ಕನ್ನಡಪ್ರಭ ವಾರ್ತೆ, ಭದ್ರಾವತಿ
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2010-11ನೇ ಸಾಲಿನಲ್ಲಿ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ ₹1800 ದರ ನಿಗದಿ ಮಾಡಲಾಗಿತ್ತು. ಆದರೆ, ರೈತರ ಒತ್ತಾಯದ ಮೇರೆಗೆ ₹100 ಹೆಚ್ಚುವರಿಯಾಗಿ ₹1900 ನಿಗದಿಪಡಿಸಲಾಯಿತು. ಆದರೆ, ದಶಕ ಕಳೆದರೂ ಈ ಹೆಚ್ಚುವರಿ ಹಣ ಪಾವತಿಯಾಗಿಲ್ಲ ಎಂದರು.
ಅಂದಿನ ಮುಖ್ಯಮಂತ್ರಿ ಸದಾನಂದಗೌಡ ಅವರು ರೈತರಿಗೆ ಪ್ರತಿ ಟನ್ ಕಬ್ಬಿಗೆ ₹100 ಪಾವತಿಸುವಂತೆ ಆದೇಶಿಸಿದ್ದಾರೆ. ಮಂಡ್ಯ ಮೈ ಶುಗರ್ ಕಾರ್ಖಾನೆಗೆ ಕಬ್ಬು ಪೂರೈಸಿದ ಬೆಳೆಗಾರರಿಗೆ ಹೆಚ್ಚುವರಿ ಹಣ ಪಾವತಿಯಾಗಿದೆ. ಆದರೆ, ಎಂಪಿಎಂ ಕಾರ್ಖಾನೆಗೆ ಕಬ್ಬು ಪೂರೈಸಿದ ಬೆಳೆಗಾರರಿಗೆ ಹಣ ಪಾವತಿಯಾಗಿಲ್ಲ. ಒಟ್ಟು 4825 ಕಬ್ಬು ಬೆಳೆಗಾರರಿಗೆ ₹2.94 ಕೋಟಿ ಹಣ ವಿತರಣೆಯಾಗಬೇಕಿದೆ ಎಂದು ತಿಳಿಸಿದರು.ಈ ಸಂಬಂಧ ನಿರಂತರ ಹೋರಾಟ ನಡೆಸಲಾಗುತ್ತಿದೆ. ಅನಂತರ ಬಂದ ಸಿಎಂಗಳಾದ ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರಿಗೂ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ. ಆದರೆ, ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿಷಾದಿಸಿದರು. ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರಿಗೂ ಮನವಿ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರ ಹಾಗು ಸಿದ್ದರಾಮಯ್ಯ ಅವರಿಗೆ ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಕೂಡಲೇ ಹಣ ಪಾವತಿಸಿ ಸಮಸ್ಯೆ ಬಗೆಹರಿಸಲಿ ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಕೆ.ಈರಣ್ಣ, ಕಾರ್ಯದರ್ಶಿ ಪ್ರಸನ್ನಕುಮಾರ್, ನಿರ್ದೇಶಕರಾದ ಶಿವರಾಂ, ಪುಟ್ಟಸ್ವಾಮಿಗೌಡ, ಸುಂದರರಾಜ್, ನಾಗರಾಜ್, ಶಂಕರ್ ಮತ್ತಿತರರು ಹಾಜರಿದ್ದರು.
ಭದ್ರಾವತಿಯ ಪತ್ರಿಕಾ ಭವನದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘ, ಗು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.