-ತುಮಕೂರು ಗ್ರಾಮದ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿದ ಹಸಿರು ಸೇನೆ ಜಿಲ್ಲಾಧ್ಯಕ್ಷ
-10 ದಿನಗಳೊಳಗೆ ರೈತರ ಬಾಕಿ ಹಣ ಪಾವತಿಸುವಂತೆ ಒತ್ತಾಯ
----ಕನ್ನಡಪ್ರಭ ವಾರ್ತೆ ವಡಗೇರಾ
ಗುರುವಾರ ತಾಲೂಕಿನ ತುಮಕೂರು ಗ್ರಾಮದ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಅವರು ಮಾತನಾಡಿದರು.
ರೈತರು ಸಾಲ ಮಾಡಿ ಕಬ್ಬಿನ ಬೆಳೆ ಬೆಳೆದಿದ್ದಾರೆ. ಸಕಾಲಕ್ಕೆ ಹಣ ಪಾವತಿ ಮಾಡುತ್ತಾರೆ ಎಂದು ತಿಳಿದು ಇಲ್ಲಿಯೆ ಕಬ್ಬು ಮಾರಾಟ ಮಾಡಿದ್ದಾರೆ. ಆದರೆ, ಕಾರ್ಖಾನೆ ಮಂಡಳಿಯವರು ಸರಿಯಾದ ಸಮಯಕ್ಕೆ ಹಣ ನೀಡದೆ ಸತಾಯಿಸುತ್ತಿದ್ದು, ಇದರಿಂದ ರೈತರ ಉಪಜೀವನಕ್ಕೆ ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಆಡಳಿತ ಮಂಡಳಿಯವರು ರೈತರ ಕಬ್ಬಿನ ಬಾಕಿ ಹಣವನ್ನು ಪಾವತಿಸಬೇಕು. ಒಂದು ವೇಳೆ ನಿರ್ಲಕ್ಷ ವಹಿಸಿದ್ದಲ್ಲಿ ರೈತ ಸಂಘದ ವತಿಯಿಂದ ಸಕ್ಕರೆ ಕಾರ್ಖಾನೆಗೆ ಬೀಗ ಜಡಿದು ಉಗ್ರ ಹೋರಾಟ ಮಾಡುವುದಾಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಶರಣಪ್ಪ ಸಾಹುಕಾರ ತಡಿಬಿಡಿ, ತಾಲೂಕು ಅಧ್ಯಕ್ಷ ವಿದ್ಯಾಧರ್ ಜಾಕಾ, ಗೌರವಾಧ್ಯಕ್ಷ ಶರಣು ಜಡಿ, ಹಳ್ಳೆಪ್ಪ ತೇಜೇರ, ತಿರುಮಲ ಮುಸ್ತಾಜೀರ್, ಮುಕ್ಕಣ್ಣ ಮುನಮುಟಗಿ ಇನ್ನಿತರ ರೈತ ಸಂಘದ ಮುಖಂಡರು ಎಚ್ಚರಿಸಿದರು.
-----
ರೈತರು ಸಾಲ ಮಾಡಿ ಕಬ್ಬಿನ ಬೆಳೆ ಬೆಳೆದಿದ್ದಾರೆ. ಸಕಾಲಕ್ಕೆ ಹಣ ಪಾವತಿ ಮಾಡುತ್ತಾರೆ ಎಂದು ತಿಳಿದು ಇಲ್ಲಿಯೆ ಕಬ್ಬು ಮಾರಾಟ ಮಾಡಿದ್ದಾರೆ. ಆದರೆ, ಕಾರ್ಖಾನೆ ಮಂಡಳಿಯವರು ಸರಿಯಾದ ಸಮಯಕ್ಕೆ ಹಣ ನೀಡದೆ ಸತಾಯಿಸುತ್ತಿದ್ದು, ಇದರಿಂದ ರೈತರ ಉಪಜೀವನಕ್ಕೆ ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಆಡಳಿತ ಮಂಡಳಿಯವರು ರೈತರ ಕಬ್ಬಿನ ಬಾಕಿ ಹಣವನ್ನು ಪಾವತಿಸಬೇಕು. ಒಂದು ವೇಳೆ ನಿರ್ಲಕ್ಷ ವಹಿಸಿದ್ದಲ್ಲಿ ರೈತ ಸಂಘದ ವತಿಯಿಂದ ಸಕ್ಕರೆ ಕಾರ್ಖಾನೆಗೆ ಬೀಗ ಜಡಿದು ಉಗ್ರ ಹೋರಾಟ.
ವಡಗೇರಾ ತಾಲೂಕಿನ ತುಮಕೂರು ಗ್ರಾಮದ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಗೆ ರೈತ ಸಂಘದ ಮುಖಂಡರು ಭೇಟಿ ನೀಡಿದರು.