ಹುಬ್ಬಳ್ಳಿ:
ಇಲ್ಲಿಯ ಕೆಎಲ್ಇ ಸಂಸ್ಥೆಯ ಎಂ.ಆರ್. ಸಾಖರೆ ಸ್ಕೂಲ್ ಆವರಣದಲ್ಲಿ ಶುಕ್ರವಾರ ನಡೆದ ಶಾಲೆ ಸುವರ್ಣ ಮಹೋತ್ಸವ ಹಾಗೂ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಪಾಲಕರು ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಹೆಚ್ಚಿನ ಆಲೋಚನೆಯಲ್ಲಿ ಇರುವುದು ಸಹಜ. ಆದರೆ, ಶಿಕ್ಷಣ, ಉದ್ಯೋಗ ಸೇರಿ ಎಲ್ಲ ಕ್ಷೇತ್ರದಲ್ಲಿಯೂ ಅವರ ಆಸಕ್ತಿ ಮತ್ತು ಆ ಕ್ಷೇತ್ರದಲ್ಲಿ ಅವರು ನಗು ನಗುತ್ತಾ ಇರುತ್ತಾರೆಯೇ? ಎಂಬುದನ್ನು ಅರಿತು ಆದ್ಯತೆಯೊಂದಿಗೆ ಅವರನ್ನು ಪ್ರೋತ್ಸಾಹಿಸಬೇಕು ಎಂದರು.ಮಕ್ಕಳು ಕಲಿಕೆ ಗುಣಮಟ್ಟದಾಗಿರಲು ಶಾಲೆ ಮತ್ತು ಮನೆಯ ವಾತಾವರಣ ಚೆನ್ನಾಗಿ ಇರಬೇಕು. ವಿದ್ಯಾರ್ಥಿಗಳು ಮತ್ತು ಗುರುಗಳ ಸಂಬಂಧ ಮತ್ತು ಮನೆಯಲ್ಲಿ ಕುಟುಂಬ ವಾತಾವರಣ ವಿದ್ಯಾರ್ಥಿಗಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಹಾಗಾಗಿ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುವ ಮಾತುಗಳು, ಕೆಲಸ ಆಗದಂತೆ ನೋಡಿಕೊಂಡರೆ, ಮಕ್ಕಳು ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರ ಕಲಿಯುತ್ತಾರೆ. ಅಲ್ಲದೇ, ಅವರು ಜೀವನ ಹಿಡಿತದಲ್ಲಿರುವ ಜತೆಗೆ ಮಾನವೀಯತೆಯ ನೆಲಗಟ್ಟಿನಲ್ಲಿ ಬೆಳೆದು ಪಾಲಕರು ಹೆಮ್ಮೆ ಪಡುವಂತಹ ಮಕ್ಕಳಾಗಿ ರೂಪಗೊಳ್ಳುತ್ತಾರೆ ಎಂದರು.
ಕೆಎಲ್ಇ ಸಂಸ್ಥೆ ನಿರ್ದೇಶಕ ಶಂಕರಣ್ಣ ಮುನವಳ್ಳಿ ಮಾತನಾಡಿ, ಮಕ್ಕಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ 2023-24ನೇ ಶೈಕ್ಷಣಿಕ ವರ್ಷದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.