- ಸಾದರ ನೌಕರರ ಬಳಗದಿಂದ ವಿದ್ಯಾರ್ಥಿಗಳಿಗೆ ಪುರಸ್ಕಾರ
ದಾವಣಗೆರೆ: ಪೋಷಕರು ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಗುಣಮಟ್ಟದ ಶಿಕ್ಷಣ ನೀಡಲು ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ವಿಶ್ರಾಂತ ಉಪ ನಿರ್ದೇಶಕ ಜಿ.ಎಸ್. ರಾಜಶೇಖರಪ್ಪ ಹೇಳಿದರು.
ಸಾದರ ನೌಕರರ ಬಳಗದಿಂದ ನಗರದ ತರಳಬಾಳು ಬಡಾವಣೆಯ ಸಾದರ ಪತ್ತಿನ ಸೌಹಾರ್ದ ಸಹಕಾರಿ ಸಂಘದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕರಿಸಿ ಅವರು ಮಾತನಾಡಿದರು.ಪ್ರಸ್ತುತ ಪೋಷಕರು ಮಕ್ಕಳಿಗೆ ಬಡತನ, ಕಷ್ಟ ಗೊತ್ತಾಗದಂತೆ ಬೆಳೆಸುತ್ತಿದ್ದಾರೆ. ಮಕ್ಕಳು ಕೇಳುವ ಮೊದಲೇ ಅವರಿಗೆ ಬೇಕಾಗಿದ್ದನ್ನು ತಂದಿಡುತ್ತಿದ್ದಾರೆ. ಹವಾನಿಯಂತ್ರಿತ ಕೊಠಡಿ, ಆಟಿಕೆ, ಲ್ಯಾಪ್ ಟಾಪ್ ಇಂಥ ದುಬಾರಿ ವಸ್ತುಗಳು ಮತ್ತು ಸೌಲಭ್ಯಗಳನ್ನು ಒದಗಿಸುತ್ತಿದ್ದಾರೆ. ಇದರಿಂದ ಮಕ್ಕಳಿಗೆ ಅವುಗಳ ಮೌಲ್ಯಗಳು ತಿಳಿಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಬಳಗದ ಅಧ್ಯಕ್ಷ ಕೆ.ನಾಗಪ್ಪ ಅಧ್ಯಕ್ಷತೆ ಕಾರ್ಯಕ್ರಮದಲ್ಲಿ ನಿರ್ದೇಶಕ ಜಗದೀಶ್ ಕೂಲಂಬಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲ್ಲಿಕಾರ್ಜುನ ಶಾನಬೋಗ್ ಪ್ರಾರ್ಥಿಸಿದರು. ಡಾ. ಜಿ.ಎನ್.ಎಚ್. ಕುಮಾರ್, ಎ.ಬಿ. ರುದ್ರಮ್ಮ, ಎ.ಬಿ.ಕರಿಬಸಪ್ಪ ಇತರರು ಇದ್ದರು.
-14ಕೆಡಿವಿಜಿ34: