ಕನ್ನಡಪ್ರಭ ವಾರ್ತೆ ಚಾಮರಾಜನಗರ
ಇಲಾಖೆಯು ಶಿಕ್ಷಸಪ್ತ ಕಾರ್ಯಕ್ರಮವನ್ನು ಸೋಮವಾರದಿಂದ ಜಾರಿ ಮಾಡಿದ್ದು, ಒಂದು ವಾರಗಳ ಕಾಲ ಮಕ್ಕಳಿಗೆ ಪಾಠಪ್ರವಚನ ಮಾಡುವುದರ ಜೊತೆಗೆ ಒಂದೊಂದು ದಿನ ಒಂದು ಮಹತ್ವದ ವಿಷಯದ ಬಗ್ಗೆ ಶಾಲೆಯಲ್ಲಿ ಕೆಲಸ ಮಾಡಬೇಕು. ಮಕ್ಕಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ವಿಶೇಷವಾಗಿ ಸುತ್ತೋಲೆ ಹೊರಡಿಸಲಾಗಿದೆ. ಬುಧವಾರ ದಿನ ಕ್ರೀಡಾ ಚಟುವಟಿಕೆಯನ್ನು ಮಕ್ಕಳಲ್ಲಿ ಗುರುತಿಸಿ, ಪ್ರೋತ್ಸಾಹಿಸಲು ಮೂಲಕ ಬೆಳಸಬೇಕು ಎಂದು ತಿಳಿಸಲಾಗಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಮಂಜುನಾಥ ಪ್ರಸನ್ನ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿ, ಸೋಲು-ಗೆಲವು ಎರಡನ್ನು ಸಮನಾಗಿ ಸ್ವೀಕರಿಸಬೇಕು. ಈ ಕ್ರೀಡಾಕೂಟ ಯಶ್ವಸಿಯಾಗಲಿ ಎಂದು ಶುಭ ಕೋರಿದರು. ಗುರುಮಲ್ಲೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷ ರಮೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣ ಇಲಾಖೆಯು ಆಲೂರು ವಲಯ ಮಟ್ಟದ ಕ್ರೀಡಾಕೂಟವನ್ನು ನಮ್ಮ ಶಿಕ್ಷಣ ಸಂಸ್ಥೆಗೆ ವಹಿಸಿರುವುದು ತುಂಬಾ ಸಂತಸ ತಂದಿದೆ. ತೀರ್ಪುಗಾರರು ಮಕ್ಕಳ ಪ್ರತಿಭೆಗೆ ತಕ್ಕಂತೆ ನ್ಯಾಯಯುತವಾಗಿ ತೀರ್ಪು ಕೊಡುವ ಮೂಲಕ ಕ್ರೀಡಾಕೂಟವನ್ನು ಯಶ್ವಸಿಗೊಳಿಸಿಕೊಡಬೇಕು ಎಂದು ಮನವಿ ಮಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ ಗುಂಡು ಎಸೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಕೆ.ರಾಮಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಎಪಿಎಂಸಿ ನಿರ್ದೇಶಕ ಆಲೂರು ಪ್ರತಾಪ್, ಗ್ರಾಪಂ ಸದಸ್ಯ ರವಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಎ.ಸಿ.ಮಹದೇವಸ್ವಾಮಿ, ಉಪಾದ್ಯಕ್ಷ ಎಲ್.ಪರಶಿವಪ್ಪ, ಎಸ್ಬಿಸಿ ಸಮಿತಿ ಅಧ್ಯಕ್ಷ ಸುರೇಶ್, ಗೌರವ ಅಧ್ಯಕ್ಷ ನಾಗೇಶ್, ಜಿಪಿಟಿ ಸಂಘದ ಅಧ್ಯಕ್ಷ ಮಹೇಶ್, ಜಿಲ್ಲಾಧ್ಯಕ್ಷ ಸೈಮನ್, ಲೋಕೇಶ್, ವಲಯ ಮಟ್ಟದ ಕ್ರೀಡಾಕೂಟ ಸಂಘಟಕ ಶಂಕರಪ್ಪ, ದೈಹಿಕ ಶಿಕ್ಷಣ ಶಿಕ್ಷಕರು, ಸಿಆರ್ಪಿಗಳು, ಮುಖ್ಯಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.