ಶಿಕ್ಷಕರ ವರ್ಗಾವಣೆ ರದ್ದುಗೊಳಿಸಲು ಆಗ್ರಹ: ಪೋಷಕರಿಂದ ಪ್ರತಿಭಟನೆ

KannadaprabhaNewsNetwork |  
Published : Aug 29, 2025, 01:00 AM IST
ಫೋಟೋ: ೨೮ಪಿಟಿಆರ್-ಕುಡಿಪ್ಪಾಡಿ ಶಿಕ್ಷಕರ ವರ್ಗಾವಣೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ಕೊಡಿಪ್ಪಾಡಿ ಸರ್ಕಾರಿ ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಶಿಕ್ಷಕರ ವರ್ಗಾವಣೆಯನ್ನು ವಿರೋಧಿಸಿ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ಶಾಲೆಯ ಮುಂಭಾಗದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಪುತ್ತೂರುತಾಲೂಕಿನ ಕೊಡಿಪ್ಪಾಡಿ ಸರ್ಕಾರಿ ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಶಿಕ್ಷಕರ ವರ್ಗಾವಣೆಯನ್ನು ವಿರೋಧಿಸಿ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ಶಾಲೆಯ ಮುಂಭಾಗದಲ್ಲಿ ನಡೆಯಿತು.

ಕೊಡಿಪ್ಪಾಡಿ ಸರ್ಕಾರಿ ಶಾಲೆಯಲ್ಲಿ ೮ನೇ ತರಗತಿ ತನಕ ತರಗತಿಗಳಿದ್ದು, ೮೦ ಮಕ್ಕಳಿದ್ದಾರೆ. ೫ ಮಂದಿ ಶಿಕ್ಷಕರಿದ್ದಾರೆ. ಇದೀಗ ಇಲಾಖೆಯ ಹೆಚ್ಚುವರಿ ಶಿಕ್ಷಕರೆಂದು ಇಬ್ಬರು ಶಿಕ್ಷಕರನ್ನು ವರ್ಗಾವಣೆ ಮಾಡಲು ಮುಂದಾಗಿತ್ತು. ಇದರಿಂದ ಶಾಲಾ ಮಕ್ಕಳ ಪರಿಸ್ಥಿತಿ ಶೋಚನೀಯಗೊಳ್ಳಲಿದೆ. ೧೦೦ ವರ್ಷ ಇತಿಹಾಸದ ಈ ಸರ್ಕಾರಿ ಶಾಲೆಯಲ್ಲಿ ಈ ಬಾರಿ ಶತಮಾನೋತ್ಸವ ಆಚರಣೆಗೆ ಚಾಲನೆ ನೀಡಲಾಗಿದೆ. ಇದೇ ಸಂದರ್ಭದಲ್ಲಿ ಜವಾಬ್ದಾರಿಯುತ ಶಿಕ್ಷಕರ ವರ್ಗಾವಣೆ ನಡೆಯುತ್ತಿರುವುದು ಸಮಸ್ಯೆಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಎಸ್‌ಡಿಎಂಸಿ ಸದಸ್ಯ ಅದ್ದು ಕೊಡಿಪ್ಪಾಡಿ, ನಮ್ಮ ಶಾಲೆಯಲ್ಲಿ ಮುಖ್ಯ ಶಿಕ್ಷಕರ ಹುದ್ದೆ ಖಾಲಿಯಾಗಿದೆ. ಮುಖ್ಯ ಶಿಕ್ಷಕರನ್ನು ಕೊಡಿ ಎಂದು ಹಲವು ಬಾರಿ ಇಲಾಖೆಗೆ ಮನವಿ ಮಾಡಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಶತಮಾನೋತ್ಸವ ಆಚರಣೆಯ ಜವಾಬ್ದಾರಿ ತೆಗೆದುಕೊಂಡಿರುವ ಇಬ್ಬರು ಶಿಕ್ಷಕರ ಹೆಸರು ಕೌನ್ಸಿಲಿಂಗ್ ಲಿಸ್ಟ್‌ನಲ್ಲಿದೆ. ಅವರು ಕೌನ್ಸಿಲಿಂಗ್‌ಗೆ ಹೋಗಲೇಬೇಕಾಗುತ್ತದೆ. ಇದರಿಂದ ನಮ್ಮಲ್ಲಿ ಇಬ್ಬರು ಶಿಕ್ಷಕರು ಮತ್ತೆ ಕಡಿಮೆಯಾಗಲಿದ್ದಾರೆ. ಹಾಗಾಗಿ ಅವರ ಹೆಸರನ್ನು ಈ ಲಿಸ್ಟ್‌ನಿಂದ ತೆಗೆಯಬೇಕು ಎಂದು ಆಗ್ರಹಿಸಿದರು.ಶಿಕ್ಷಕರ ವರ್ಗಾವಣೆ ವಿರೋಧಿಸಿ ಶಾಲಾ ಎಸ್‌ಡಿಎಂಸಿ ಮತ್ತು ಪೋಷಕರು, ಪುತ್ತೂರು ಶಾಸಕ ಅಶೋಕ್ ರೈ ಮತ್ತು ಪುತ್ತೂರು ಕ್ಷೇತ್ರಶಿಕ್ಷಣಾಧಿಕಾರಿ ಅವರಿಗೆ ಮನವಿ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಗ್ರಾಪಂ ಅಧ್ಯಕ್ಷ ಸೋಮಪ್ಪ ಪೂಜಾರಿ, ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್ ಉಪಾಧ್ಯಕ್ಷೆ ಸಫಾನಾ, ಗಿರೀಶ್, ರಹೀಂ ಆನಾಜೆ, ರಾಮ ಜೋಯಿಸ್, ರಹೀಮ್, ಮಹಾಬಲ ಗಡಿಯಾರ ಸಹಿತ ಮಕ್ಕಳ ಪೋಷಕರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!