314 ಶಾಲೆಗಳಲ್ಲಿ ಪೋಷಕರ ಸಭೆ ಯಶಸ್ವಿ: ಬಿಇಒ ತಿಪ್ಪೇಸ್ವಾಮಿ ಹರ್ಷಕನ್ನಡಪ್ರಭ ವಾರ್ತೆ ಹಿರಿಯೂರು
ತಾಲೂಕಿನ 314 ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ ಪೋಷಕರ ಸಭೆ ಆಯೋಜನೆಯಾಗಿದ್ದು ಸಭೆಗಳ ಯಶಸ್ಸಿನ ನಂತರ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಹೆಚ್ಚಲು ಈ ಪೋಷಕರ ಸಭೆಗಳು ಸಹಕಾರಿಯಾಗಿವೆ. ಮಕ್ಕಳ ವಿದ್ಯಾ ಪ್ರಗತಿಯಲ್ಲಿ ಪೋಷಕರ ಜವಾಬ್ದಾರಿಯೂ ಇದ್ದು ಇಂತಹ ಸಭೆಗಳಿಂದ ವಿದ್ಯಾರ್ಥಿಗಳ, ಪೋಷಕರ ಮತ್ತು ಶಿಕ್ಷಕರ ಸಹಭಾಗಿತ್ವದಿಂದ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಹೆಚ್ಚಿಸಲು ಸಹಕಾರಿಯಾಗುತ್ತವೆ ಎಂದರು.ತಾಲೂಕಿನ ಹಲವಾರು ಶಾಲೆಗಳಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘ, ಎಸ್ಡಿಎಂಸಿ ಮತ್ತು ಪೋಷಕರು ಶಾಲೆಗೆ ಕಲಿಕಾ ಉಪಕರಣಗಳನ್ನು ನೀಡುವ ವಾಗ್ದಾನ ನೀಡಿದರು. ಸಭೆಗೆ ಮುಂಚೆ ಪೋಷಕರಿಗೆ ಮನರಂಜನ ಸ್ಪರ್ಧೆ, ಕ್ರೀಡಾ ಸ್ಪರ್ಧೆಗಳನ್ನು ಆಯಾಯ ಶಾಲೆಗಳಲ್ಲಿ ಆಯೋಜಿಸಿದ್ದು ಬಹುಮಾನಗಳನ್ನು ವಿತರಿಸಲಾಯಿತು.
ಶಾಲೆಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಎಲ್ಲಾ ಹಂತದ ಜನ ಪ್ರತಿನಿಧಿಗಳನ್ನು ಕೋರಲು ಇದೇ ಸಂದರ್ಭದಲ್ಲಿ ತೀರ್ಮಾನಿಸಲಾಯಿತು ಎಂದು ಅವರು ತಿಳಿಸಿದರು.