ಪಾಡಿ ಇಗ್ಗುತಪ್ಪ ದೇವಾಲಯದಲ್ಲಿ ಪತ್ತಾಲೋಧಿ ಆರಾಧನೆ ಉತ್ಸವ ಸಂಪನ್ನ

KannadaprabhaNewsNetwork |  
Published : Oct 31, 2025, 03:15 AM IST
ನಾಪೋಕ್ಲುಸಮೀಪದ ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ಉತ್ಸವ ಮೂರ್ತಿಯೊಂದಿಗೆ ದೇವರ ನೃತ್ಯ ಬಲಿ ಜರುಗಿತು.27-ಎನ್ ಪಿ ಕೆ-2,ಕಕ್ಕಬ್ಬೆಯಪಾಡಿ ಶ್ರೀ ಇಗ್ಗುತಪ್ಪ ದೇವಾಲಯ ಹಾಗೂ ಗರ್ಭಗುಡಿಯನ್ನು ಪುಷ್ಪಗಳಿಂದ ಅಲಂಕರಿಸಲಾಗಿತ್ತು. | Kannada Prabha

ಸಾರಾಂಶ

ಪತ್ತಾಲೋಧಿ ಆರಾಧನೋತ್ಸವ ಕಕ್ಕಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಸಂಪನ್ನಗೊಂಡಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಕಾವೇರಿ ತೀರ್ಥೋದ್ಭವ ಕಳೆದು ಪವಿತ್ರ ತುಲಾ (ತೋಲ್ಯಾರ್) ಮಾಸದ ಹತ್ತನೇ ದಿನದ ಉತ್ಸವ ಪತ್ತಾಲೋಧಿ ಆರಾಧನೋತ್ಸವ ಸೋಮವಾರ ಕಕ್ಕಬೆಯ ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ಶ್ರದ್ಧಾ ಭಕ್ತಿಯಿಂದ ಸಂಪನ್ನಗೊಂಡಿತ್ತು.

ದೇವಾಲಯದಲ್ಲಿ ಪರದಂಡ ಕುಟುಂಬಸ್ಥರು ಪತ್ತಾಲೋಧಿ ಉತ್ಸವ ನೆರವೇರಿಸಿದರು .ಈ ಸಂದರ್ಭ ಸೇರಿದ ಭಕ್ತಾದಿಗಳು

ತಮ್ಮ ಇಷ್ಟಾರ್ಥ ಸಿದ್ದಿಗೆ ವಿಶೇಷ ಪೂಜೆ, ಮಹಾಪೂಜೆ ಸತ್ಯನಾರಾಯಣ ಪೂಜೆ, ತುಲಾಭಾರ ಸೇವೆ ಸಲ್ಲಿಸಿದರು. ಉತ್ಸವದ ಅಂಗವಾಗಿ ದೇವಾಲಯ ಹಾಗೂ ಗರ್ಭಗುಡಿಯನ್ನು ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಉತ್ಸವ ಮೂರ್ತಿಯೊಂದಿಗೆ ದೇವರ ನೃತ್ಯ ಬಲಿ ಜರುಗಿತು. ಈ ಸಂದರ್ಭ ದೇವಾಲಯದ ಭಕ್ತ ಜನ ಸಂಘದ ಅಧ್ಯಕ್ಷರೂ ದೇವತಕ್ಕರೂ ಆಗಿರುವ ಪರದಂಡ ಸುಬ್ರಮಣಿ ಕಾವೇರಪ್ಪ ವಿಶೇಷ ಪ್ರಾರ್ಥನೆ ಸಲ್ಲಿಸಿ ನಾಡಿನ ಎಲ್ಲ ಸಮುದಾಯದ ಭಕ್ತವೃಂದಕ್ಕೆ ಕ್ಷೇಮಾಭಿವೃದ್ಧಿ ಬೆಳೆ ರಕ್ಷಣೆ, ಸುಖ ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸಾಮೂಹಿಕ ಅನ್ನ ಸಂತರ್ಪಣೆ ನಡೆಯಿತು. ಕಕ್ಕಬ್ಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯ ಸೇರಿದಂತೆ ಪೇರೂರು, ನೆಲಜಿ ಗ್ರಾಮಗಳ ಇಗ್ಗುತ್ತಪ್ಪ ದೇವಾಲಯಗಳಲ್ಲೂ ಪತ್ತಲೋಧಿ ಉತ್ಸವ ಸಂಭ್ರಮದಿಂದ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಸಕ್ಕೆ ಬೆಂಕಿ: ಹೊಗೆಯಿಂದ ಮನೆಯಲ್ಲಿ ಉಸಿರಾಡಲು ಆಗುತ್ತಿಲ್ಲ:ನಟಿ ಐಂದ್ರಿತಾ
ಕಟ್ಟುನಿಟ್ಟು ಮಾಡಿದರೂ ನಿಲ್ಲದ ಪರಪ್ಪನ ಅಗ್ರಹಾರ ಪವಾಡ