ಹಿರಿಯೂರು: ಮಕ್ಕಳ ಸುಭದ್ರ ಭವಿಷ್ಯಕ್ಕೆ ಪೋಷಕರು ಹಾಗೂ ಶಿಕ್ಷಕರ ಪಾತ್ರ ಬಹು ಮುಖ್ಯವಾಗುತ್ತದೆ ಎಂದು ಚಳ್ಳಕೆರೆ ಬಾಪೂಜಿ ಆಯುರ್ವೇದ ಆಸ್ಪತ್ರೆ ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ.ಸಿ.ಟಿ.ಬಸವರಾಜ್ ಅಭಿಪ್ರಾಯಪಟ್ಟರು.
ಸಮಾಜ ಸೇವಕಿ ಶಶಿಕಲಾ ರವಿಶಂಕರ್ ಮಾತನಾಡಿ, ಮಕ್ಕಳ ಜೀವನದಲ್ಲಿ ಪ್ರಥಮ ಹಾಗೂ ಪ್ರಮುಖ ಘಟ್ಟ ಉತ್ತಮ ಶಾಲೆ ಹಾಗೂ ಉತ್ತಮ ಶಿಕ್ಷಣವಾಗಿದೆ. ಪ್ರೀತಿಯಿಂದ ಮಕ್ಕಳನ್ನು ಒಲಿಸಿಕೊಳ್ಳುವ, ಶಿಸ್ತಿನಿಂದ ಮಕ್ಕಳನ್ನು ತಿದ್ದಿ ಬೆಳೆಸುವ ಉತ್ತಮ ರೂವಾರಿಗಳು ಶಿಕ್ಷಕರೇ ಆಗಿದ್ದಾರೆ ಎಂದು ಹೇಳಿದರು.
ಬೆಟ್ಸ್ ಅಂತಾರಾಷ್ಟ್ರೀಯ ಶಾಲೆಯ ಅಧ್ಯಕ್ಷ ಘನಶಂಕರ್, ಬಾಪೂಜಿ ಆಯುರ್ವೇದ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಅಭಿಷೇಕ್, ಬ್ರಷ್ ಕಿಂಗ್ ಎಜುಕೇಶನಲ್ ಟ್ರಸ್ಟ್ ಉಪಾಧ್ಯಕ್ಷ ಡಾ. ಇಂದ್ರೇಶ್, ಆನಿ ಜೇಕಬ್, ರೇಶ್ಮಾ ವಿಜಯ್ ಹಾಗೂ ಶಿಕ್ಷಕ ವೃಂದದವರು, ಪೋಷಕರು ಉಪಸ್ಥಿತರಿದ್ದರು.