ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಎಪಿಎಂಸಿ ಮಾಜಿ ಅಧ್ಯಕ್ಷ ಮರಳುಕುಂಟೆ ಕೃಷ್ಣಮೂರ್ತಿ ಮಾತನಾಡಿ, ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ, ಪಠ್ಯೇತರ ಚಟುವಟಿಕೆಯೂ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕಂತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು.
ಶಾಲೆಯ ಕಾರ್ಯಾಧ್ಯಕ್ಷ ಡಿ.ಎನ್.ಉಮೇಶ್ ಮಾತನಾಡಿ, ಶಾಲೆಯು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಾಧನೆಗೆ ಅವಿರತ ಶ್ರಮ ಬೇಕು. ದೂರದರ್ಶನ, ಮೊಬೈಲ್ ಗಳು ಮಕ್ಕಳ ಮನಸ್ಸನ್ನು ಆಕ್ರಮಿಸಿಕೊಂಡಿವೆ. ಅವುಗಳನ್ನು ದಾಟಿ ಯಶಸ್ಸಿಗೆ ವಿದ್ಯಾರ್ಥಿಗಳು ಶ್ರಮಿಸಬೇಕು ಎಂದರು.ಪುಟಾಣಿ ಮಕ್ಕಳು ನಡೆಸಿಕೊಟ್ಟ ಸಾಂಸ್ಕ್ರತಿಕ ಕಾರ್ಯಕ್ರಮಗಳು ಪೋಷಕರ ಗಮನ ಸೆಳೆದವು. ದಿಬ್ಬೂರು ಗ್ರಾಪಂ ಸದಸ್ಯರಾದ ಮಹೇಶ್ ಡಿ.ಎನ್, ಶಾಲೆಯ ಕಾರ್ಯದರ್ಶಿ ಕೃಷ್ಣಮೂರ್ತಿ, ಸಂಸ್ಥೆಯ ಚೇರ್ಮನ್ ಕೆ.ಮಂಜುಳಾ ಮುರುಳಿಧರ್, ಆಡಳಿತ ಅಧಿಕಾರಿ ಮಿಥುನ್ , ನಿರ್ದೇಶಕ ಎಂ.ಕೃಷ್ಣಪ್ಪ, ಮಂಚನಬೆಲೆ ಗ್ರಾಪಂ ಉಪಾಧ್ಯಕ್ಷ ಶ್ರೀಧರ ಎಂಎಸ್, ಗ್ರಾಮದ ಪ್ರಮುಖರಾದ ವೆಂಕಟೇಶ್, ಬಾಬು, ಶಾಲೆಯ ಸಿಬ್ಬಂದಿ ಇದ್ದರು.