ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಪಿಎಲ್ಡಿ ಬ್ಯಾಂಕ್ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಚುನಾವಣೆಯ ಹಿನ್ನೆಲೆಯಲ್ಲಿ ತಾಲೂಕು ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆದ್ದ ಕಾರ್ಯಕರ್ತರು ಅಥವಾ ಪರಾಭವಗೊಂಡ ಕಾರ್ಯಕರ್ತರು ಪಕ್ಷವು ತಮ್ಮನ್ನು ಗುರುತಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದರಿಂದ ಪಕ್ಷವನ್ನು ಸಂಘಟಿಸಲು ತೊಡಗಿಸಿಕೊಳ್ಳುತ್ತಾರೆ. ಇದು ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಗೆಲುವಿನ ಗುರಿ ಮುಟ್ಟಲು ಸಹಕಾರಿಯಾಗುತ್ತದೆ ಎಂದರು.ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ಸಹಕಾರ ಸಂಸ್ಥೆಗಳ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿರಲಿಲ್ಲ. ಇದು ತಳಮಟ್ಟದಲ್ಲಿ ಪಕ್ಷದ ಸಂಘಟನೆಗೆ ತೊಡಕಾಗಿತ್ತು. ಇದನ್ನು ಅರ್ಥಮಾಡಿಕೊಂಡು ಸ್ಥಳೀಯ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರಿಗೆ ಅಧಿಕಾರ ನೀಡಿ ಪಕ್ಷವನ್ನು ಗಟ್ಟಿಗೊಳಿಸಲು ತಾಲೂಕಿನಲ್ಲಿ ನಡೆಯುವ ಸೊಸೈಟಿಗಳು, ಎಪಿಎಂಸಿ, ಟಿಎಪಿಸಿಎಂಎಸ್, ಹಾಲು ಉತ್ಪಾದಕರ ಸಹಕಾರ ಸಂಘಗಳು ಸೇರಿದಂತೆ ಎಲ್ಲಾ ಸಹಕಾರ ಸಂಸ್ಥೆಗಳ ಚುನಾವಣೆಯಲ್ಲಿ ಕಡ್ಡಾಯವಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಗೆಲ್ಲಿಸಲಾಗುತ್ತಿದೆ ಎಂದರು.
ಇಲ್ಲಿ ಅವಕಾಶ ತಪ್ಪಿದವರಿಗೆ ಟಿಎಪಿಸಿಎಂಎಸ್, ಎಪಿಎಂಸಿ, ಟಿಎಪಿಸಿಎಂಎಸ್, ಜಿ.ಪಂ, ತಾ.ಪಂ.ಚುನಾವಣೆಗಳಲ್ಲಿ ಸ್ಪರ್ಧಿಸಲು ಪಕ್ಷವು ಅವಕಾಶ ಕಲ್ಪಿಸಿಕೊಡುತ್ತದೆ. ಪುರಸಭೆ, ಮುಜರಾಯಿ ಆರಾಧನಾ ಸಮಿತಿ, ಪುರಸಭೆ ಆಶ್ರಯ ಕಮಿಟಿ, ತಾ.ಪಂ.ಆಶ್ರಯ ಕಮಿಟಿ, ಎಪಿಎಂಸಿ, ಟಿಎಪಿಸಿಎಂಎಸ್, ಡಿಸಿಸಿ ಬ್ಯಾಂಕ್, ಹಾಗೂ ಸರ್ಕಾರದ ಅನುಧಾನ ಪಡೆದ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಸರ್ಕಾರಿ ನಾಮ ನಿರ್ದೇಶನ ಸದಸ್ಯರನ್ನಾಗಿ ನೇಮಕಾತಿ ಮಾಡಲು ಅವಕಾಶ ಇದೆ ಎಂದರು.
ಸಭೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಸದಸ್ಯ ಕಿಕ್ಕೇರಿ ಸುರೇಶ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ನಾಗೇಂದ್ರಕುಮಾರ್, ಹೆಚ್.ಎಸ್.ವಿಶ್ವನಾಥ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕೋಡಿಮಾರನಹಳ್ಳಿ ದೇವರಾಜು, ಹಿರೀಕಳಲೆ ರಾಮದಾಸ್, ಎಲ್.ಕೆ.ಮಂಜುನಾಥ್, ತಾಲ್ಲೂಕು ಕಾಂಗ್ರೆಸ್ ಎಸ್.ಸಿ ವಿಭಾಗದ ಅಧ್ಯಕ್ಷ ರಾಜಯ್ಯ, ಶಿವಣ್ಣ, ಎಲ್.ಪಿ.ನಂಜಪ್ಪ ಇತರರಿದ್ದರು.