ಕನ್ನಡಪ್ರಭ ವಾರ್ತೆ, ಔರಾದ್
ಶುಕ್ರವಾರ ಇಲ್ಲಿನ ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಸಾರ್ವಜನಿಕ ಕುಂದು ಕೊರತೆಗಳ ಜನಸ್ಪಂದನ ಸಭೆ ಮತ್ತು ಗ್ಯಾರಂಟಿ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾನೂ ಕೂಡಾ ಅಪ್ಪಟ ದೇಶ ಭಕ್ತನೇ ಇದ್ದೇನೆ. ನಮ್ಮ ತಂದೆ ಸ್ವಾತಂತ್ರ್ಯ ಹೋರಾಟಗಾರರು ಎಂದು ಬಿಜೆಪಿಗೆ ಕುಟುಕಿದರು.
ಜನ ಸಾಮಾನ್ಯನಿಗೆ ಸ್ಪಂದಿಸುವ ಆಡಳಿತ ನೀಡುವ ಮೂಲಕ ಬಡವರ ಏಳ್ಗೆಗೆ ಶ್ರಮಿಸುತ್ತಿರುವ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳೆಲ್ಲ ಜಾರಿಯಾಗಿ ನುಡಿದಂತೆ ನಡೆದಿದ್ದೇವೆ. ಚುನಾವಣಾ ಪೂರ್ವದಲ್ಲಿಯ ಎಲ್ಲಾ ಭರವಸೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ನಮ್ಮ 5 ಮಹತ್ವಾಕಾಂಕ್ಷಿ ಯೋಜನೆಗಳಿಂದ ಸಾಮಾನ್ಯ ಜನರು. ಬಡವರು ಹಾಗೂ ಮಧ್ಯಮ ವರ್ಗದವರಿಗೆ ಅನುಕೂಲವಾಗಲಿದೆ ಎಂದರು.ಗೃಹಲಕ್ಷ್ಮಿ ಯೋಜನೆ ಲಾಭವನ್ನು ನಮ್ಮ ಜಿಲ್ಲೆಯಲ್ಲಿ 3.5ಲಕ್ಷ ಮಹಿಳೆಯರು ಪಡೆಯುತ್ತಿದ್ದಾರೆ. ತಿಂಗಳಿಗೆ 70 ಕೋಟಿ. ವರ್ಷಕ್ಕೆ 800 ಕೋಟಿ ರು.ಗಳು ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿದೆ ಮತ್ತು ಗೃಹಜ್ಯೋತಿ ಯೋಜನೆ ಅಡಿಯಲ್ಲಿ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುತ್ತಿದ್ದೇವೆ. ಅನ್ನಭಾಗ್ಯ ಯೋಜನೆಯಡಿ ತಿಂಗಳಿಗೆ 650 ಕೋಟಿ ರು. ವರ್ಷಕ್ಕೆ 7 ಸಾವಿರ ಕೋಟಿ ರು. ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 1.07ಲಕ್ಷ ಮಹಿಳೆಯರು ಪ್ರತಿದಿನ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ ಎಂದರು.
ಯುವಕರು ನಮ್ಮ ಸಂಪತ್ತು. ಹಾಗಾಗಿ ಪದವಿ ಹಾಗೂ ಡಿಪ್ಲೊಮಾ ಮುಗಿಸಿ 6 ತಿಂಗಳವರೆಗೆ ಉದ್ಯೋಗ ಸಿಗದವರಿಗೆ 2 ವರ್ಷಗಳವರೆಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತಿದ್ದು ಈಗಾಗಲೇ ಬೀದರ್ ಜಿಲ್ಲೆಯಲ್ಲಿ 5 ಸಾವಿರ ಯುವಕರು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
ಔರಾದ್ಗೆ 100ಕೋಟಿ ರು. :
ಇದೇ ಸಂದರ್ಭದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆದ ಫಲಾನುಭವಿಗಳಿಗೆ ಸಚಿವರು ಹಕ್ಕು ಪತ್ರಗಳನ್ನು ವಿತರಿಸಿ. ಸಾರ್ವಜನಿಕರ ಅಹವಾಲುಗಳಾದ ಮನೆ ಮಂಜೂರಾತಿ. ವಿವಿಧ ಗ್ರಾಮಗಳಿಗೆ ಸ್ಮಶಾನ ಭೂಮಿ, ವಿಧವೆಯರಿಗೆ ಮಾಶಾಸನ, ಉದ್ಯೋಗಿನಿ ಯೋಜನೆ ಅಡಿಯಲ್ಲಿ ಸಾಲ ಮಂಜೂರಾತಿ. ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆ. ಕುಡಿಯುನ ನೀರಿನ ಸಮಸ್ಯೆ ಸೇರಿದಂತೆ ಇತರೆ ಹಲವಾರು ಅಹವಾಲುಗಳನ್ನು ಸಾರ್ವಜನಿಕರಿಂದ ಸ್ವೀಕರಿಸಿ ಸಚಿವರು ಅವುಗಳಿಗೆ ಪರಿಹಾರ ನೀಡುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.