ರಸ್ತೆ ಬದಿ ನಿಲ್ಲಿಸಲಾಗಿದ್ದ ಟಾಟಾಸುಮೋ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ದೂರು ದಾಖಲಾಗಿದೆ. ಬೆಳಗಾವಿ ತಾಲೂಕಿನ ಕೇದನೂರು ಗ್ರಾಮದ ಮಾರುತಿ ಭಾಗಣ್ಣ ರಾಜಾಯಿ ಎಂಬುವರಿಗೆ ಸೇರಿದ್ದ ಟಾಟಾಸುಮೋ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ವಾಹನ ಸುಟ್ಟು ಕರಕಲಾಗಿ, ಸುಮಾರು ₹ 5 ಲಕ್ಷ ಮೌಲ್ಯದಷ್ಟು ನಷ್ಟವಾಗಿದೆ.
ಕನ್ನಡಪ್ರಭ ವಾರ್ತೆ ಬೆಳಗಾವಿ
ರಸ್ತೆ ಬದಿ ನಿಲ್ಲಿಸಲಾಗಿದ್ದ ಟಾಟಾಸುಮೋ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ದೂರು ದಾಖಲಾಗಿದೆ. ಬೆಳಗಾವಿ ತಾಲೂಕಿನ ಕೇದನೂರು ಗ್ರಾಮದ ಮಾರುತಿ ಭಾಗಣ್ಣ ರಾಜಾಯಿ ಎಂಬುವರಿಗೆ ಸೇರಿದ್ದ ಟಾಟಾಸುಮೋ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ವಾಹನ ಸುಟ್ಟು ಕರಕಲಾಗಿ, ಸುಮಾರು ₹ 5 ಲಕ್ಷ ಮೌಲ್ಯದಷ್ಟು ನಷ್ಟವಾಗಿದೆ. ವಾಹನ ಮಾಲೀಕನ ಮನೆ ಇರುವ ಬೀದಿಯಲ್ಲಿ ರಸ್ತೆ ಕಾಮಗಾರಿ ನಡೆದಿರುವುದರಿಂದ ಕೇದನೂರು ಗ್ರಾಮದ ಸ್ಮಶಾನ ಭೂಮಿ ರಸ್ತೆಯ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ವಾಹನ ನಿಲ್ಲಿಸಿ ಹೋಗಿದ್ದರು. ಜೂ.16 ರಾತ್ರಿ ಕಿಡಿಗೇಡಿಗಳು ವಾಹನಕ್ಕೆ ಬೆಂಕಿಹಚ್ಚಿದ ಪರಿಣಾಮ ಸುಟ್ಟು ಕರಕಲಾಗಿದೆ.
ಈ ಹಿನ್ನೆಲೆಯಲ್ಲಿ ವಾಹನದ ಮಾಲೀಕ ಮಾರುತಿ ರಾಜಾಯಿ, ಸಂಶಯಾಸ್ಪದವಾಗಿ ಅಶ್ವಿನ ಮಲ್ಲಪ್ಪ ಚಿಂದಿ, ನಂದು ಮಹಾದೇವ ಸಂಬಾಜಿ, ರಾಮಾ ಪರುಶರಾಮ ತೋಲಗೇಕರ, ರಾಹುಲ್ ಮಲ್ಲಪ್ಪ ರಾಜಾಯಿ, ಲೋಕೇಶ ಅರುಣ ಶಹಾಪೂರಕರ ಎಂಬುವರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.