ಪೋಷಕರು ಮಕ್ಕಳಿಗಾಗಿ ಸಮಯ ಮೀಸಲಿಡಿ: ಬಿಇಒ ರಮೇಶ್

KannadaprabhaNewsNetwork |  
Published : Dec 28, 2025, 02:15 AM IST
ಪೋಟೋ 7 : ದಾಬಸ್‍ಪೇಟೆ ಪಟ್ಟಣದ ಖಾಸಗಿ ಸಮುದಾಯ ಭವನದಲ್ಲಿ ದಾಬಸ್‍ಪೇಟೆ ಪಬ್ಲಿಕ್ ಶಾಲೆ ವತಿಯಿಂದ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಸಸಿ ನೆಡುವ ಮೂಲಕ ಚಾಲನೆ ನೀಡಿದರು. | Kannada Prabha

ಸಾರಾಂಶ

ದಾಬಸ್‍ಪೇಟೆ ಪಬ್ಲಿಕ್ ಶಾಲೆ ಉತ್ತಮ ಫಲಿತಾಂಶ ನೀಡಿ ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ತಯಾರು ಮಾಡುತ್ತಿರುವುದು ಶ್ಲಾಘನೀಯ, ಕುಟುಂಬದಲ್ಲಿನ ಸಮಸ್ಯೆಗಳನ್ನು ಮಕ್ಕಳೊಂದಿಗೆ ಪೋಷಕರು ಆರೋಗ್ಯಕರವಾಗಿ ಚರ್ಚಿಸಿದರೆ, ಸಮಸ್ಯೆ ಬಂದಾಗ ಎದುರಿಸುವ ಶಕ್ತಿ ವಿದ್ಯಾರ್ಥಿಗಳಲ್ಲಿ ಹೆಚ್ಚಾಗುತ್ತದೆ .

ದಾಬಸ್‍ಪೇಟೆ: ಮಕ್ಕಳಿಗೆ ಶಾಲೆಗಳು ಮೌಲ್ಯಯುತ ಶಿಕ್ಷಣ ನೀಡಿದರೆ ಪೋಷಕರು ಸಂಸ್ಕ್ರತಿ, ಸಂಸ್ಕಾರ ಕಲಿಸುವ ಕೆಲಸ ಮಾಡಬೇಕಿದ್ದು, ತಮ್ಮ ಒತ್ತಡದ ಬದುಕಿನ ಜೊತೆಗೆ ಮೊಬೈಲ್ ಗೀಳು ಬಿಟ್ಟು ಮಕ್ಕಳಿಗಾಗಿ ಸಮಯ ಮೀಸಲಿಡಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಹೇಳಿದರು. ಪಟ್ಟಣದ ಖಾಸಗಿ ಸಮುದಾಯ ಭವನದಲ್ಲಿ ದಾಬಸ್‍ಪೇಟೆ ಪಬ್ಲಿಕ್ ಶಾಲೆ ವತಿಯಿಂದ ಆಯೋಜಿಸಿದ್ದ ತತ್ವ ಶೀರ್ಷಿಕೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು. ದಾಬಸ್‍ಪೇಟೆ ಪಬ್ಲಿಕ್ ಶಾಲೆ ಉತ್ತಮ ಫಲಿತಾಂಶ ನೀಡಿ ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ತಯಾರು ಮಾಡುತ್ತಿರುವುದು ಶ್ಲಾಘನೀಯ, ಕುಟುಂಬದಲ್ಲಿನ ಸಮಸ್ಯೆಗಳನ್ನು ಮಕ್ಕಳೊಂದಿಗೆ ಪೋಷಕರು ಆರೋಗ್ಯಕರವಾಗಿ ಚರ್ಚಿಸಿದರೆ, ಸಮಸ್ಯೆ ಬಂದಾಗ ಎದುರಿಸುವ ಶಕ್ತಿ ವಿದ್ಯಾರ್ಥಿಗಳಲ್ಲಿ ಹೆಚ್ಚಾಗುತ್ತದೆ ಎಂದರು.

ಬಗರ್ ಹುಕುಂ ಕಮಿಟಿ ಸದಸ್ಯ ಹಾಗೂ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಕೂರು ಖಲೀಂ ಉಲ್ಲಾ ಮಾತನಾಡಿ, ಶಿಕ್ಷಕರ ಜೊತೆ ಪೋಷಕರು ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಕೈ ಜೋಡಿಸಬೇಕು ಎಂದರು.

ಸಂಸ್ಥೆಯ ಕಾರ್ಯದರ್ಶಿ ಜುಬೈರ್ ಅಹಮದ್ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಸುಜಾತ ನಾಗರಾಜು, ಪ್ರಾಂಶುಪಾಲರಾದ ಸಮೀನಾ ಬೇಗಂ, ಮುಖಂಡ ಖಲೀಂ ಉಲ್ಲಾ, ಸೈಯದ್ ಜೈಹಿಂದ್ ಸೇರಿದಂತೆ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಪೋಷಕರು, ಶಾಲಾ ವಿದ್ಯಾರ್ಥಿಗಳು ನೂರಾರು ಸಂಖ್ಯೆಯಲ್ಲಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೇಖಕ ತನ್ನನ್ನು ತಾನು ವಿಮರ್ಶೆಗೊಳಪಡಿಸಿಕೊಳ್ಳಬೇಕು
ಕುಂದಾನಗರಿಯಲ್ಲಿ ಬೆಳಗಾವಿ ಉತ್ಸವ