಬೇಕು, ಯಾವುದನ್ನು ತಿರಸ್ಕರಿಸಬೇಕು ಎಂಬುದು ಜಾಣ್ಮೆಯಿಂದ ನಿರ್ಧರಿಸಬೇಕು. ಮುಖ್ಯವಾಗಿ ನಯ- ವಿನಯ ಇರಬೇಕು ಎಂದರು.ಸಿಡಿಸಿ ಸದಸ್ಯ ಸದಾನಂದ ಮಾತನಾಡಿ, ಸರ್ಕಾರಿ ಶಾಲೆ- ಕಾಲೇಜು ಸಾರ್ವಜನಿಕ ಆಸ್ತಿಯಾಗಿವೆ. ಕೆಲವು ವರ್ಷಗಳಿಂದ ಯಾರೋ ಕಿಡಿಗೇಡಿಗಳು ಸಿಂಟೆಕ್ಸ್ ಟ್ಯಾಂಕ್, ಪೈಪ್, ಸಸಿಗಳು, ಗ್ಲಾಸ್ ಒಡೆಯವುದು, ಗಲೀಜು ಮಾಡುವುದು ಮಾಡಿದ್ದಾರೆ. ಈ ರೀತಿ ಹಾಳು ಮಾಡಲಿಕ್ಕೆ ಅಧಿಕಾರವಿಲ್ಲ. ಅಂಥವರು ಒಂದಲ್ಲ ಒಂದು ಬಾರಿ ಜೈಲಿಗೆ ಹೋಗುತ್ತಾರೆ ಎಂದು ಎಚ್ಚರಿಸಿದರು.
ಆರಂಭದಲ್ಲಿ ವಿದ್ಯಾರ್ಥಿಗಳು ಕಾರ್ಯಕ್ರಮ ಉದ್ಘಾಟಿಸಿದರು. ಪೋಷಕರು ಬರುವ ಕಾರಣಕ್ಕೆ ಶಾಲಾ- ಕಾಲೇಜನ್ನು ಸುಂದರವಾಗಿ ಅಲಂಕರಿಸಲಾಗಿತ್ತು. ಸಿಹಿ ಊಟದ ವ್ಯವಸ್ಥೆಯೂ ಇತ್ತು. ಪೋಷಕರ ಸಭೆಯನ್ನು ಸಮೀಪದ ಧುಳೆಹೊಳೆ, ಕಡರನಾಯ್ಕನಹಳ್ಳಿ, ಹಾಲಿವಾಣ ಗ್ರಾಮದ ಶಾಲೆಗಳಲ್ಲಿ ಏರ್ಪಡಿಸಲಾಗಿತ್ತು.
-ಚಿತ್ರ-೧: