ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆಯಲ್ಲಿ ಮೈ ಭಾರತ್ ಕೇಂದ್ರದ ಲೆಕ್ಕ ಪರಿಶೋಧಕಿಕನ್ನಡಪ್ರಭ ವಾರ್ತೆ ಹೊನ್ನಾವರ
ಮೈ ಭಾರತ್ ಕೇಂದ್ರದ ಲೆಕ್ಕ ಪರಿಶೋಧಕಿ ಮೀರಾ ನಾಯ್ಕ ಮಾತನಾಡಿ, ಕೇಂದ್ರದ ವಿವಿಧ ಯೋಜನೆಗಳು ಹಾಗೂ ಅದರ ಪ್ರಯೋಜನಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಯುವಕರು ತಮ್ಮ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಸಮಾಜಮುಖಿ ಚಟುವಟಿಕೆಗಳಿಗೆ ಬಳಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಅವರು ಕರೆ ನೀಡಿದರು.
ಕಡಲ ಸಿರಿ ಯುವ ಸಂಘದ ಗೌರವ ಅಧ್ಯಕ್ಷ ಪ್ರಕಾಶ್ ಭೋವಿ ಮಾತನಾಡಿ, ಯುವಕರು ಹಳ್ಳಿಗಳಲ್ಲಿ ಸಂಘ ಸಂಸ್ಥೆಗಳನ್ನು ಕಟ್ಟುವ ಮೂಲಕ ಸರ್ಕಾರದಿಂದ ದೊರೆಯುವ ಸೌಲಭ್ಯಗಳು ಹಾಗೂ ಯೋಜನೆಗಳ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕೆಂದು ಹೇಳಿದರು. ಜೊತೆಗೆ ಯುವಜನತೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದರು.ಸಂಘದ ಅಧ್ಯಕ್ಷ ಅಭಿಷೇಕ ಕಳಸ ಮಾತನಾಡಿ, ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳನ್ನು ಕೇವಲ ಮನರಂಜನೆಗಾಗಿ ಮಾತ್ರವಲ್ಲದೆ ಶಿಕ್ಷಣ, ಸಂಶೋಧನೆ ಮತ್ತು ಹೊಸ ಆವಿಷ್ಕಾರಗಳಿಗೆ ಬಳಸಿಕೊಳ್ಳುವಂತೆ ಸಲಹೆ ನೀಡಿದರು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಪೋಸ್ಟರ್ ಪ್ರೆಸೆಂಟೇಶನ್ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳು ವಿಜ್ಞಾನ, ತಂತ್ರಜ್ಞಾನ, ಪರಿಸರ ಸಂರಕ್ಷಣೆ ಹಾಗೂ ಡಿಜಿಟಲ್ ಇಂಡಿಯಾ ಕುರಿತಾದ ಆಕರ್ಷಕ ಮತ್ತು ಸೃಜನಾತ್ಮಕ ಪೋಸ್ಟರ್ಗಳನ್ನು ಪ್ರದರ್ಶಿಸಿದರು. ಸ್ಪರ್ಧೆಯಲ್ಲಿ ಶ್ರೀರಕ್ಷಾ ನಾಯ್ಕ ಪ್ರಥಮ ಸ್ಥಾನ, ಲಬೀಬಾ ಫಕಾರ್ಧಿ ದ್ವಿತೀಯ ಸ್ಥಾನ ಹಾಗೂ ನಿಖಿಲ್ ನಾಯ್ಕ ತೃತೀಯ ಸ್ಥಾನ ಪಡೆದುಕೊಂಡರು. ಸುಮಾರು 25 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಶಿಕ್ಷಕಿಯರಾದ ನಿವೇದಿತಾ ಭೋಲ್ಕರ್ ಸ್ವಾಗತಿಸಿದರು. ದಿವ್ಯಾ ರೇವಣಕರ್ ವಂದಿಸಿದರು. ಮಂಜುಳಾ ಮೇಸ್ತ ನಿರೂಪಿಸಿದರು.