ಅಂಗನವಾಡಿ ಕಾರ್ಯಕರ್ತೆ ನೇಮಿಸಿಸಲು ಪೋಷಕರ ಒತ್ತಾಯ

KannadaprabhaNewsNetwork |  
Published : Jul 28, 2026, 01:15 AM IST
೨೭ಶಿರಾ೧: ಶಿರಾ ತಾಲೂಕು ತಾವರೆಕೆರೆ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಕಳೆದ ೧೦ ತಿಂಗಳಿಂದಲೂ ಅಂಗನವಾಡಿ ಕಾರ್ಯಕರ್ತೆ ನಿಯೋಜನೆಯಾಗದೆ ಮಕ್ಕಳಿಗೆ ಸರಿಯಾದ ಪಾಠ ಪ್ರವಚನ ಹಾಗೂ ಪೋಷಣೆ ಸಿಗುತ್ತಿಲ್ಲ ಎಂದು ಪೋಷಕರು ಅಂಗನವಾಡಿ ಕೇಂದ್ರದ ಬಳಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಶಿರಾ: ತಾಲೂಕಿನ ತಾವರೆಕೆರೆ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಕಳೆದ ೧೦ ತಿಂಗಳಿಂದಲೂ ಅಂಗನವಾಡಿ ಕಾರ್ಯಕರ್ತೆ ನಿಯೋಜನೆಯಾಗದೆ ಮಕ್ಕಳಿಗೆ ಸರಿಯಾದ ಪಾಠ ಪ್ರವಚನ ಹಾಗೂ ಪೋಷಣೆ ಸಿಗುತ್ತಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.

ಶಿರಾ: ತಾಲೂಕಿನ ತಾವರೆಕೆರೆ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಕಳೆದ ೧೦ ತಿಂಗಳಿಂದಲೂ ಅಂಗನವಾಡಿ ಕಾರ್ಯಕರ್ತೆ ನಿಯೋಜನೆಯಾಗದೆ ಮಕ್ಕಳಿಗೆ ಸರಿಯಾದ ಪಾಠ ಪ್ರವಚನ ಹಾಗೂ ಪೋಷಣೆ ಸಿಗುತ್ತಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.

ಈ ಕುರಿತು ಪ್ರತಿಭಟನೆ ನಡೆಸಿದ ಕೆಲವು ಮಕ್ಕಳ ಪೋಷಕರು, ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಸುಮಾರು ೩೯ ಮಕ್ಕಳಿದ್ದು, ಅಂಗನವಾಡಿ ಸಹಾಯಕಿ ಮಾತ್ರ ಇದ್ದಾರೆ. ಅವರೇ ಮಕ್ಕಳಿಗೆ ಆಹಾರ ನೀಡುವುದು, ಇತರೆ ಕೆಲಸಗಳನ್ನು ಮಾಡುತ್ತಿದ್ದಾರೆ. ಒಬ್ಬರೇ ಇರುವುದರಿಂದ ಮಕ್ಕಳಿಗೆ ಸರಿಯಾದ ಕಲಿಕಾಭ್ಯಾಸ ಮಾಡಿಸಲು ಆಗುತ್ತಿಲ್ಲ. ಅಂಗನವಾಡಿ ಮಕ್ಕಳನ್ನು ಪಾಲನೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಹಿಂದೆ ೧೦ ತಿಂಗಳ ಹಿಂದೆ ಇದ್ದ ಅಂಗನವಾಡಿ ಕಾರ್ಯಕರ್ತೆಯೂ ಅಮಾನತ್ತಾಗಿದ್ದು, ಅವರ ಸ್ಥಳಕ್ಕೆ ಇದುವರೆಗೂ ಬೇರೆಯವರನ್ನು ನಿಯೋಜನೆ ಮಾಡುತ್ತಿಲ್ಲ. ಇದರಿಂದ ಮಕ್ಕಳಿಗೂ ತೊಂದರೆಯಾಗುತ್ತಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ತಾವರೆಕೆರೆ ಅಂಗನವಾಡಿ ಕೇಂದ್ರಕ್ಕೆ ಅಂಗನವಾಡಿ ಕಾರ್ಯಕರ್ತೆಯನ್ನು ನೇಮಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಲಕ್ಷ್ಮೀದೇವಿ, ಗಿರಿಜಮ್ಮ, ಶಾರದಮ್ಮ, ಶೃತಿ, ಜ್ಯೋತಿ, ರಂಗಲಕ್ಷ್ಮಿ, ಅನ್ನಪೂರ್ಣ, ಪ್ರೇಮ ಸೇರಿದಂತೆ ಹಲವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

೩೦-೩೧ ರಂದು ವಿಸ್ಮಯ ಕೀಟ ಪ್ರಪಂಚ ಪ್ರದರ್ಶನ
ಮಕ್ಕಳನ್ನು ಕೇವಲ ಓದಿಗೆ ಸೀಮಿತಗೊಳಿಸಬೇಡಿ