ಕನ್ನಡಪ್ರಭ ವಾರ್ತೆ ಮಂಗಳೂರು
ಈ ದ್ವೀಪ ಪ್ರದೇಶವು ಹಚ್ಚ ಹಸುರಿನಿಂದ ಕೂಡಿದ್ದು, ನೈಸರ್ಗಿಕವಾಗಿ ಸೂಕ್ಷ್ಮ ಪ್ರದೇಶವೂ ಹೌದು. ಆದರೆ ಹಲವು ವರ್ಷಗಳಿಂದ ಈ ಭಾಗದಲ್ಲಿ ಅವ್ಯಾಹತವಾಗಿ ಮರಳುಗಾರಿಕೆಯಿಂದ ವರ್ಷದಿಂದ ವರ್ಷಕ್ಕೆ ದ್ವೀಪ ಪ್ರದೇಶ ಸಣ್ಣದಾಗುತ್ತಾ ಸಾಗುತ್ತಿದ್ದು, ಮೂರು ತಲೆಮಾರುಗಳಿಂದ ಇಲ್ಲೇ ನೆಲೆಸುತ್ತಿರುವ ಕುಟುಂಬಗಳ ಜೀವನಕ್ಕೇ ಸಂಚಕಾರ ತಂದಿದೆ. ಇಲ್ಲಿನ ಈ ಸಮಸ್ಯೆ ಬಗ್ಗೆ ಜಿಲ್ಲಾಡಳಿತ ಸೇರಿದಂತೆ ಸಂಬಂಧಫಟ್ಟವರಿಗೆ ಮನವಿ ನೀಡಲಾಗುತ್ತಿದ್ದರೂ ಸ್ಪಂದನೆ ಸಿಕ್ಕಿಲ್ಲ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಬೇಕು ಎಂದು ನಿವಾಸಿಗರು ಆಗ್ರಹಿಸಿದ್ದಾರೆ.
ಅರ್ಧದಷ್ಟು ದ್ವೀಪ ನೀರುಪಾಲು!:ಸ್ಥಳೀಯರಾದ ಗಿಲ್ಬರ್ಟ್ ಡಿಸೋಜ ಮಾತನಾಡಿ, ಸುಮಾರು 100 ಎಕರೆಯಷ್ಟಿದ್ದ ಪಾವೂರು ಉಳಿಯ ದ್ವೀಪ ಪ್ರದೇಶ ಅಕ್ರಮ ಮರಳು ದಂಧೆಯಿಂದಾಗಿ ಪ್ರಸಕ್ತ ಅರ್ಧದಷ್ಟುನೀರು ಪಾಲಾಗಿದೆ. ಕೆಲ ವರ್ಷಗಳ ಹಿಂದೆ ಎ.ಬಿ. ಇಬ್ರಾಹಿಂ ಜಿಲ್ಲಾಧಿಕಾರಿಯಾಗಿದ್ದಾಗ ಅಧಿಕಾರಿಗಳ ಜತೆ ಇಲ್ಲಿಗೆ ಭೇಟಿ ನೀಡಿ, ವಳಚ್ಚಿಲ್, ಪಾವೂರು, ಗಾಡಿಗದ್ದೆ, ಸಹ್ಯಾದ್ರಿ ಕಾಲೇಜಿನ ಹಿಂಭಾಗ ಸೇರಿ ಮೂರು ಪ್ರದೇಶಗಳಲ್ಲಿ ಮರಳುಗಾರಿಕೆಯ ದಕ್ಕೆಯನ್ನು ಬಂದ್ ಮಾಡಿ ನಿಷೇಧಾಜ್ಞೆ ಹೊರಡಿಸಿದ್ದರು. ಕೆಲ ವರ್ಷಗಳ ಕಾಲ ಮರಳು ದಂಧೆ ಸ್ಥಗಿತಗೊಂಡಿತ್ತು. ಮತ್ತೆ ಕೆಲ ವರ್ಷಗಳಿಂದೀಚೆಗೆ ಆರಂಭವಾಗಿದ್ದು, ಈ ನಿಷೇಧಾಜ್ಞೆಯ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಕ್ರಮವಾಗುತ್ತಿಲ್ಲ ಎಂದು ತಿಳಿಸಿದರು.
ಪಾವೂರು ಉಳಿಯ ಪ್ರದೇಶಕ್ಕೆ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜತೆ ಅಡ್ಯಾರು ಮೂಲಕ ದೋಣಿಯಲ್ಲಿ ಸಾಗಿದ ಸಮಾನಮನಸ್ಕ ಸಂಘಟನೆಗಳ ನಿಯೋಗವು ದ್ವೀಪದ ಸಾಕಷ್ಟು ಭೂಭಾಗ ಮರಳುಗಾರಿಕೆಯಿಂದ ಮಾಯವಾಗಿರುವುದನ್ನು ವೀಕ್ಷಿಸಿತು. ಅಲ್ಲದೆ ಹಾರೆಯ ಮೂಲಕ ದ್ವೀಪದ ಭಾಗವನ್ನು ಕೊರೆದು ಮರಳು ತೆಗೆಯುತ್ತಿರುವ ಕುರುಹುಗಳೂ ಕಂಡು ಬಂದಿವೆ. ದೋಣಿಯೊಂದು ಹಗಲಲ್ಲೇ ಅಕ್ರಮವಾಗಿ ಮರಳುಗಾರಿಕೆಗೆ ಆಗಮಿಸಿದ್ದು ಕಂಡುಬಂತು. ನೇತ್ರಾವತಿ ನದಿಯ ವಳಚ್ಚಿಲ್ ಪ್ರದೇಶದ ದಕ್ಕೆಯಲ್ಲಿ ಕ್ರೇನ್ ಮೂಲಕ ವಾಹನಗಳಿಗೆ ಮರಳು ತುಂಬಿಸಲಾಗುತ್ತಿತ್ತು. ದ್ವೀಪದ ಸುತ್ತಲಿನ ಪ್ರದೇಶಗಳಲ್ಲಿ ಲೋಡ್ಗಟ್ಟಲೆ ಮರಳು ಸಂಗ್ರಹಿಸಿಡಲಾಗಿತ್ತು. ಶಾಶ್ವತ ಸೇತುವೆ ಮರೀಚಿಕೆ: