ಜಡೇಕುಂಟೆ ಮಂಜುನಾಥ್
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕಾರಣಕ್ಕೆ ಬಂದು 50 ವರ್ಷ ತುಂಬಿದ ಹಿನ್ನೆಲೆ ಚಿತ್ರದುರ್ಗದ ದಾವಣಗೆರೆ ರಸ್ತೆಯ ಶ್ರೀ ಮಾದಾರ ಚೆನ್ನಯ್ಯ ಗುರುಪೀಠದ ಹಿಂಭಾಗದ ವಿಶಾಲ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ನಿರ್ಮಾಣ ಮಾಡಿ ಆಯೋಜಿಸಿರುವ ಅಭಿಮಾನೋತ್ಸವ ಎಂಬ ವಿನೂತನ ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳು, ಕಾರ್ಯಕರ್ತರ ವಾಹನಗಳೂ ಸೇರಿದಂತೆ ವಿಐಪಿ, ವಿವಿಐಪಿಗಳ ವಾಹನ ನಿಲುಗಡೆಯ ಸ್ಥಳಗಳಿಗೆ ನಾಡಿನ ಪ್ರಮುಖ ನದಿಗಳ ಹೆಸರುಗಳನ್ನು ಸೂಚಿಸುವ ಮೂಲಕ ಪೋಲೀಸ್ ಇಲಾಖೆ ನಾಡಿನ ಹಿರಿಮೆಯನ್ನು ಸಾರುವ ನಿಟ್ಟಿನಲ್ಲಿ ಶ್ಲಾಘನೀಯ ಕೆಲಸಕ್ಕೆ ಮುಂದಾಗಿದೆ.
ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಹಾವೇರಿ ಕಡೆಯಿಂದ ಬರುವ ವಾಹನಗಳಿಗೆ ದಾವಣಗೆರೆ ರಸ್ತೆಯ ಮಡಿವಾಳ ಮಾಚಿದೇವ ಮಠದ ಕಡೆಗೆ ವೇದಾವತಿ ವಾಹನ ನಿಲುಗಡೆ ಪ್ರದೇಶ ಎಂದು ಗುರುತಿಸಲಾಗಿದೆ.ಬೃಹತ್ ವೇದಿಕೆ ಬಲಭಾಗದ ಹಿಂಭಾಗದಲ್ಲಿ ವಿಐಪಿ, ವಿವಿಐಪಿಗಳಿಗೆ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಈ ಪ್ರದೇಶಕ್ಕೆ ಕಾವೇರಿ ಎಂದು ನಾಮಕರಣ ಮಾಡಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು ಕಡೆಗಳಿಂದ ಬರುವ ವಾಹನಗಳಿಗೆ ಈಚಲನಾಗೇನಹಳ್ಳಿ ಹತ್ತಿರ ತುಂಗಾ ಹೆಸರಿನ ನಿಲುಗಡೆ ಪ್ರದೇಶದಲ್ಲಿ ವ್ಯವಸ್ಥೆ ಮಾಡಲಾಗಿದೆ.
ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಗಿಸಿ ನೇರವಾಗಿ ಶಿವಮೊಗ್ಗದ ವಿಮಾನ ನಿಲ್ಧಾಣಕ್ಕೆ ಬಂದಿಳಿದು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗ ಪ್ರೇವೇಶಿಸಲಿದ್ದಾರೆ. ಇದಕ್ಕಾಗಿಯೇ ಮಾದಾರ ಚೆನ್ನಯ್ಯ ಮಠದ ಹತ್ತಿರ ಅಂದರೆ ಹಿಂಭಾಗದಲ್ಲಿ ವ್ಯವಸ್ಥೆ ಮಾಡಲಾಗಿದ್ದು. ಯಾವುದೇ ಸಾರ್ವಜನಿಕ ಕಿರಿಕಿರಿಗೆ ಅವಕಾಶ ನೀಡದೇ ನೇರವಾಗಿ ವೇದಿಕೆಗೆ ಕರೆತರಲಾಗುವುದು ಎಂದು ಸಂಘಟಕರು ಹೇಳಿದ್ದಾರೆ.
ಬೃಹತ್ ಕಟೌಟುಗಳು: