ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಮಕ್ಕಳಿಗೆ ಬದ್ಧತೆ, ಶಿಸ್ತು ಕಲಿಸಿ
ಮಕ್ಕಳನ್ನು ಓದಿಸುವ ವಿಚಾರದಲ್ಲಿ ಶಿಕ್ಷಕರಷ್ಟೆ ಪೋಷಕರದ್ದು ಕೂಡ ದೊಡ್ಡ ಜವಾಬ್ದಾರಿಯಿದೆ. ಮಕ್ಕಳ ಓದಿನ ಬಗ್ಗೆ ಪೋಷಕರು ಸರಿಯಾಗಿ ಗಮನಿಸಬೇಕು. ಬದ್ಧತೆ, ಶಿಸ್ತು, ಧೈರ್ಯಗಳನ್ನು ಮಕ್ಕಳಿಗೆ ಧಾರೆಯೆರೆಯಬೇಕು. ಯಾವ ಕಾರಣಕ್ಕೂ ಮಕ್ಕಳ ಮುಂದೆ ಜಗಳ ಆಡಬೇಡಿ. ಇದು ಮಕ್ಕಳ ಮನಸ್ಸಿನ ಮೇಲೆ ಪ್ರತಿಕೂಲ ಪ್ರಭಾವ ಬೀರುತ್ತದೆ ಎಂದು ಎಚ್ಚರಿಸಿದರು.ಮಕ್ಕಳ ಹಕ್ಕು ರಕ್ಷಿಸಬೇಕು
ಮುಕ್ತಾ ಫೌಂಡೇಷನ್ನ ಸಂಸ್ಥಾಪಕ ನಿರ್ದೇಶಕಿ ಡಾ.ಎನ್.ವಿ.ಅಶ್ವಿನಿ ಮಾತನಾಡಿ, ಪುರುಷನಿರಲಿ ಮಕ್ಕಳಿರಲಿ ಅವರ ಯಶಸ್ಸಿನ ಹಿಂದೆ ತಾಯಿ ಇದ್ದೇ ಇರುತ್ತಾಳೆ. ಬಾಲ್ಯದಿಂದಲೇ ನಮ್ಮ ಮಕ್ಕಳಿಗೆ ಬೇರೆಯವರ ಹಕ್ಕಿನ ಉಲ್ಲಂಘನೆ ಮಾಡದಂತೆ, ನಮ್ಮ ಹಕ್ಕುಗಳ ಉಲ್ಲಂಘನೆಯೂ ಆಗದಂತೆ ಜಾಗ್ರತೆ ವಹಿಸುವ ಬಗ್ಗೆ ಕಲಿಸಬೇಕು ಎಂದರು.ಈ ವೇಳೆ ಹಿರಿಯ ಸ್ತ್ರೀರೋಗ ತಜ್ಞೆ ಡಾ.ಸುಶೀಲಾಮೂರ್ತಿ, ದಕ್ಷಿಣ ಪದವೀಧರರ ವೇದಿಕೆ ಅಧ್ಯಕ್ಷ ಎನ್.ಎನ್.ವಿನಯ್,ಸಿಟಿ ಸಿವಿಲ್ ಕೋರ್ಟ್ ಅಭಿಯೋಜಕ ಮಹಾಲಿಂಗಪ್ಪ ಉತ್ತೂರು, ಟಿಪಿಎಸ್ ಮಾಜಿ ಅಧ್ಯಕ್ಷ ಮೂರ್ತಿ, ಗಂಗರಾಜು, ಆಕಾಶ್ ಗ್ಲೋಬಲ್ ಶಾಲೆ ಸಂಸ್ಥಾಪಕ ಕೆ.ವಿ.ವಾಸುದೇವ್, ವಿದ್ಯಾರ್ಥಿಗಳು, ಪೋಷಕರು ಇದ್ದರು.