ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನ ಬಂಡಿಹೊಳೆ ಗ್ರಾಮದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಗ್ರಾಮದ ಸ್ನೇಹಜೀವಿ ಯುವಕರ ಬಳಗ ಆಯೋಜಿಸಿದ್ದ ಹೊನಲು ಬೆಳಕಿನ ವಾಲಿಬಾಲ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಕ್ರೀಡೆಯಿಂದ ಸಾಮಾಜಿಕ ವ್ಯವಸ್ಥೆಯಲ್ಲಿ ನೈತಿಕತೆ ವೃದ್ಧಿಯಾಗುತ್ತದೆ ಎಂದರು.
ಬುದ್ಧಿಶಕ್ತಿ ಹೆಚ್ಚಿಸಬಲ್ಲ ಅನೇಕ ಗ್ರಾಮೀಣ ಆಟಗಳು ಮರೆಯಾಗುತ್ತಿವೆ. ಕ್ರೀಡೆಯಲ್ಲಿ ಪಾಲ್ಗೊಳ್ಳುವ ಯುವಕರು ನಾಯಕತ್ವ ಬೆಳೆಸಿಕೊಂಡರೆ ಜೀವನದಲ್ಲಿ ಯಶಸ್ವಿಯಾಗಿ ರೂಪುಗೊಳ್ಳಲು ನೆರವಾಗತ್ತದೆ ಎಂದರು.ಕ್ರೀಡೆ ದೈಹಿಕ ಕಸರತ್ತು, ಅನೇಕ ಹಳ್ಳಿಗಾಡಿನ ಪ್ರತಿಭೆಗಳಿಗೆ ಅವಕಾಶ ಸಿಗುವುದಿಲ್ಲ. ಸಿಕ್ಕರೂ ಸರಿಯಾದ ಪ್ರಚಾರ, ಮಾರ್ಗದರ್ಶನದ ಕೊರತೆಯಿಂದ ಅಂಥ ಪ್ರತಿಭೆಗಳು ಹಳ್ಳಿಗಳಲ್ಲಿಯೇ ಕಮರಿ ಹೋಗುವುದರ ಜೊತೆಗೆ ಮೊಬೈಲ್, ಟಿವಿಯಿಂದ ಇಂದಿನ ಗ್ರಾಮೀಣ ಭಾಗದ ಯುವಕರು ಕ್ರೀಡೆ ಯಲ್ಲಿ ಹೆಚ್ಚು ಆಸಕ್ತಿ ತೋರುತ್ತಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮಕ್ಕಳಿಗೆ ಸಂಸ್ಕಾರ ಕಲಿಸಿ, ಸಂಸ್ಕೃತಿ ಉಳಿಸಿ: ಬಿ.ವಿ.ನಂದೀಶ್
ಮಕ್ಕಳಿಗೆ ಸಂಸ್ಕಾರ ಕಲಿಸಿ ನಮ್ಮ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ವಿ. ನಂದೀಶ್ ತಿಳಿಸಿದರು.
ಪೋಷಕರು ಇಲ್ಲದ ಅಥವಾ ಅನಾಥಾಶ್ರಮದಲ್ಲಿ ಬೆಳೆಯುವಂತಹ ಮಕ್ಕಳ ಸ್ಥಿತಿಗತಿಗಳನ್ನು ನಾವು ನೋಡಿದ್ದೇವೆ. ಇಂತಹ ಕೆಲ ಮಕ್ಕಳು ಅಪರಾಧ ಕೃತ್ಯಗಳಲ್ಲೂ ಭಾಗಿಗಳಾಗಿರುವುದನ್ನು ಕಂಡಿದ್ದೇವೆ. ಆದ್ದರಿಂದ ಮಕ್ಕಳಿಗೆ ಮೊದಲು ಸಂಸ್ಕಾರ ಕಲಿಸುವ ಮೂಲಕ ನಮ್ಮ ಸಂಸ್ಕೃತಿ ಅವರಿಗೆ ತಿಳಿಸಿ ಅದನ್ನು ಪಾಲಿಸುವಂತೆ ಮಾಡಬೇಕು ಎಂದರು.
ಭರತನಾಟ್ಯ ಪ್ರಕಾರದಲ್ಲಿ ಇಲಾಖೆ ವತಿಯಿಂದ ಕಲಾಪ್ರತಿಭೋತ್ಸವ ಸ್ಪರ್ಧಾ ಕಾರ್ಯಕ್ರಮ ಜಾರಿಗೊಳಿಸಿದೆ. ವಯಸ್ಸಿಗೆ ತಕ್ಕಂತೆ ಕಲಾ ಸ್ಪರ್ಧೆ ಮಾಡುತ್ತಿದ್ದೇವೆ. ಜಿಲ್ಲಾ ಮಟ್ಟದಿಂದ ರಾಜ್ಯ, ರಾಷ್ಟ್ರಮಟ್ಟದವರೆಗೂ ಪ್ರತಿನಿಧಿಸಲು ಅವಕಾಶ ಇದೆ. ಇದನ್ನು ಭರನಾಟ್ಯ ಕಲಾವಿದರು ಬಳಸಿಕೊಳ್ಳಬಹುದು ಎಂದು ತಿಳಿಸಿದರು.