ಯಕ್ಷಗಾನ ಕಲಾರಂಗಕ್ಕೆ ಶೀರೂರು ಶ್ರೀ ಭೇಟಿ

KannadaprabhaNewsNetwork |  
Published : Jan 14, 2026, 04:00 AM IST
ಶಿರೂರು ಶ್ರೀಗಳು ದೀಕ್ಷಾ ರಾಮಕೃಷ್ಣಗೆ ಸನ್ಮಾನಿಸಿದರು | Kannada Prabha

ಸಾರಾಂಶ

ಉಡುಪಿಯಲ್ಲಿ 18 ರಂದು ಸರ್ವಜ್ಞ ಪೀಠಾರೋಹಣ ಮಾಡಲಿರುವ, ಭಾವಿ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಇಲ್ಲಿನ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣಕ್ಕೆ ಆಗಮಿಸಿದರು.

ಉಡುಪಿ: ಉಡುಪಿಯಲ್ಲಿ 18 ರಂದು ಸರ್ವಜ್ಞ ಪೀಠಾರೋಹಣ ಮಾಡಲಿರುವ, ಭಾವಿ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಇಲ್ಲಿನ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣಕ್ಕೆ ಆಗಮಿಸಿದರು.ಶ್ರೀಗಳನ್ನು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ್ ರಾವ್ ನೇತೃತ್ವದಲ್ಲಿ ಹಾರ, ಫಲವಸ್ತು, ಪಾದಕಾಣಿಕೆ ನೀಡಿ ಗೌರವಿಸಲಾಯಿತು. ಸ್ವಾಮೀಜಿ ಅವರು ಸಂಸ್ಥೆಯ ಚಟುವಟಿಕೆ ಮೆಚ್ಚಿ ಹರಸಿದರು.ಕಳೆದ ವಾರ ಪುರಂದರದಾಸರ ಹಾಡನ್ನು ಹಾಡುತ್ತ, ನೃತ್ಯ ಮಾಡಿ, ವರ್ಲ್ಡ್‌ ಬುಕ್ ಆಫ್ ಗಿನ್ನೆಸ್ ನಲ್ಲಿ ದಾಖಲೆಗೈದ, ಹೆಜ್ಜೆ ಗೆಜ್ಜೆ ಸಂಸ್ಥೆಯ ವಿದುಷಿ ದೀಕ್ಷಾ ರಾಮಕೃಷ್ಣ ಇವರನ್ನು ಸ್ವಾಮೀಜಿ ಯಕ್ಷಗಾನ ಕಲಾರಂಗ ವತಿಯಿಂದ ಅಭಿನಂದಿಸಿ, ಅನುಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ಕುರಿತು ಇಂದು ರಾಜ್ಯ ವಿಶೇಷ ಸಂಪುಟ ಸಭೆ
ಫೆ.13ಕ್ಕೆ ಕಾಂಗ್ರೆಸ್‌ ಸರ್ಕಾರಕ್ಕೆ 1000 ದಿನ